Homeಮುಖಪುಟಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

- Advertisement -
- Advertisement -

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಆತ್ಮವಾಗಿದೆ. ಅಮೇರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನಕ್ಕೆ ಉಂಟು ಮಾಡಿದ ಮೊದಲ ತಿದ್ದುಪಡಿ ‘ಕಾಂಗ್ರೆಸ್ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನನ್ನು ರೂಪಿಸಬಾರದು’ ಎಂದು ತಿಳಿಸುತ್ತದೆ. ಯೂರೋಪಿನ ಬಹಳಷ್ಟು ರಾಷ್ಟ್ರಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜೆಗಳು ಸಂವಿಧಾನದತ್ತವಾಗಿ ನಿರಾತಂಕವಾಗಿ ಅನುಭವಿಸುತ್ತಾರೆ. ಭಾರತದಲ್ಲಿ ಅನುಚ್ಛೇದ-19-(1-ಎ) ಎಲ್ಲ ಪ್ರಜೆಗಳಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ 19(ಬಿ) ಕೆಲವು ಅರ್ಥಪೂರ್ಣ ನಿರ್ಬಂಧಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಜೆಗಳ ಮೇಲೆ ಹೇರಿರುವುದು ಔಚಿತ್ಯಪೂರ್ಣವಾಗಿದೆ.

ಅವಕಾಶವಂಚಿತ ಹಾಗೂ ದಮನಿತ ತಳಸಮುದಾಯಗಳನ್ನು ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ಪ್ರಗತಿಪರ ಜನಾಂದೋಲನಗಳನ್ನು ಸಂಘಟಿಸಲು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕುಗಳು ಸಹಕಾರಿಯಾಗಿವೆ. ಭಾರತದಂತಹ ಬಹುತ್ವ ಕೇಂದ್ರಿತ ದೇಶದಲ್ಲಿ ಅಕ್ಷರ ಸಂಸ್ಕೃತಿ ಮತ್ತು ಅಭಿವೃದ್ಧಿ ಅವಕಾಶಗಳಿಂದ ವಂಚಿತರಾಗಿರುವ ತಳಸಮುದಾಯಗಳ ಜನರನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯವಶ್ಯಕ. ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮ ಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಪ್ರತಿಭಟಿಸುವ ಧ್ವನಿಗಳನ್ನು ಹತ್ತಿಕ್ಕುವುದರ ಮೂಲಕ ಸಾಂವಿಧಾನಿಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಆಶಯಗಳನ್ನು ದುರ್ಬಲಗೊಳಿಸುತ್ತಿವೆ.

ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಸಮಾನತೆಗಳಿಗೆ ವಿರುದ್ಧವಾಗಿರುವ ಮೂಲಭೂತವಾದಿಗಳ ಆಳ್ವಿಕೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ತಗ್ಗಿಸಿದೆ. ಪ್ರಜೆಗಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದ ತಪ್ಪು ನೀತಿಗಳು ಮತ್ತು ಕ್ರಮಗಳನ್ನು ಪ್ರತಿಭಟಿಸುವವರ ಮೇಲೆ ಮೊಕದ್ದಮೆಗಳನ್ನು ಹೂಡಿ ಅವರ ನೈತಿಕಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಎಗ್ಗಿಲ್ಲದೆ ಸರ್ಕಾರದ ಬೆಂಬಲದಿಂದ ನಡೆಯುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಗತಿಪರರು ಮತ್ತು ಹೋರಾಟಗಾರರು ದೇಶದಾದ್ಯಂತ ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರದಾದ್ಯಂತ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ಜರುಗಿದ್ದವು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಆಂದೋಲನವನ್ನು ಅಧಿಕಾರ ಬಲದಿಂದ ಮಟ್ಟ ಹಾಕುವುದರಲ್ಲಿ ಸರಕಾರ ಯಶಸ್ವಿಯಾಯಿತು.

ಸವೋಚ್ಛ ನ್ಯಾಯಾಲಯ ಅನುರಾಧ ಭಾಷಿನ್ v/s ಯೂನಿಯನ್ ಆಫ್ ಇಂಡಿಯಾ ಮತ್ತಿತರರು ಪ್ರಕರಣದಲ್ಲಿ ಅಂತರ್ಜಾಲ ಬಳಕೆ ಅನುಚ್ಛೇದ-19(1)(ಎ) ಅನ್ವಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೊಳಪಡುತ್ತದೆಂದು ತೀರ್ಪು ನೀಡಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ನೀಡಿರುವ ತೀರ್ಪು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸಿದೆ. ಸುಮಾರು 100 ದಿನಗಳಿಂದಲೂ ಲಕ್ಷಾಂತರ ಅನ್ನದಾತರು ಮೂರು ರೈತವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರವೇ ಬಹುದೊಡ್ಡ ಅಡ್ಡಗಲ್ಲಾಗಿದೆ.

ಪ್ರಜಾಪ್ರಭುತ್ವದ ರಕ್ಷಕರಿಗೆ ಇಂತಹ ದುಸ್ಥಿತಿ ಉಂಟಾಗಿರುವುದನ್ನು ಜಾಗತಿಕ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ರಾಜಧರ್ಮದ ಅರಿವು ಮತ್ತು ಸಂವಿಧಾನಕ್ಕೆ ಗೌರವ ಇಲ್ಲದವರು ಅಧಿಕಾರಕ್ಕೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತೆಗಳಿಗೆ ಗಂಡಾಂತರ ಖಂಡಿತ.

ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಗಳಿಗೆ ಶರಣಾಗಿರುವ ಮಾಧ್ಯಮದ ಒಂದು ವರ್ಗ ತಾನು ನಿಷ್ಟೆ ತೋರಿಸಬೇಕಾದ ಜನರ ವಿರುದ್ಧವೇ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಈ ವರ್ಗ ರೈತರು, ಅಲ್ಪಸಂಖ್ಯಾತರು ಮಾತ್ರವಲ್ಲ ಬಹುಸಂಖ್ಯಾತ ಜನರಿಗೂ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ಮಾಧ್ಯಮದ ಈ ವರ್ಗ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸರಕಾರದ ಕ್ರಮಗಳ ಬಗ್ಗೆ ಮಾತಾಡುವುದೇ ಇಲ್ಲ. ಆಳುವವರು ಪ್ರಜೆಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಮರ್ಶಕ ನೋಟವನ್ನು ಕಳಕೊಂಡು ಒಂದು ರೀತಿಯ ಅಮಲಿನ ಸ್ಥಿತಿಯಲ್ಲಿರಬೇಕೆಂದು ನಮ್ಮನ್ನು ಇಂದು ಆಳುತ್ತಿರುವವರು ಅಪೇಕ್ಷಿಸುತ್ತಿದ್ದಾರೆ. ಅಬ್ಬರದ ದೇಶಪ್ರೇಮ ಕರೋನಾ ವೈರಾಣುವಿಗಿಂತ ಭಯಂಕರವೆಂಬುದನ್ನು ನಾವಿಂದು ಅರಿತುಕೊಳ್ಳಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದ ಭಾರತೀಯ ಪ್ರಜಾಪ್ರಭುತ್ವ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಅನ್ಯಾಯದ ವಿರುದ್ಧ ನಮ್ಮ ಅಸಂವೇದನೆಯೂ ಹೆಚ್ಚುತ್ತಾ ಹೋಗುತ್ತಿರುವ ಪ್ರವೃತ್ತಿಗೆ ನಾವಿಂದು ಮೂಕಸಾಕ್ಷಿಗಳಾಗಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿ ಸೆರೆವಾಸ ಅನುಭವಿಸುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ವರವರ ರಾವ್, ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖಾ, ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವನ್ಸ್, ಅರುಣ್ ಫೆರಿರಾ, ಸ್ಟಾನ್ ಸ್ವಾಮಿ, ಉಮರ್ ಖಾಲಿದ್, ಸಿದ್ದೀಖ್ ಕಪ್ಪನ್, ಕ್ರಾಂತಿ ತೇಕುಲ, ಕೆ.ವಿ.ಕುರ್ಮನಾಥ್ ಇವರಲ್ಲಿ ಪ್ರಮುಖರಾದವರು ಮಾನವ ಹಕ್ಕುಗಳ ಕಾರ್ಯಕರ್ತರ ಇತ್ತೀಚಿನ ಬಂಧನಗಳು ಭಾರತದಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿಯೇ ಪ್ರಮುಖ ಕಾರಣವಾಗಿದೆ.

ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನೀತಿ ಮತ್ತು ಕ್ರಮಗಳನ್ನು ರಚನಾತ್ಮಕವಾಗಿ ಟೀಕಿಸುವುದು ದೇಶದ್ರೋಹವಲ್ಲ ಎಂದು ಖಚಿತವಾಗಿ ತೀರ್ಮಾನಿಸಿರುವುದು ಸರಿಯಾಗಿದೆ.

ಭಾರತದಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಕೃಷಿ ಮಸೂದೆ, ಕಾರ್ಮಿಕ ಕಾಯ್ದೆ, ಸನಾತನ ಆಡಳಿತ, ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಮೊದಲಾದವುಗಳನ್ನು ವಿರೋಧಿಸುವ ಧ್ವನಿಗಳನ್ನು ದಮನಿಸುವ ಪ್ರಯತ್ನ ಎಲ್ಲೆಡೆ ಕಂಡುಬರುತ್ತಿದೆ. ಮಾಧ್ಯಮಗಳೂ ಕೂಡ ಬಂಡವಾಳ, ಮಾರುಕಟ್ಟೆ ಮತ್ತು ಶಕ್ತಿರಾಜಕಾರಣಕ್ಕೆ ಮರುಳಾಗಿವೆ. ಕಾರ್ಪೋರೇಟ್ ಉದ್ಯಮಿಗಳು ವ್ಯಾಪಾರಿ ಧರ್ಮವನ್ನು ಅನುಸರಿಸಿ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೃತ್ತಿಧರ್ಮಗಳನ್ನು ಕಡೆಗಣಿಸಿವೆ. ಅಲಕ್ಷಿತ ಜನವರ್ಗಗಳ ಜೀವಕ್ಕೆ ಬೆಲೆ ನೀಡುವ ಮಾನವೀಯ ದೃಷ್ಟಿಕೋನ ನಮ್ಮನ್ನು ಆಳುವವರಿಗೆ ಇಲ್ಲವಾಗಿದೆ. ಅಘೋಷಿತ ತುರ್ತುಪರಿಸ್ಥಿತಿ ಮತ್ತು ಉಸಿರುಕಟ್ಟಿದ ವಾತಾವರಣದಲ್ಲಿ ದುರ್ಬಲ ವರ್ಗಗಳು ಭಾರತದಲ್ಲಿ ಬದುಕುತ್ತಿವೆ. ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಪ್ರಗತಿಪರ ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮಾನಸಗಂಗೋತ್ರಿ, ಮೈಸೂರು)


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...