HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...