Homeಮುಖಪುಟಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

ಭಾರತದಲ್ಲಿ ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ

- Advertisement -
- Advertisement -

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಆತ್ಮವಾಗಿದೆ. ಅಮೇರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನಕ್ಕೆ ಉಂಟು ಮಾಡಿದ ಮೊದಲ ತಿದ್ದುಪಡಿ ‘ಕಾಂಗ್ರೆಸ್ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡುವ ಯಾವುದೇ ಕಾನೂನನ್ನು ರೂಪಿಸಬಾರದು’ ಎಂದು ತಿಳಿಸುತ್ತದೆ. ಯೂರೋಪಿನ ಬಹಳಷ್ಟು ರಾಷ್ಟ್ರಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಜೆಗಳು ಸಂವಿಧಾನದತ್ತವಾಗಿ ನಿರಾತಂಕವಾಗಿ ಅನುಭವಿಸುತ್ತಾರೆ. ಭಾರತದಲ್ಲಿ ಅನುಚ್ಛೇದ-19-(1-ಎ) ಎಲ್ಲ ಪ್ರಜೆಗಳಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ 19(ಬಿ) ಕೆಲವು ಅರ್ಥಪೂರ್ಣ ನಿರ್ಬಂಧಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರಜೆಗಳ ಮೇಲೆ ಹೇರಿರುವುದು ಔಚಿತ್ಯಪೂರ್ಣವಾಗಿದೆ.

ಅವಕಾಶವಂಚಿತ ಹಾಗೂ ದಮನಿತ ತಳಸಮುದಾಯಗಳನ್ನು ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ಪ್ರಗತಿಪರ ಜನಾಂದೋಲನಗಳನ್ನು ಸಂಘಟಿಸಲು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿ ಹಕ್ಕುಗಳು ಸಹಕಾರಿಯಾಗಿವೆ. ಭಾರತದಂತಹ ಬಹುತ್ವ ಕೇಂದ್ರಿತ ದೇಶದಲ್ಲಿ ಅಕ್ಷರ ಸಂಸ್ಕೃತಿ ಮತ್ತು ಅಭಿವೃದ್ಧಿ ಅವಕಾಶಗಳಿಂದ ವಂಚಿತರಾಗಿರುವ ತಳಸಮುದಾಯಗಳ ಜನರನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸುವ ಸಲುವಾಗಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯವಶ್ಯಕ. ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮಾಧ್ಯಮ ಪ್ರತಿನಿಧಿಗಳಿಗೂ ಅನ್ವಯಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಸಾಮ್ರಾಜ್ಯಶಾಹಿ ಶಕ್ತಿಗಳು ಪ್ರತಿಭಟಿಸುವ ಧ್ವನಿಗಳನ್ನು ಹತ್ತಿಕ್ಕುವುದರ ಮೂಲಕ ಸಾಂವಿಧಾನಿಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಆಶಯಗಳನ್ನು ದುರ್ಬಲಗೊಳಿಸುತ್ತಿವೆ.

ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಸಮಾನತೆಗಳಿಗೆ ವಿರುದ್ಧವಾಗಿರುವ ಮೂಲಭೂತವಾದಿಗಳ ಆಳ್ವಿಕೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ತಗ್ಗಿಸಿದೆ. ಪ್ರಜೆಗಳ ಹಿತರಕ್ಷಣೆ ದೃಷ್ಟಿಯಿಂದ ಸರ್ಕಾರದ ತಪ್ಪು ನೀತಿಗಳು ಮತ್ತು ಕ್ರಮಗಳನ್ನು ಪ್ರತಿಭಟಿಸುವವರ ಮೇಲೆ ಮೊಕದ್ದಮೆಗಳನ್ನು ಹೂಡಿ ಅವರ ನೈತಿಕಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಎಗ್ಗಿಲ್ಲದೆ ಸರ್ಕಾರದ ಬೆಂಬಲದಿಂದ ನಡೆಯುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಗತಿಪರರು ಮತ್ತು ಹೋರಾಟಗಾರರು ದೇಶದಾದ್ಯಂತ ಅಹಿಂಸಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರದಾದ್ಯಂತ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ಜರುಗಿದ್ದವು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಆಂದೋಲನವನ್ನು ಅಧಿಕಾರ ಬಲದಿಂದ ಮಟ್ಟ ಹಾಕುವುದರಲ್ಲಿ ಸರಕಾರ ಯಶಸ್ವಿಯಾಯಿತು.

ಸವೋಚ್ಛ ನ್ಯಾಯಾಲಯ ಅನುರಾಧ ಭಾಷಿನ್ v/s ಯೂನಿಯನ್ ಆಫ್ ಇಂಡಿಯಾ ಮತ್ತಿತರರು ಪ್ರಕರಣದಲ್ಲಿ ಅಂತರ್ಜಾಲ ಬಳಕೆ ಅನುಚ್ಛೇದ-19(1)(ಎ) ಅನ್ವಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೊಳಪಡುತ್ತದೆಂದು ತೀರ್ಪು ನೀಡಿದೆ. ಅಲ್ಲದೆ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್-144ನ್ನು ಪ್ರಭುತ್ವ ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ನಿರ್ಬಂಧಿಸಬಾರದೆಂದು ನೀಡಿರುವ ತೀರ್ಪು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸಿದೆ. ಸುಮಾರು 100 ದಿನಗಳಿಂದಲೂ ಲಕ್ಷಾಂತರ ಅನ್ನದಾತರು ಮೂರು ರೈತವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಪ್ರಜಾಸತ್ತಾತ್ಮಕವಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರವೇ ಬಹುದೊಡ್ಡ ಅಡ್ಡಗಲ್ಲಾಗಿದೆ.

ಪ್ರಜಾಪ್ರಭುತ್ವದ ರಕ್ಷಕರಿಗೆ ಇಂತಹ ದುಸ್ಥಿತಿ ಉಂಟಾಗಿರುವುದನ್ನು ಜಾಗತಿಕ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ರಾಜಧರ್ಮದ ಅರಿವು ಮತ್ತು ಸಂವಿಧಾನಕ್ಕೆ ಗೌರವ ಇಲ್ಲದವರು ಅಧಿಕಾರಕ್ಕೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಸತ್ತೆಗಳಿಗೆ ಗಂಡಾಂತರ ಖಂಡಿತ.

ಬ್ರಾಹ್ಮಣ್ಯ ಮತ್ತು ಬಂಡವಾಳಶಾಹಿಗಳಿಗೆ ಶರಣಾಗಿರುವ ಮಾಧ್ಯಮದ ಒಂದು ವರ್ಗ ತಾನು ನಿಷ್ಟೆ ತೋರಿಸಬೇಕಾದ ಜನರ ವಿರುದ್ಧವೇ ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಈ ವರ್ಗ ರೈತರು, ಅಲ್ಪಸಂಖ್ಯಾತರು ಮಾತ್ರವಲ್ಲ ಬಹುಸಂಖ್ಯಾತ ಜನರಿಗೂ ವಿರುದ್ಧವಾಗಿಯೇ ಕೆಲಸ ಮಾಡುತ್ತಿದೆ. ಮಾಧ್ಯಮದ ಈ ವರ್ಗ ಜನಜೀವನದ ಮೇಲೆ ಭಾರಿ ಪರಿಣಾಮ ಬೀರುವ ಸರಕಾರದ ಕ್ರಮಗಳ ಬಗ್ಗೆ ಮಾತಾಡುವುದೇ ಇಲ್ಲ. ಆಳುವವರು ಪ್ರಜೆಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಮರ್ಶಕ ನೋಟವನ್ನು ಕಳಕೊಂಡು ಒಂದು ರೀತಿಯ ಅಮಲಿನ ಸ್ಥಿತಿಯಲ್ಲಿರಬೇಕೆಂದು ನಮ್ಮನ್ನು ಇಂದು ಆಳುತ್ತಿರುವವರು ಅಪೇಕ್ಷಿಸುತ್ತಿದ್ದಾರೆ. ಅಬ್ಬರದ ದೇಶಪ್ರೇಮ ಕರೋನಾ ವೈರಾಣುವಿಗಿಂತ ಭಯಂಕರವೆಂಬುದನ್ನು ನಾವಿಂದು ಅರಿತುಕೊಳ್ಳಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದ ಭಾರತೀಯ ಪ್ರಜಾಪ್ರಭುತ್ವ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ಅನ್ಯಾಯದ ವಿರುದ್ಧ ನಮ್ಮ ಅಸಂವೇದನೆಯೂ ಹೆಚ್ಚುತ್ತಾ ಹೋಗುತ್ತಿರುವ ಪ್ರವೃತ್ತಿಗೆ ನಾವಿಂದು ಮೂಕಸಾಕ್ಷಿಗಳಾಗಿದ್ದೇವೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿ ಸೆರೆವಾಸ ಅನುಭವಿಸುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ವರವರ ರಾವ್, ಆನಂದ ತೇಲ್‌ತುಂಬ್ಡೆ, ಗೌತಮ್ ನೌಲಖಾ, ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವನ್ಸ್, ಅರುಣ್ ಫೆರಿರಾ, ಸ್ಟಾನ್ ಸ್ವಾಮಿ, ಉಮರ್ ಖಾಲಿದ್, ಸಿದ್ದೀಖ್ ಕಪ್ಪನ್, ಕ್ರಾಂತಿ ತೇಕುಲ, ಕೆ.ವಿ.ಕುರ್ಮನಾಥ್ ಇವರಲ್ಲಿ ಪ್ರಮುಖರಾದವರು ಮಾನವ ಹಕ್ಕುಗಳ ಕಾರ್ಯಕರ್ತರ ಇತ್ತೀಚಿನ ಬಂಧನಗಳು ಭಾರತದಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಲು ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿಯೇ ಪ್ರಮುಖ ಕಾರಣವಾಗಿದೆ.

ಇತ್ತೀಚೆಗೆ ಭಾರತದ ಸರ್ವೋಚ್ಛ ನ್ಯಾಯಾಲಯ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನೀತಿ ಮತ್ತು ಕ್ರಮಗಳನ್ನು ರಚನಾತ್ಮಕವಾಗಿ ಟೀಕಿಸುವುದು ದೇಶದ್ರೋಹವಲ್ಲ ಎಂದು ಖಚಿತವಾಗಿ ತೀರ್ಮಾನಿಸಿರುವುದು ಸರಿಯಾಗಿದೆ.

ಭಾರತದಲ್ಲಿ ಪ್ರಜೆಗಳು ಮತ್ತು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಕೃಷಿ ಮಸೂದೆ, ಕಾರ್ಮಿಕ ಕಾಯ್ದೆ, ಸನಾತನ ಆಡಳಿತ, ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಮೊದಲಾದವುಗಳನ್ನು ವಿರೋಧಿಸುವ ಧ್ವನಿಗಳನ್ನು ದಮನಿಸುವ ಪ್ರಯತ್ನ ಎಲ್ಲೆಡೆ ಕಂಡುಬರುತ್ತಿದೆ. ಮಾಧ್ಯಮಗಳೂ ಕೂಡ ಬಂಡವಾಳ, ಮಾರುಕಟ್ಟೆ ಮತ್ತು ಶಕ್ತಿರಾಜಕಾರಣಕ್ಕೆ ಮರುಳಾಗಿವೆ. ಕಾರ್ಪೋರೇಟ್ ಉದ್ಯಮಿಗಳು ವ್ಯಾಪಾರಿ ಧರ್ಮವನ್ನು ಅನುಸರಿಸಿ ಪ್ರಜೆಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವೃತ್ತಿಧರ್ಮಗಳನ್ನು ಕಡೆಗಣಿಸಿವೆ. ಅಲಕ್ಷಿತ ಜನವರ್ಗಗಳ ಜೀವಕ್ಕೆ ಬೆಲೆ ನೀಡುವ ಮಾನವೀಯ ದೃಷ್ಟಿಕೋನ ನಮ್ಮನ್ನು ಆಳುವವರಿಗೆ ಇಲ್ಲವಾಗಿದೆ. ಅಘೋಷಿತ ತುರ್ತುಪರಿಸ್ಥಿತಿ ಮತ್ತು ಉಸಿರುಕಟ್ಟಿದ ವಾತಾವರಣದಲ್ಲಿ ದುರ್ಬಲ ವರ್ಗಗಳು ಭಾರತದಲ್ಲಿ ಬದುಕುತ್ತಿವೆ. ಸಂವಿಧಾನ ಮತ್ತು ಪ್ರಜಾತಂತ್ರಗಳು ಉಳಿದರೆ ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ.

  • ಡಾ.ಬಿ.ಪಿ.ಮಹೇಶ ಚಂದ್ರ ಗುರು

(ಪ್ರಗತಿಪರ ಚಿಂತಕರು ಮತ್ತು ವಿಶ್ರಾಂತ ಪ್ರಾಧ್ಯಾಪಕರು, ಮಾನಸಗಂಗೋತ್ರಿ, ಮೈಸೂರು)


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...