HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...