Homeಮುಖಪುಟಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

- Advertisement -
- Advertisement -

ಪತ್ರಕರ್ತ ಪಿ.ಕೆ.ಬಶೀರ್ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್ ವೆಂಕಟರಾಮನ್ ಅವರನ್ನು ಆಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಇತ್ತೀಚೆಕಗೆ ಕೇರಳದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಿದ್ದವು. ಆದರೆ ಬಿಜೆಪಿ ಬೆಂಬಲಿತ ಹಾಗೂ ಇತರ ಹಿಂದೂ ಮತ್ತು ಕ್ರಿಶ್ಚಿಯನ್ ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಬಣ್ಣವನ್ನು ನೀಡಿ ಅಪಪ್ರಚಾರ ಮಾಡುತ್ತಿವೆ.

ಜುಲೈ 30 ರಂದು ನಡೆದ ಈ ಪ್ರತಿಭಟನೆಯು ರಾಜಕೀಯೇತರ ಸಂಘಟನೆಯಾದ ‘ಕೇರಳ ಮುಸ್ಲಿಂ ಜಮಾತ್‌’ ಆಶ್ರಯದಲ್ಲಿ ನಡೆದಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಕಚೇರಿಗಳಿಗೆ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ‘ಕೇರಳ ಮುಸ್ಲಿಂ ಜಮಾತ್‌’‌ನ ಅಂಗ ಸಂಘಟನೆಗಳಾದ ಸುನ್ನಿ ಯುವಜನ ಸಂಘ (SYS) ಮತ್ತು ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ನಂತಹ ಸುನ್ನಿ ಮುಸ್ಲಿಂ ಸಂಘಟನೆಗಳು ಭಾಗವಹಿಸಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಸಾಮಾಜಿಕ ಮಾಧ್ಯಮಗಳ ಬಲಪಂಥೀಯ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಆಯಾಮವನ್ನು ನೀಡಿ ಅಪಪ್ರಚಾರ ನಡೆಸುತ್ತಿದೆ. ಈ ಹ್ಯಾಂಡಲ್‌ಗಳು, “ಹೊಸದಾಗಿ ನೇಮಕಗೊಂಡ ಬ್ರಾಹ್ಮಣ ಐಎಎಸ್‌ ಜಿಲ್ಲಾಧಿಕಾರಿಯನ್ನು ವಿರೋಧಿಸಿ ಕೇರಳದ ಮಲಪ್ಪುರಂನಲ್ಲಿ ಮುಸ್ಲಿಮರು ಮೆರವಣಿಗೆ ಮಾಡಿದ್ದಾರೆ. MSM ಇದನ್ನು ಕುತಂತ್ರದಿಂದ ತಪ್ಪಿಸಿದ್ದು, ಕರ್ನಾಟಕದಲ್ಲಿ ABVP ಯನ್ನು ಎತ್ತಿ ತೋರಿಸಿತು. ಅವರ ಘೋಷಣೆಗಳನ್ನು ಆಲಿಸಿ” ಎಂದು ಹಿಂದೂ ಮಕ್ಕಳ್ ಕಚ್ಚಿಯ ಅರ್ಜುನ್ ಸಂಪತ್ ಟ್ವೀಟ್ ಮಾಡಿದ್ದಾರೆ.

ಅರ್ಜುನ್ ಸಂಪತ್‌ ಅವರ ಟ್ವೀಟ್‌ನಂತೆಯೆ ಸತ್ಯವನ್ನು ತಿರುಚಿ ಹಲವಾರು ಟ್ವೀಟ್‌ಗಳನ್ನು ಟ್ವಿಟರ್‌ನಲ್ಲಿ ಮಾಡಲಾಗಿವೆ. ಆದರೆ ವಾಸ್ತವದಲ್ಲಿ ಪತ್ರಕರ್ತ ಕೆ.ಎಂ.ಬಶೀರ್‌ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್‌ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ಪತ್ರಕರ್ತ ಬಶೀರ್ ಅವರು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾ ಒಡೆತನದ ಸಿರಾಜ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 4 ರಂದು ರಾತ್ರಿ ಬಶೀರ್ ಅವರು ತನ್ನ ಬೈಕ್ ಅನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾಗ ಶ್ರೀರಾಮ್ ಅವರ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು.

“ಅಪಘಾತದ ವೇಳೆ ಶ್ರೀರಾಮ್ ಅವರು ಕುಡಿದು ವಾಹನ ಚಲಾಯಿಸುತ್ತಿದ್ದರು. ಅಪಘಾತದ ನಂತರ ಅವರು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಮತ್ತು ಗಂಟೆಗಳ ಕಾಲ ರಕ್ತ ಪರೀಕ್ಷೆಯನ್ನು ನೀಡಲು ಒಪ್ಪಲಿಲ್ಲ” ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಕೇರಳದ ಸುನ್ನಿ ಸಂಘಟನೆಗಳು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಬದಲಾಗಿ ಅವರು ಬ್ರಾಹ್ಮಣ ಎಂಬ ಕಾರಣಕ್ಕೆ ಪ್ರತಿಭಟನೆ ನಡೆದಿರಲಿಲ್ಲ.

ಬಲಪಂಥೀಯ ನಾಯಕ ಅರ್ಜುನ್ ಸಂಪತ್ ಹಂಚಿಕೊಂಡಿರುವ ವಿಡಿಯೋದಲ್ಲಿ ‘‘ಕಲೆಕ್ಟರ್ ನೇಮಕದ ಆದೇಶವನ್ನು ಹಿಂಪಡೆಯಿರಿ. ಸರಕಾರವೇ, ಕೊಲೆಗಡುಕನಾದ ಕುಡುಕನಿಗೆ ಅಧಿಕಾರವನ್ನು ಒಪ್ಪಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂಬ ಘೋಷಣೆಗಳನ್ನು ಕೂಗಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಜಿಲ್ಲಾಧಿಕಾರಿಯನ್ನು ನೇಮಕಾತಿ ಆದೇಶ ಬಂದಾಗಿನಿಂದ ಕೇರಳ ಮುಸ್ಲಿಂ ಜಮಾತ್ ಮಾತ್ರವಲ್ಲದೆ ರಾಜ್ಯದ ಪತ್ರಕರ್ತರು ಸೇರಿದಂತೆ ಹಲವು ಸಂಘಟನೆಗಳು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಆದರೆ ರಾಜಕಿಯೇತರ ಮುಸ್ಲಿಂ ಸಂಘಟನೆಗಳು ಇದನ್ನು ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಿದ ನಂತರ ಬಲಪಂಥೀಯರು ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ.

ಜುಲೈ 26 ರಂದು ಐಎಎಸ್ ಅಧಿಕಾರಿ ಅಧಿಕಾರ ಸ್ವೀಕರಿಸಲು ಕಲೆಕ್ಟರೇಟ್ ತಲುಪಿದಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೊರಹಾಕಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಅಲಪ್ಪುಳದ ಮಾಜಿ ಸಂಸದ ಕೆ.ಸಿ. ವೇಣುಗೋಪಾಲ್ ಅವರು, ಜಿಲ್ಲಾಧಿಕಾರಿಯನ್ನು ‘ಕಳಂಕಿತ ಅಧಿಕಾರಿ’ ಎಂದು ಕರೆದಿದ್ದಾರೆ.

ಹರಿಪಾದ್ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಕೂಡ ನೇಮಕಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯ ನೇಮಕಾತಿಯನ್ನು ವಿರೋಧಿಸಿ ಆಲಪ್ಪುಳದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ನೇಮಕಾತಿಯನ್ನು ವಿರೋಧಿಸಿದೆ. ಸಾರ್ವಜನಿಕರೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕಾದ ಹುದ್ದೆಯಲ್ಲಿ ಕೊಲೆ ಆರೋಪಿ ಶ್ರೀರಾಮ್ ಅವರನ್ನು ಏಕೆ ನೇಮಿಸಲಾಗಿದೆ ಎಂದು ಎರಡೂ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಜುಲೈ 27 ರಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ಕಲೆಕ್ಟರೇಟ್ ಹೊರಗೆ ಅಲಪ್ಪುಳದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೇರಳದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರತಿಭಟನೆಗಳನ್ನು ಪತ್ರಕರ್ತರು ನಡೆಸಿದ್ದರು.

ಆದಾಗ್ಯೂ ಕೆಲವು ಗುಂಪುಗಳು ಪ್ರತಿಭಟನೆಗಳಿಗೆ ಕೋಮು ಬಣ್ಣ ನೀಡಿದ್ದಾರೆ. ಕ್ರಿಶ್ಚಿಯನ್ ಮೂಲಭೂತವಾದಿ ಸಂಘಟನೆಯಾದ ಡೆಮಾಕ್ರಟಿಕ್ ಕ್ರಿಶ್ಚಿಯನ್ ಫೆಡರೇಶನ್ ಕೇರಳ, ಪ್ರತಿಭಟನೆಯನ್ನು ಫೇಸ್‌ಬುಕ್‌ನಲ್ಲಿ ಟೀಕಿಸುತ್ತಾ,“ಸಾವಿಗೀಡಾದವರಿಗಿಂತ ಜಿಲ್ಲಾಧಿಕಾರಿಗೆ ಹೆಚ್ಚು ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ಅದಕ್ಕೆ ಕಾರಣ ಅವರ ಧಾರ್ಮಿಕ ಉಗ್ರವಾದ. ಪತ್ರಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವುದು ಇದೇ ಮೊದಲಲ್ಲ. ನಾಗರಿಕ ಸೇವಾ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲಲ್ಲ”

“ಹಾಗಾದರೆ ಈ ಪ್ರತಿಭಟನೆಗಳು ಏಕೆ ನಡೆಯುತ್ತಿವೆ? ಏಕೆಂದರೆ ಇದು ಕೇವಲ ಪ್ರತಿಭಟನೆಯಲ್ಲ. ಇದು ವೆಂಕಟರಾಮನ್‌ಗೆ ಮಾತ್ರವಲ್ಲ, ಅಧಿಕಾರಶಾಹಿ ಮತ್ತು ಸರ್ಕಾರಕ್ಕೆ ಬೆದರಿಕೆಯಾಗಿದೆ. ಒಬ್ಬ ಮುಸಲ್ಮಾನನನ್ನು ಕೊಂದ ಮಾತ್ರಕ್ಕೆ ಅವರು ಬೀದಿಪಾಲಾಗಿದ್ದಾರೆ. ಸತ್ತವರು ರಾಮನ್, ಕೃಷ್ಣನ್ ಅಥವಾ ವರ್ಗೀಸ್ ಆಗಿದ್ದರೆ ಮತ್ತು ಕಾರು ಓಡಿಸಿದವರು ಸಲಾಂ ಅಥವಾ ರಹೀಮ್ ಆಗಿದ್ದರೆ, ಬೀದಿಗಳು ಖಾಲಿಯಾಗಿ ಇರುತ್ತಿದ್ದವು” ಎಂದು ಅದು ಹೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮತ್ತೊಂದು ಕ್ರಿಶ್ಚಿಯನ್ ಮೂಲಭೂತವಾದಿ ಗುಂಪು CASA ತಮ್ಮ ಎಫ್‌ಬಿ ಪೋಸ್ಟ್‌ನಲ್ಲಿ, “ಅವರ ಮುಂದಿರುವ ಸಮಸ್ಯೆ ಶ್ರೀರಾಮ್ ವೆಂಕಟರಾಮನ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರನ್ನಾದರೂ ಕೊಂದದ್ದಲ್ಲ. ಸತ್ತವರು ತಮ್ಮ ಸಮುದಾಯದ ಸದಸ್ಯರಾಗಿದ್ದಾರೆ ಎಂಬ ಕಾರಣ ಮಾತ್ರ” ಎಂದು ಹೇಳಿತ್ತು.

ಇದೇ ರೀತಿಯ ಸಂದೇಶಗಳು ಅನೇಕ ವಾಟ್ಸಾಪ್ ಗುಂಪುಗಳಲ್ಲಿ ಕಾಣಿಸಿಕೊಂಡಿವೆ. “ಮೃತ ವ್ಯಕ್ತಿ ಮುಸ್ಲಿಂ ಆಗಿರುವುದರಿಂದ ಭಯೋತ್ಪಾದಕ ಗುಂಪುಗಳ ಸಹಾನುಭೂತಿ. ಶ್ರೀರಾಮ್ ಒಬ್ಬ ಬ್ರಾಹ್ಮಣ, ಹಿಂದೂ ವ್ಯಕ್ತಿ. ಹಾಗಾಗಿ ಇಲ್ಲಿ ಪ್ರತಿಭಟನೆ ಧರ್ಮದ ವಿರುದ್ಧವಾಗಿದೆ. ಅವರು ತಮ್ಮ ಶಕ್ತಿ ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ, ಇದು ಸಾಮಾಜಿಕ ಕಾರಣಕ್ಕಾಗಿ ನಡೆದ ಪ್ರತಿಭಟನೆಯಲ್ಲ” ಎಂದು ಪ್ರತಿಪಾದಿಸಿದ್ದವು.

ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ, ಕೇರಳ ಸರ್ಕಾರವು ಆಗಸ್ಟ್ 1 ರಂದು ಶ್ರೀರಾಮ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕೇರಳ ರಾಜ್ಯ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...