Homeಮುಖಪುಟಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

- Advertisement -
- Advertisement -

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಆತ್ಮವಾಗಿದೆ. ಅಮೇರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನಕ್ಕೆ ಉಂಟು ಮಾಡಿದ ಮೊದಲ ತಿದ್ದುಪಡಿ ‘ಕಾಂಗ್ರೆಸ್ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನನ್ನು ರೂಪಿಸಬಾರದು’ ಎಂದು ತಿಳಿಸುತ್ತದೆ. ಯೂರೋಪಿನ ಬಹಳಷ್ಟು ರಾಷ್ಟ್ರಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜೆಗಳು ಸಂವಿಧಾನದತ್ತವಾಗಿ ನಿರಾತಂಕವಾಗಿ ಅನುಭವಿಸುತ್ತಾರೆ. ಭಾರತದಲ್ಲಿ ಅನುಚ್ಛೇದ-19-(1-ಎ) ಎಲ್ಲ ಪ್ರಜೆಗಳಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ 19(ಬಿ) ಕೆಲವು ಅರ್ಥಪೂರ್ಣ ನಿರ್ಬಂಧಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಜೆಗಳ ಮೇಲೆ ಹೇರಿರುವುದು ಔಚಿತ್ಯಪೂರ್ಣವಾಗಿದೆ.

ಅವಕಾಶವಂಚಿತ ಹಾಗೂ ದಮನಿತ ತಳಸಮುದಾಯಗಳನ್ನು ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ಪ್ರಗತಿಪರ ಜನಾಂದೋಲನಗಳನ್ನು ಸಂಘಟಿಸಲು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕುಗಳು ಸಹಕಾರಿಯಾಗಿವೆ. ಭಾರತದಂತಹ ಬಹುತ್ವ ಕೇಂದ್ರಿತ ದೇಶದಲ್ಲಿ ಅಕ್ಷರ ಸಂಸ್ಕೃತಿ ಮತ್ತು ಅಭಿವೃದ್ಧಿ ಅವಕಾಶಗಳಿಂದ ವಂಚಿತರಾಗಿರುವ ತಳಸಮುದಾಯಗಳ ಜನರನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯವಶ್ಯಕ. ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮ ಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಪ್ರತಿಭಟಿಸುವ ಧ್ವನಿಗಳನ್ನು ಹತ್ತಿಕ್ಕುವುದರ ಮೂಲಕ ಸಾಂವಿಧಾನಿಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಆಶಯಗಳನ್ನು ದುರ್ಬಲಗೊಳಿಸುತ್ತಿವೆ.

ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಸಮಾನತೆಗಳಿಗೆ ವಿರುದ್ಧವಾಗಿರುವ ಮೂಲಭೂತವಾದಿಗಳ ಆಳ್ವಿಕೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ತಗ್ಗಿಸಿದೆ. ಪ್ರಜೆಗಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದ ತಪ್ಪು ನೀತಿಗಳು ಮತ್ತು ಕ್ರಮಗಳನ್ನು ಪ್ರತಿಭಟಿಸುವವರ ಮೇಲೆ ಮೊಕದ್ದಮೆಗಳನ್ನು ಹೂಡಿ ಅವರ ನೈತಿಕಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಎಗ್ಗಿಲ್ಲದೆ ಸರ್ಕಾರದ ಬೆಂಬಲದಿಂದ ನಡೆಯುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಗತಿಪರರು ಮತ್ತು ಹೋರಾಟಗಾರರು ದೇಶದಾದ್ಯಂತ ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರದಾದ್ಯಂತ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ಜರುಗಿದ್ದವು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಆಂದೋಲನವನ್ನು ಅಧಿಕಾರ ಬಲದಿಂದ ಮಟ್ಟ ಹಾಕುವುದರಲ್ಲಿ ಸರಕಾರ ಯಶಸ್ವಿಯಾಯಿತು.

ಸವೋಚ್ಛ ನ್ಯಾಯಾಲಯ ಅನುರಾಧ ಭಾಷಿನ್ v/s ಯೂನಿಯನ್ ಆಫ್ ಇಂಡಿಯಾ ಮತ್ತಿತರರು ಪ್ರಕರಣದಲ್ಲಿ ಅಂತರ್ಜಾಲ ಬಳಕೆ ಅನುಚ್ಛೇದ-19(1)(ಎ) ಅನ್ವಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೊಳಪಡುತ್ತದೆಂದು ತೀರ್ಪು ನೀಡಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ನೀಡಿರುವ ತೀರ್ಪು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸಿದೆ. ಸುಮಾರು 100 ದಿನಗಳಿಂದಲೂ ಲಕ್ಷಾಂತರ ಅನ್ನದಾತರು ಮೂರು ರೈತವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರವೇ ಬಹುದೊಡ್ಡ ಅಡ್ಡಗಲ್ಲಾಗಿದೆ.

ಪ್ರಜಾಪ್ರಭುತ್ವದ ರಕ್ಷಕರಿಗೆ ಇಂತಹ ದುಸ್ಥಿತಿ ಉಂಟಾಗಿರುವುದನ್ನು ಜಾಗತಿಕ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ರಾಜಧರ್ಮದ ಅರಿವು ಮತ್ತು ಸಂವಿಧಾನಕ್ಕೆ ಗೌರವ ಇಲ್ಲದವರು ಅಧಿಕಾರಕ್ಕೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತೆಗಳಿಗೆ ಗಂಡಾಂತರ ಖಂಡಿತ.

ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಗಳಿಗೆ ಶರಣಾಗಿರುವ ಮಾಧ್ಯಮದ ಒಂದು ವರ್ಗ ತಾನು ನಿಷ್ಟೆ ತೋರಿಸಬೇಕಾದ ಜನರ ವಿರುದ್ಧವೇ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಈ ವರ್ಗ ರೈತರು, ಅಲ್ಪಸಂಖ್ಯಾತರು ಮಾತ್ರವಲ್ಲ ಬಹುಸಂಖ್ಯಾತ ಜನರಿಗೂ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ಮಾಧ್ಯಮದ ಈ ವರ್ಗ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸರಕಾರದ ಕ್ರಮಗಳ ಬಗ್ಗೆ ಮಾತಾಡುವುದೇ ಇಲ್ಲ. ಆಳುವವರು ಪ್ರಜೆಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಮರ್ಶಕ ನೋಟವನ್ನು ಕಳಕೊಂಡು ಒಂದು ರೀತಿಯ ಅಮಲಿನ ಸ್ಥಿತಿಯಲ್ಲಿರಬೇಕೆಂದು ನಮ್ಮನ್ನು ಇಂದು ಆಳುತ್ತಿರುವವರು ಅಪೇಕ್ಷಿಸುತ್ತಿದ್ದಾರೆ. ಅಬ್ಬರದ ದೇಶಪ್ರೇಮ ಕರೋನಾ ವೈರಾಣುವಿಗಿಂತ ಭಯಂಕರವೆಂಬುದನ್ನು ನಾವಿಂದು ಅರಿತುಕೊಳ್ಳಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದ ಭಾರತೀಯ ಪ್ರಜಾಪ್ರಭುತ್ವ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಅನ್ಯಾಯದ ವಿರುದ್ಧ ನಮ್ಮ ಅಸಂವೇದನೆಯೂ ಹೆಚ್ಚುತ್ತಾ ಹೋಗುತ್ತಿರುವ ಪ್ರವೃತ್ತಿಗೆ ನಾವಿಂದು ಮೂಕಸಾಕ್ಷಿಗಳಾಗಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿ ಸೆರೆವಾಸ ಅನುಭವಿಸುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ವರವರ ರಾವ್, ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖಾ, ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವನ್ಸ್, ಅರುಣ್ ಫೆರಿರಾ, ಸ್ಟಾನ್ ಸ್ವಾಮಿ, ಉಮರ್ ಖಾಲಿದ್, ಸಿದ್ದೀಖ್ ಕಪ್ಪನ್, ಕ್ರಾಂತಿ ತೇಕುಲ, ಕೆ.ವಿ.ಕುರ್ಮನಾಥ್ ಇವರಲ್ಲಿ ಪ್ರಮುಖರಾದವರು ಮಾನವ ಹಕ್ಕುಗಳ ಕಾರ್ಯಕರ್ತರ ಇತ್ತೀಚಿನ ಬಂಧನಗಳು ಭಾರತದಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿಯೇ ಪ್ರಮುಖ ಕಾರಣವಾಗಿದೆ.

ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನೀತಿ ಮತ್ತು ಕ್ರಮಗಳನ್ನು ರಚನಾತ್ಮಕವಾಗಿ ಟೀಕಿಸುವುದು ದೇಶದ್ರೋಹವಲ್ಲ ಎಂದು ಖಚಿತವಾಗಿ ತೀರ್ಮಾನಿಸಿರುವುದು ಸರಿಯಾಗಿದೆ.

ಭಾರತದಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಕೃಷಿ ಮಸೂದೆ, ಕಾರ್ಮಿಕ ಕಾಯ್ದೆ, ಸನಾತನ ಆಡಳಿತ, ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಮೊದಲಾದವುಗಳನ್ನು ವಿರೋಧಿಸುವ ಧ್ವನಿಗಳನ್ನು ದಮನಿಸುವ ಪ್ರಯತ್ನ ಎಲ್ಲೆಡೆ ಕಂಡುಬರುತ್ತಿದೆ. ಮಾಧ್ಯಮಗಳೂ ಕೂಡ ಬಂಡವಾಳ, ಮಾರುಕಟ್ಟೆ ಮತ್ತು ಶಕ್ತಿರಾಜಕಾರಣಕ್ಕೆ ಮರುಳಾಗಿವೆ. ಕಾರ್ಪೋರೇಟ್ ಉದ್ಯಮಿಗಳು ವ್ಯಾಪಾರಿ ಧರ್ಮವನ್ನು ಅನುಸರಿಸಿ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೃತ್ತಿಧರ್ಮಗಳನ್ನು ಕಡೆಗಣಿಸಿವೆ. ಅಲಕ್ಷಿತ ಜನವರ್ಗಗಳ ಜೀವಕ್ಕೆ ಬೆಲೆ ನೀಡುವ ಮಾನವೀಯ ದೃಷ್ಟಿಕೋನ ನಮ್ಮನ್ನು ಆಳುವವರಿಗೆ ಇಲ್ಲವಾಗಿದೆ. ಅಘೋಷಿತ ತುರ್ತುಪರಿಸ್ಥಿತಿ ಮತ್ತು ಉಸಿರುಕಟ್ಟಿದ ವಾತಾವರಣದಲ್ಲಿ ದುರ್ಬಲ ವರ್ಗಗಳು ಭಾರತದಲ್ಲಿ ಬದುಕುತ್ತಿವೆ. ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಪ್ರಗತಿಪರ ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮಾನಸಗಂಗೋತ್ರಿ, ಮೈಸೂರು)


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...