HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...