HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...