Homeಮುಖಪುಟಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

- Advertisement -
- Advertisement -

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಆತ್ಮವಾಗಿದೆ. ಅಮೇರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನಕ್ಕೆ ಉಂಟು ಮಾಡಿದ ಮೊದಲ ತಿದ್ದುಪಡಿ ‘ಕಾಂಗ್ರೆಸ್ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನನ್ನು ರೂಪಿಸಬಾರದು’ ಎಂದು ತಿಳಿಸುತ್ತದೆ. ಯೂರೋಪಿನ ಬಹಳಷ್ಟು ರಾಷ್ಟ್ರಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜೆಗಳು ಸಂವಿಧಾನದತ್ತವಾಗಿ ನಿರಾತಂಕವಾಗಿ ಅನುಭವಿಸುತ್ತಾರೆ. ಭಾರತದಲ್ಲಿ ಅನುಚ್ಛೇದ-19-(1-ಎ) ಎಲ್ಲ ಪ್ರಜೆಗಳಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ 19(ಬಿ) ಕೆಲವು ಅರ್ಥಪೂರ್ಣ ನಿರ್ಬಂಧಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಜೆಗಳ ಮೇಲೆ ಹೇರಿರುವುದು ಔಚಿತ್ಯಪೂರ್ಣವಾಗಿದೆ.

ಅವಕಾಶವಂಚಿತ ಹಾಗೂ ದಮನಿತ ತಳಸಮುದಾಯಗಳನ್ನು ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ಪ್ರಗತಿಪರ ಜನಾಂದೋಲನಗಳನ್ನು ಸಂಘಟಿಸಲು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕುಗಳು ಸಹಕಾರಿಯಾಗಿವೆ. ಭಾರತದಂತಹ ಬಹುತ್ವ ಕೇಂದ್ರಿತ ದೇಶದಲ್ಲಿ ಅಕ್ಷರ ಸಂಸ್ಕೃತಿ ಮತ್ತು ಅಭಿವೃದ್ಧಿ ಅವಕಾಶಗಳಿಂದ ವಂಚಿತರಾಗಿರುವ ತಳಸಮುದಾಯಗಳ ಜನರನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯವಶ್ಯಕ. ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮ ಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಪ್ರತಿಭಟಿಸುವ ಧ್ವನಿಗಳನ್ನು ಹತ್ತಿಕ್ಕುವುದರ ಮೂಲಕ ಸಾಂವಿಧಾನಿಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಆಶಯಗಳನ್ನು ದುರ್ಬಲಗೊಳಿಸುತ್ತಿವೆ.

ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಸಮಾನತೆಗಳಿಗೆ ವಿರುದ್ಧವಾಗಿರುವ ಮೂಲಭೂತವಾದಿಗಳ ಆಳ್ವಿಕೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ತಗ್ಗಿಸಿದೆ. ಪ್ರಜೆಗಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದ ತಪ್ಪು ನೀತಿಗಳು ಮತ್ತು ಕ್ರಮಗಳನ್ನು ಪ್ರತಿಭಟಿಸುವವರ ಮೇಲೆ ಮೊಕದ್ದಮೆಗಳನ್ನು ಹೂಡಿ ಅವರ ನೈತಿಕಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಎಗ್ಗಿಲ್ಲದೆ ಸರ್ಕಾರದ ಬೆಂಬಲದಿಂದ ನಡೆಯುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಗತಿಪರರು ಮತ್ತು ಹೋರಾಟಗಾರರು ದೇಶದಾದ್ಯಂತ ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರದಾದ್ಯಂತ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ಜರುಗಿದ್ದವು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಆಂದೋಲನವನ್ನು ಅಧಿಕಾರ ಬಲದಿಂದ ಮಟ್ಟ ಹಾಕುವುದರಲ್ಲಿ ಸರಕಾರ ಯಶಸ್ವಿಯಾಯಿತು.

ಸವೋಚ್ಛ ನ್ಯಾಯಾಲಯ ಅನುರಾಧ ಭಾಷಿನ್ v/s ಯೂನಿಯನ್ ಆಫ್ ಇಂಡಿಯಾ ಮತ್ತಿತರರು ಪ್ರಕರಣದಲ್ಲಿ ಅಂತರ್ಜಾಲ ಬಳಕೆ ಅನುಚ್ಛೇದ-19(1)(ಎ) ಅನ್ವಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೊಳಪಡುತ್ತದೆಂದು ತೀರ್ಪು ನೀಡಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ನೀಡಿರುವ ತೀರ್ಪು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸಿದೆ. ಸುಮಾರು 100 ದಿನಗಳಿಂದಲೂ ಲಕ್ಷಾಂತರ ಅನ್ನದಾತರು ಮೂರು ರೈತವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರವೇ ಬಹುದೊಡ್ಡ ಅಡ್ಡಗಲ್ಲಾಗಿದೆ.

ಪ್ರಜಾಪ್ರಭುತ್ವದ ರಕ್ಷಕರಿಗೆ ಇಂತಹ ದುಸ್ಥಿತಿ ಉಂಟಾಗಿರುವುದನ್ನು ಜಾಗತಿಕ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ರಾಜಧರ್ಮದ ಅರಿವು ಮತ್ತು ಸಂವಿಧಾನಕ್ಕೆ ಗೌರವ ಇಲ್ಲದವರು ಅಧಿಕಾರಕ್ಕೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತೆಗಳಿಗೆ ಗಂಡಾಂತರ ಖಂಡಿತ.

ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಗಳಿಗೆ ಶರಣಾಗಿರುವ ಮಾಧ್ಯಮದ ಒಂದು ವರ್ಗ ತಾನು ನಿಷ್ಟೆ ತೋರಿಸಬೇಕಾದ ಜನರ ವಿರುದ್ಧವೇ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಈ ವರ್ಗ ರೈತರು, ಅಲ್ಪಸಂಖ್ಯಾತರು ಮಾತ್ರವಲ್ಲ ಬಹುಸಂಖ್ಯಾತ ಜನರಿಗೂ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ಮಾಧ್ಯಮದ ಈ ವರ್ಗ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸರಕಾರದ ಕ್ರಮಗಳ ಬಗ್ಗೆ ಮಾತಾಡುವುದೇ ಇಲ್ಲ. ಆಳುವವರು ಪ್ರಜೆಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಮರ್ಶಕ ನೋಟವನ್ನು ಕಳಕೊಂಡು ಒಂದು ರೀತಿಯ ಅಮಲಿನ ಸ್ಥಿತಿಯಲ್ಲಿರಬೇಕೆಂದು ನಮ್ಮನ್ನು ಇಂದು ಆಳುತ್ತಿರುವವರು ಅಪೇಕ್ಷಿಸುತ್ತಿದ್ದಾರೆ. ಅಬ್ಬರದ ದೇಶಪ್ರೇಮ ಕರೋನಾ ವೈರಾಣುವಿಗಿಂತ ಭಯಂಕರವೆಂಬುದನ್ನು ನಾವಿಂದು ಅರಿತುಕೊಳ್ಳಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದ ಭಾರತೀಯ ಪ್ರಜಾಪ್ರಭುತ್ವ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಅನ್ಯಾಯದ ವಿರುದ್ಧ ನಮ್ಮ ಅಸಂವೇದನೆಯೂ ಹೆಚ್ಚುತ್ತಾ ಹೋಗುತ್ತಿರುವ ಪ್ರವೃತ್ತಿಗೆ ನಾವಿಂದು ಮೂಕಸಾಕ್ಷಿಗಳಾಗಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿ ಸೆರೆವಾಸ ಅನುಭವಿಸುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ವರವರ ರಾವ್, ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖಾ, ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವನ್ಸ್, ಅರುಣ್ ಫೆರಿರಾ, ಸ್ಟಾನ್ ಸ್ವಾಮಿ, ಉಮರ್ ಖಾಲಿದ್, ಸಿದ್ದೀಖ್ ಕಪ್ಪನ್, ಕ್ರಾಂತಿ ತೇಕುಲ, ಕೆ.ವಿ.ಕುರ್ಮನಾಥ್ ಇವರಲ್ಲಿ ಪ್ರಮುಖರಾದವರು ಮಾನವ ಹಕ್ಕುಗಳ ಕಾರ್ಯಕರ್ತರ ಇತ್ತೀಚಿನ ಬಂಧನಗಳು ಭಾರತದಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿಯೇ ಪ್ರಮುಖ ಕಾರಣವಾಗಿದೆ.

ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನೀತಿ ಮತ್ತು ಕ್ರಮಗಳನ್ನು ರಚನಾತ್ಮಕವಾಗಿ ಟೀಕಿಸುವುದು ದೇಶದ್ರೋಹವಲ್ಲ ಎಂದು ಖಚಿತವಾಗಿ ತೀರ್ಮಾನಿಸಿರುವುದು ಸರಿಯಾಗಿದೆ.

ಭಾರತದಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಕೃಷಿ ಮಸೂದೆ, ಕಾರ್ಮಿಕ ಕಾಯ್ದೆ, ಸನಾತನ ಆಡಳಿತ, ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಮೊದಲಾದವುಗಳನ್ನು ವಿರೋಧಿಸುವ ಧ್ವನಿಗಳನ್ನು ದಮನಿಸುವ ಪ್ರಯತ್ನ ಎಲ್ಲೆಡೆ ಕಂಡುಬರುತ್ತಿದೆ. ಮಾಧ್ಯಮಗಳೂ ಕೂಡ ಬಂಡವಾಳ, ಮಾರುಕಟ್ಟೆ ಮತ್ತು ಶಕ್ತಿರಾಜಕಾರಣಕ್ಕೆ ಮರುಳಾಗಿವೆ. ಕಾರ್ಪೋರೇಟ್ ಉದ್ಯಮಿಗಳು ವ್ಯಾಪಾರಿ ಧರ್ಮವನ್ನು ಅನುಸರಿಸಿ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೃತ್ತಿಧರ್ಮಗಳನ್ನು ಕಡೆಗಣಿಸಿವೆ. ಅಲಕ್ಷಿತ ಜನವರ್ಗಗಳ ಜೀವಕ್ಕೆ ಬೆಲೆ ನೀಡುವ ಮಾನವೀಯ ದೃಷ್ಟಿಕೋನ ನಮ್ಮನ್ನು ಆಳುವವರಿಗೆ ಇಲ್ಲವಾಗಿದೆ. ಅಘೋಷಿತ ತುರ್ತುಪರಿಸ್ಥಿತಿ ಮತ್ತು ಉಸಿರುಕಟ್ಟಿದ ವಾತಾವರಣದಲ್ಲಿ ದುರ್ಬಲ ವರ್ಗಗಳು ಭಾರತದಲ್ಲಿ ಬದುಕುತ್ತಿವೆ. ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಪ್ರಗತಿಪರ ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮಾನಸಗಂಗೋತ್ರಿ, ಮೈಸೂರು)


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...