Homeಮುಖಪುಟಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

- Advertisement -
- Advertisement -

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಆತ್ಮವಾಗಿದೆ. ಅಮೇರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನಕ್ಕೆ ಉಂಟು ಮಾಡಿದ ಮೊದಲ ತಿದ್ದುಪಡಿ ‘ಕಾಂಗ್ರೆಸ್ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನನ್ನು ರೂಪಿಸಬಾರದು’ ಎಂದು ತಿಳಿಸುತ್ತದೆ. ಯೂರೋಪಿನ ಬಹಳಷ್ಟು ರಾಷ್ಟ್ರಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜೆಗಳು ಸಂವಿಧಾನದತ್ತವಾಗಿ ನಿರಾತಂಕವಾಗಿ ಅನುಭವಿಸುತ್ತಾರೆ. ಭಾರತದಲ್ಲಿ ಅನುಚ್ಛೇದ-19-(1-ಎ) ಎಲ್ಲ ಪ್ರಜೆಗಳಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ 19(ಬಿ) ಕೆಲವು ಅರ್ಥಪೂರ್ಣ ನಿರ್ಬಂಧಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಜೆಗಳ ಮೇಲೆ ಹೇರಿರುವುದು ಔಚಿತ್ಯಪೂರ್ಣವಾಗಿದೆ.

ಅವಕಾಶವಂಚಿತ ಹಾಗೂ ದಮನಿತ ತಳಸಮುದಾಯಗಳನ್ನು ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ಪ್ರಗತಿಪರ ಜನಾಂದೋಲನಗಳನ್ನು ಸಂಘಟಿಸಲು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕುಗಳು ಸಹಕಾರಿಯಾಗಿವೆ. ಭಾರತದಂತಹ ಬಹುತ್ವ ಕೇಂದ್ರಿತ ದೇಶದಲ್ಲಿ ಅಕ್ಷರ ಸಂಸ್ಕೃತಿ ಮತ್ತು ಅಭಿವೃದ್ಧಿ ಅವಕಾಶಗಳಿಂದ ವಂಚಿತರಾಗಿರುವ ತಳಸಮುದಾಯಗಳ ಜನರನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯವಶ್ಯಕ. ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮ ಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಪ್ರತಿಭಟಿಸುವ ಧ್ವನಿಗಳನ್ನು ಹತ್ತಿಕ್ಕುವುದರ ಮೂಲಕ ಸಾಂವಿಧಾನಿಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಆಶಯಗಳನ್ನು ದುರ್ಬಲಗೊಳಿಸುತ್ತಿವೆ.

ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಸಮಾನತೆಗಳಿಗೆ ವಿರುದ್ಧವಾಗಿರುವ ಮೂಲಭೂತವಾದಿಗಳ ಆಳ್ವಿಕೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ತಗ್ಗಿಸಿದೆ. ಪ್ರಜೆಗಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದ ತಪ್ಪು ನೀತಿಗಳು ಮತ್ತು ಕ್ರಮಗಳನ್ನು ಪ್ರತಿಭಟಿಸುವವರ ಮೇಲೆ ಮೊಕದ್ದಮೆಗಳನ್ನು ಹೂಡಿ ಅವರ ನೈತಿಕಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಎಗ್ಗಿಲ್ಲದೆ ಸರ್ಕಾರದ ಬೆಂಬಲದಿಂದ ನಡೆಯುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಗತಿಪರರು ಮತ್ತು ಹೋರಾಟಗಾರರು ದೇಶದಾದ್ಯಂತ ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರದಾದ್ಯಂತ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ಜರುಗಿದ್ದವು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಆಂದೋಲನವನ್ನು ಅಧಿಕಾರ ಬಲದಿಂದ ಮಟ್ಟ ಹಾಕುವುದರಲ್ಲಿ ಸರಕಾರ ಯಶಸ್ವಿಯಾಯಿತು.

ಸವೋಚ್ಛ ನ್ಯಾಯಾಲಯ ಅನುರಾಧ ಭಾಷಿನ್ v/s ಯೂನಿಯನ್ ಆಫ್ ಇಂಡಿಯಾ ಮತ್ತಿತರರು ಪ್ರಕರಣದಲ್ಲಿ ಅಂತರ್ಜಾಲ ಬಳಕೆ ಅನುಚ್ಛೇದ-19(1)(ಎ) ಅನ್ವಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೊಳಪಡುತ್ತದೆಂದು ತೀರ್ಪು ನೀಡಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ನೀಡಿರುವ ತೀರ್ಪು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸಿದೆ. ಸುಮಾರು 100 ದಿನಗಳಿಂದಲೂ ಲಕ್ಷಾಂತರ ಅನ್ನದಾತರು ಮೂರು ರೈತವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರವೇ ಬಹುದೊಡ್ಡ ಅಡ್ಡಗಲ್ಲಾಗಿದೆ.

ಪ್ರಜಾಪ್ರಭುತ್ವದ ರಕ್ಷಕರಿಗೆ ಇಂತಹ ದುಸ್ಥಿತಿ ಉಂಟಾಗಿರುವುದನ್ನು ಜಾಗತಿಕ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ರಾಜಧರ್ಮದ ಅರಿವು ಮತ್ತು ಸಂವಿಧಾನಕ್ಕೆ ಗೌರವ ಇಲ್ಲದವರು ಅಧಿಕಾರಕ್ಕೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತೆಗಳಿಗೆ ಗಂಡಾಂತರ ಖಂಡಿತ.

ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಗಳಿಗೆ ಶರಣಾಗಿರುವ ಮಾಧ್ಯಮದ ಒಂದು ವರ್ಗ ತಾನು ನಿಷ್ಟೆ ತೋರಿಸಬೇಕಾದ ಜನರ ವಿರುದ್ಧವೇ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಈ ವರ್ಗ ರೈತರು, ಅಲ್ಪಸಂಖ್ಯಾತರು ಮಾತ್ರವಲ್ಲ ಬಹುಸಂಖ್ಯಾತ ಜನರಿಗೂ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ಮಾಧ್ಯಮದ ಈ ವರ್ಗ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸರಕಾರದ ಕ್ರಮಗಳ ಬಗ್ಗೆ ಮಾತಾಡುವುದೇ ಇಲ್ಲ. ಆಳುವವರು ಪ್ರಜೆಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಮರ್ಶಕ ನೋಟವನ್ನು ಕಳಕೊಂಡು ಒಂದು ರೀತಿಯ ಅಮಲಿನ ಸ್ಥಿತಿಯಲ್ಲಿರಬೇಕೆಂದು ನಮ್ಮನ್ನು ಇಂದು ಆಳುತ್ತಿರುವವರು ಅಪೇಕ್ಷಿಸುತ್ತಿದ್ದಾರೆ. ಅಬ್ಬರದ ದೇಶಪ್ರೇಮ ಕರೋನಾ ವೈರಾಣುವಿಗಿಂತ ಭಯಂಕರವೆಂಬುದನ್ನು ನಾವಿಂದು ಅರಿತುಕೊಳ್ಳಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದ ಭಾರತೀಯ ಪ್ರಜಾಪ್ರಭುತ್ವ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಅನ್ಯಾಯದ ವಿರುದ್ಧ ನಮ್ಮ ಅಸಂವೇದನೆಯೂ ಹೆಚ್ಚುತ್ತಾ ಹೋಗುತ್ತಿರುವ ಪ್ರವೃತ್ತಿಗೆ ನಾವಿಂದು ಮೂಕಸಾಕ್ಷಿಗಳಾಗಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿ ಸೆರೆವಾಸ ಅನುಭವಿಸುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ವರವರ ರಾವ್, ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖಾ, ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವನ್ಸ್, ಅರುಣ್ ಫೆರಿರಾ, ಸ್ಟಾನ್ ಸ್ವಾಮಿ, ಉಮರ್ ಖಾಲಿದ್, ಸಿದ್ದೀಖ್ ಕಪ್ಪನ್, ಕ್ರಾಂತಿ ತೇಕುಲ, ಕೆ.ವಿ.ಕುರ್ಮನಾಥ್ ಇವರಲ್ಲಿ ಪ್ರಮುಖರಾದವರು ಮಾನವ ಹಕ್ಕುಗಳ ಕಾರ್ಯಕರ್ತರ ಇತ್ತೀಚಿನ ಬಂಧನಗಳು ಭಾರತದಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿಯೇ ಪ್ರಮುಖ ಕಾರಣವಾಗಿದೆ.

ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನೀತಿ ಮತ್ತು ಕ್ರಮಗಳನ್ನು ರಚನಾತ್ಮಕವಾಗಿ ಟೀಕಿಸುವುದು ದೇಶದ್ರೋಹವಲ್ಲ ಎಂದು ಖಚಿತವಾಗಿ ತೀರ್ಮಾನಿಸಿರುವುದು ಸರಿಯಾಗಿದೆ.

ಭಾರತದಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಕೃಷಿ ಮಸೂದೆ, ಕಾರ್ಮಿಕ ಕಾಯ್ದೆ, ಸನಾತನ ಆಡಳಿತ, ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಮೊದಲಾದವುಗಳನ್ನು ವಿರೋಧಿಸುವ ಧ್ವನಿಗಳನ್ನು ದಮನಿಸುವ ಪ್ರಯತ್ನ ಎಲ್ಲೆಡೆ ಕಂಡುಬರುತ್ತಿದೆ. ಮಾಧ್ಯಮಗಳೂ ಕೂಡ ಬಂಡವಾಳ, ಮಾರುಕಟ್ಟೆ ಮತ್ತು ಶಕ್ತಿರಾಜಕಾರಣಕ್ಕೆ ಮರುಳಾಗಿವೆ. ಕಾರ್ಪೋರೇಟ್ ಉದ್ಯಮಿಗಳು ವ್ಯಾಪಾರಿ ಧರ್ಮವನ್ನು ಅನುಸರಿಸಿ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೃತ್ತಿಧರ್ಮಗಳನ್ನು ಕಡೆಗಣಿಸಿವೆ. ಅಲಕ್ಷಿತ ಜನವರ್ಗಗಳ ಜೀವಕ್ಕೆ ಬೆಲೆ ನೀಡುವ ಮಾನವೀಯ ದೃಷ್ಟಿಕೋನ ನಮ್ಮನ್ನು ಆಳುವವರಿಗೆ ಇಲ್ಲವಾಗಿದೆ. ಅಘೋಷಿತ ತುರ್ತುಪರಿಸ್ಥಿತಿ ಮತ್ತು ಉಸಿರುಕಟ್ಟಿದ ವಾತಾವರಣದಲ್ಲಿ ದುರ್ಬಲ ವರ್ಗಗಳು ಭಾರತದಲ್ಲಿ ಬದುಕುತ್ತಿವೆ. ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಪ್ರಗತಿಪರ ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮಾನಸಗಂಗೋತ್ರಿ, ಮೈಸೂರು)


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...