HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...