Homeಮುಖಪುಟಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

- Advertisement -
- Advertisement -

ಪತ್ರಕರ್ತ ಪಿ.ಕೆ.ಬಶೀರ್ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್ ವೆಂಕಟರಾಮನ್ ಅವರನ್ನು ಆಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಇತ್ತೀಚೆಕಗೆ ಕೇರಳದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಿದ್ದವು. ಆದರೆ ಬಿಜೆಪಿ ಬೆಂಬಲಿತ ಹಾಗೂ ಇತರ ಹಿಂದೂ ಮತ್ತು ಕ್ರಿಶ್ಚಿಯನ್ ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಬಣ್ಣವನ್ನು ನೀಡಿ ಅಪಪ್ರಚಾರ ಮಾಡುತ್ತಿವೆ.

ಜುಲೈ 30 ರಂದು ನಡೆದ ಈ ಪ್ರತಿಭಟನೆಯು ರಾಜಕೀಯೇತರ ಸಂಘಟನೆಯಾದ ‘ಕೇರಳ ಮುಸ್ಲಿಂ ಜಮಾತ್‌’ ಆಶ್ರಯದಲ್ಲಿ ನಡೆದಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಕಚೇರಿಗಳಿಗೆ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ‘ಕೇರಳ ಮುಸ್ಲಿಂ ಜಮಾತ್‌’‌ನ ಅಂಗ ಸಂಘಟನೆಗಳಾದ ಸುನ್ನಿ ಯುವಜನ ಸಂಘ (SYS) ಮತ್ತು ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ನಂತಹ ಸುನ್ನಿ ಮುಸ್ಲಿಂ ಸಂಘಟನೆಗಳು ಭಾಗವಹಿಸಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಸಾಮಾಜಿಕ ಮಾಧ್ಯಮಗಳ ಬಲಪಂಥೀಯ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಆಯಾಮವನ್ನು ನೀಡಿ ಅಪಪ್ರಚಾರ ನಡೆಸುತ್ತಿದೆ. ಈ ಹ್ಯಾಂಡಲ್‌ಗಳು, “ಹೊಸದಾಗಿ ನೇಮಕಗೊಂಡ ಬ್ರಾಹ್ಮಣ ಐಎಎಸ್‌ ಜಿಲ್ಲಾಧಿಕಾರಿಯನ್ನು ವಿರೋಧಿಸಿ ಕೇರಳದ ಮಲಪ್ಪುರಂನಲ್ಲಿ ಮುಸ್ಲಿಮರು ಮೆರವಣಿಗೆ ಮಾಡಿದ್ದಾರೆ. MSM ಇದನ್ನು ಕುತಂತ್ರದಿಂದ ತಪ್ಪಿಸಿದ್ದು, ಕರ್ನಾಟಕದಲ್ಲಿ ABVP ಯನ್ನು ಎತ್ತಿ ತೋರಿಸಿತು. ಅವರ ಘೋಷಣೆಗಳನ್ನು ಆಲಿಸಿ” ಎಂದು ಹಿಂದೂ ಮಕ್ಕಳ್ ಕಚ್ಚಿಯ ಅರ್ಜುನ್ ಸಂಪತ್ ಟ್ವೀಟ್ ಮಾಡಿದ್ದಾರೆ.

ಅರ್ಜುನ್ ಸಂಪತ್‌ ಅವರ ಟ್ವೀಟ್‌ನಂತೆಯೆ ಸತ್ಯವನ್ನು ತಿರುಚಿ ಹಲವಾರು ಟ್ವೀಟ್‌ಗಳನ್ನು ಟ್ವಿಟರ್‌ನಲ್ಲಿ ಮಾಡಲಾಗಿವೆ. ಆದರೆ ವಾಸ್ತವದಲ್ಲಿ ಪತ್ರಕರ್ತ ಕೆ.ಎಂ.ಬಶೀರ್‌ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್‌ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ಪತ್ರಕರ್ತ ಬಶೀರ್ ಅವರು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾ ಒಡೆತನದ ಸಿರಾಜ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 4 ರಂದು ರಾತ್ರಿ ಬಶೀರ್ ಅವರು ತನ್ನ ಬೈಕ್ ಅನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾಗ ಶ್ರೀರಾಮ್ ಅವರ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು.

“ಅಪಘಾತದ ವೇಳೆ ಶ್ರೀರಾಮ್ ಅವರು ಕುಡಿದು ವಾಹನ ಚಲಾಯಿಸುತ್ತಿದ್ದರು. ಅಪಘಾತದ ನಂತರ ಅವರು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಮತ್ತು ಗಂಟೆಗಳ ಕಾಲ ರಕ್ತ ಪರೀಕ್ಷೆಯನ್ನು ನೀಡಲು ಒಪ್ಪಲಿಲ್ಲ” ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಕೇರಳದ ಸುನ್ನಿ ಸಂಘಟನೆಗಳು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಬದಲಾಗಿ ಅವರು ಬ್ರಾಹ್ಮಣ ಎಂಬ ಕಾರಣಕ್ಕೆ ಪ್ರತಿಭಟನೆ ನಡೆದಿರಲಿಲ್ಲ.

ಬಲಪಂಥೀಯ ನಾಯಕ ಅರ್ಜುನ್ ಸಂಪತ್ ಹಂಚಿಕೊಂಡಿರುವ ವಿಡಿಯೋದಲ್ಲಿ ‘‘ಕಲೆಕ್ಟರ್ ನೇಮಕದ ಆದೇಶವನ್ನು ಹಿಂಪಡೆಯಿರಿ. ಸರಕಾರವೇ, ಕೊಲೆಗಡುಕನಾದ ಕುಡುಕನಿಗೆ ಅಧಿಕಾರವನ್ನು ಒಪ್ಪಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂಬ ಘೋಷಣೆಗಳನ್ನು ಕೂಗಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಜಿಲ್ಲಾಧಿಕಾರಿಯನ್ನು ನೇಮಕಾತಿ ಆದೇಶ ಬಂದಾಗಿನಿಂದ ಕೇರಳ ಮುಸ್ಲಿಂ ಜಮಾತ್ ಮಾತ್ರವಲ್ಲದೆ ರಾಜ್ಯದ ಪತ್ರಕರ್ತರು ಸೇರಿದಂತೆ ಹಲವು ಸಂಘಟನೆಗಳು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಆದರೆ ರಾಜಕಿಯೇತರ ಮುಸ್ಲಿಂ ಸಂಘಟನೆಗಳು ಇದನ್ನು ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಿದ ನಂತರ ಬಲಪಂಥೀಯರು ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ.

ಜುಲೈ 26 ರಂದು ಐಎಎಸ್ ಅಧಿಕಾರಿ ಅಧಿಕಾರ ಸ್ವೀಕರಿಸಲು ಕಲೆಕ್ಟರೇಟ್ ತಲುಪಿದಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೊರಹಾಕಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಅಲಪ್ಪುಳದ ಮಾಜಿ ಸಂಸದ ಕೆ.ಸಿ. ವೇಣುಗೋಪಾಲ್ ಅವರು, ಜಿಲ್ಲಾಧಿಕಾರಿಯನ್ನು ‘ಕಳಂಕಿತ ಅಧಿಕಾರಿ’ ಎಂದು ಕರೆದಿದ್ದಾರೆ.

ಹರಿಪಾದ್ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಕೂಡ ನೇಮಕಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯ ನೇಮಕಾತಿಯನ್ನು ವಿರೋಧಿಸಿ ಆಲಪ್ಪುಳದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ನೇಮಕಾತಿಯನ್ನು ವಿರೋಧಿಸಿದೆ. ಸಾರ್ವಜನಿಕರೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕಾದ ಹುದ್ದೆಯಲ್ಲಿ ಕೊಲೆ ಆರೋಪಿ ಶ್ರೀರಾಮ್ ಅವರನ್ನು ಏಕೆ ನೇಮಿಸಲಾಗಿದೆ ಎಂದು ಎರಡೂ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಜುಲೈ 27 ರಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ಕಲೆಕ್ಟರೇಟ್ ಹೊರಗೆ ಅಲಪ್ಪುಳದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೇರಳದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರತಿಭಟನೆಗಳನ್ನು ಪತ್ರಕರ್ತರು ನಡೆಸಿದ್ದರು.

ಆದಾಗ್ಯೂ ಕೆಲವು ಗುಂಪುಗಳು ಪ್ರತಿಭಟನೆಗಳಿಗೆ ಕೋಮು ಬಣ್ಣ ನೀಡಿದ್ದಾರೆ. ಕ್ರಿಶ್ಚಿಯನ್ ಮೂಲಭೂತವಾದಿ ಸಂಘಟನೆಯಾದ ಡೆಮಾಕ್ರಟಿಕ್ ಕ್ರಿಶ್ಚಿಯನ್ ಫೆಡರೇಶನ್ ಕೇರಳ, ಪ್ರತಿಭಟನೆಯನ್ನು ಫೇಸ್‌ಬುಕ್‌ನಲ್ಲಿ ಟೀಕಿಸುತ್ತಾ,“ಸಾವಿಗೀಡಾದವರಿಗಿಂತ ಜಿಲ್ಲಾಧಿಕಾರಿಗೆ ಹೆಚ್ಚು ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ಅದಕ್ಕೆ ಕಾರಣ ಅವರ ಧಾರ್ಮಿಕ ಉಗ್ರವಾದ. ಪತ್ರಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವುದು ಇದೇ ಮೊದಲಲ್ಲ. ನಾಗರಿಕ ಸೇವಾ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲಲ್ಲ”

“ಹಾಗಾದರೆ ಈ ಪ್ರತಿಭಟನೆಗಳು ಏಕೆ ನಡೆಯುತ್ತಿವೆ? ಏಕೆಂದರೆ ಇದು ಕೇವಲ ಪ್ರತಿಭಟನೆಯಲ್ಲ. ಇದು ವೆಂಕಟರಾಮನ್‌ಗೆ ಮಾತ್ರವಲ್ಲ, ಅಧಿಕಾರಶಾಹಿ ಮತ್ತು ಸರ್ಕಾರಕ್ಕೆ ಬೆದರಿಕೆಯಾಗಿದೆ. ಒಬ್ಬ ಮುಸಲ್ಮಾನನನ್ನು ಕೊಂದ ಮಾತ್ರಕ್ಕೆ ಅವರು ಬೀದಿಪಾಲಾಗಿದ್ದಾರೆ. ಸತ್ತವರು ರಾಮನ್, ಕೃಷ್ಣನ್ ಅಥವಾ ವರ್ಗೀಸ್ ಆಗಿದ್ದರೆ ಮತ್ತು ಕಾರು ಓಡಿಸಿದವರು ಸಲಾಂ ಅಥವಾ ರಹೀಮ್ ಆಗಿದ್ದರೆ, ಬೀದಿಗಳು ಖಾಲಿಯಾಗಿ ಇರುತ್ತಿದ್ದವು” ಎಂದು ಅದು ಹೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮತ್ತೊಂದು ಕ್ರಿಶ್ಚಿಯನ್ ಮೂಲಭೂತವಾದಿ ಗುಂಪು CASA ತಮ್ಮ ಎಫ್‌ಬಿ ಪೋಸ್ಟ್‌ನಲ್ಲಿ, “ಅವರ ಮುಂದಿರುವ ಸಮಸ್ಯೆ ಶ್ರೀರಾಮ್ ವೆಂಕಟರಾಮನ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರನ್ನಾದರೂ ಕೊಂದದ್ದಲ್ಲ. ಸತ್ತವರು ತಮ್ಮ ಸಮುದಾಯದ ಸದಸ್ಯರಾಗಿದ್ದಾರೆ ಎಂಬ ಕಾರಣ ಮಾತ್ರ” ಎಂದು ಹೇಳಿತ್ತು.

ಇದೇ ರೀತಿಯ ಸಂದೇಶಗಳು ಅನೇಕ ವಾಟ್ಸಾಪ್ ಗುಂಪುಗಳಲ್ಲಿ ಕಾಣಿಸಿಕೊಂಡಿವೆ. “ಮೃತ ವ್ಯಕ್ತಿ ಮುಸ್ಲಿಂ ಆಗಿರುವುದರಿಂದ ಭಯೋತ್ಪಾದಕ ಗುಂಪುಗಳ ಸಹಾನುಭೂತಿ. ಶ್ರೀರಾಮ್ ಒಬ್ಬ ಬ್ರಾಹ್ಮಣ, ಹಿಂದೂ ವ್ಯಕ್ತಿ. ಹಾಗಾಗಿ ಇಲ್ಲಿ ಪ್ರತಿಭಟನೆ ಧರ್ಮದ ವಿರುದ್ಧವಾಗಿದೆ. ಅವರು ತಮ್ಮ ಶಕ್ತಿ ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ, ಇದು ಸಾಮಾಜಿಕ ಕಾರಣಕ್ಕಾಗಿ ನಡೆದ ಪ್ರತಿಭಟನೆಯಲ್ಲ” ಎಂದು ಪ್ರತಿಪಾದಿಸಿದ್ದವು.

ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ, ಕೇರಳ ಸರ್ಕಾರವು ಆಗಸ್ಟ್ 1 ರಂದು ಶ್ರೀರಾಮ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕೇರಳ ರಾಜ್ಯ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...