Homeಮುಖಪುಟಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

- Advertisement -
- Advertisement -

ಪತ್ರಕರ್ತ ಪಿ.ಕೆ.ಬಶೀರ್ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್ ವೆಂಕಟರಾಮನ್ ಅವರನ್ನು ಆಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಇತ್ತೀಚೆಕಗೆ ಕೇರಳದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಿದ್ದವು. ಆದರೆ ಬಿಜೆಪಿ ಬೆಂಬಲಿತ ಹಾಗೂ ಇತರ ಹಿಂದೂ ಮತ್ತು ಕ್ರಿಶ್ಚಿಯನ್ ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಬಣ್ಣವನ್ನು ನೀಡಿ ಅಪಪ್ರಚಾರ ಮಾಡುತ್ತಿವೆ.

ಜುಲೈ 30 ರಂದು ನಡೆದ ಈ ಪ್ರತಿಭಟನೆಯು ರಾಜಕೀಯೇತರ ಸಂಘಟನೆಯಾದ ‘ಕೇರಳ ಮುಸ್ಲಿಂ ಜಮಾತ್‌’ ಆಶ್ರಯದಲ್ಲಿ ನಡೆದಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಕಚೇರಿಗಳಿಗೆ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ‘ಕೇರಳ ಮುಸ್ಲಿಂ ಜಮಾತ್‌’‌ನ ಅಂಗ ಸಂಘಟನೆಗಳಾದ ಸುನ್ನಿ ಯುವಜನ ಸಂಘ (SYS) ಮತ್ತು ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ನಂತಹ ಸುನ್ನಿ ಮುಸ್ಲಿಂ ಸಂಘಟನೆಗಳು ಭಾಗವಹಿಸಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಸಾಮಾಜಿಕ ಮಾಧ್ಯಮಗಳ ಬಲಪಂಥೀಯ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಆಯಾಮವನ್ನು ನೀಡಿ ಅಪಪ್ರಚಾರ ನಡೆಸುತ್ತಿದೆ. ಈ ಹ್ಯಾಂಡಲ್‌ಗಳು, “ಹೊಸದಾಗಿ ನೇಮಕಗೊಂಡ ಬ್ರಾಹ್ಮಣ ಐಎಎಸ್‌ ಜಿಲ್ಲಾಧಿಕಾರಿಯನ್ನು ವಿರೋಧಿಸಿ ಕೇರಳದ ಮಲಪ್ಪುರಂನಲ್ಲಿ ಮುಸ್ಲಿಮರು ಮೆರವಣಿಗೆ ಮಾಡಿದ್ದಾರೆ. MSM ಇದನ್ನು ಕುತಂತ್ರದಿಂದ ತಪ್ಪಿಸಿದ್ದು, ಕರ್ನಾಟಕದಲ್ಲಿ ABVP ಯನ್ನು ಎತ್ತಿ ತೋರಿಸಿತು. ಅವರ ಘೋಷಣೆಗಳನ್ನು ಆಲಿಸಿ” ಎಂದು ಹಿಂದೂ ಮಕ್ಕಳ್ ಕಚ್ಚಿಯ ಅರ್ಜುನ್ ಸಂಪತ್ ಟ್ವೀಟ್ ಮಾಡಿದ್ದಾರೆ.

ಅರ್ಜುನ್ ಸಂಪತ್‌ ಅವರ ಟ್ವೀಟ್‌ನಂತೆಯೆ ಸತ್ಯವನ್ನು ತಿರುಚಿ ಹಲವಾರು ಟ್ವೀಟ್‌ಗಳನ್ನು ಟ್ವಿಟರ್‌ನಲ್ಲಿ ಮಾಡಲಾಗಿವೆ. ಆದರೆ ವಾಸ್ತವದಲ್ಲಿ ಪತ್ರಕರ್ತ ಕೆ.ಎಂ.ಬಶೀರ್‌ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್‌ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ಪತ್ರಕರ್ತ ಬಶೀರ್ ಅವರು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾ ಒಡೆತನದ ಸಿರಾಜ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 4 ರಂದು ರಾತ್ರಿ ಬಶೀರ್ ಅವರು ತನ್ನ ಬೈಕ್ ಅನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾಗ ಶ್ರೀರಾಮ್ ಅವರ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು.

“ಅಪಘಾತದ ವೇಳೆ ಶ್ರೀರಾಮ್ ಅವರು ಕುಡಿದು ವಾಹನ ಚಲಾಯಿಸುತ್ತಿದ್ದರು. ಅಪಘಾತದ ನಂತರ ಅವರು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಮತ್ತು ಗಂಟೆಗಳ ಕಾಲ ರಕ್ತ ಪರೀಕ್ಷೆಯನ್ನು ನೀಡಲು ಒಪ್ಪಲಿಲ್ಲ” ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಕೇರಳದ ಸುನ್ನಿ ಸಂಘಟನೆಗಳು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಬದಲಾಗಿ ಅವರು ಬ್ರಾಹ್ಮಣ ಎಂಬ ಕಾರಣಕ್ಕೆ ಪ್ರತಿಭಟನೆ ನಡೆದಿರಲಿಲ್ಲ.

ಬಲಪಂಥೀಯ ನಾಯಕ ಅರ್ಜುನ್ ಸಂಪತ್ ಹಂಚಿಕೊಂಡಿರುವ ವಿಡಿಯೋದಲ್ಲಿ ‘‘ಕಲೆಕ್ಟರ್ ನೇಮಕದ ಆದೇಶವನ್ನು ಹಿಂಪಡೆಯಿರಿ. ಸರಕಾರವೇ, ಕೊಲೆಗಡುಕನಾದ ಕುಡುಕನಿಗೆ ಅಧಿಕಾರವನ್ನು ಒಪ್ಪಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂಬ ಘೋಷಣೆಗಳನ್ನು ಕೂಗಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಜಿಲ್ಲಾಧಿಕಾರಿಯನ್ನು ನೇಮಕಾತಿ ಆದೇಶ ಬಂದಾಗಿನಿಂದ ಕೇರಳ ಮುಸ್ಲಿಂ ಜಮಾತ್ ಮಾತ್ರವಲ್ಲದೆ ರಾಜ್ಯದ ಪತ್ರಕರ್ತರು ಸೇರಿದಂತೆ ಹಲವು ಸಂಘಟನೆಗಳು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಆದರೆ ರಾಜಕಿಯೇತರ ಮುಸ್ಲಿಂ ಸಂಘಟನೆಗಳು ಇದನ್ನು ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಿದ ನಂತರ ಬಲಪಂಥೀಯರು ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ.

ಜುಲೈ 26 ರಂದು ಐಎಎಸ್ ಅಧಿಕಾರಿ ಅಧಿಕಾರ ಸ್ವೀಕರಿಸಲು ಕಲೆಕ್ಟರೇಟ್ ತಲುಪಿದಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೊರಹಾಕಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಅಲಪ್ಪುಳದ ಮಾಜಿ ಸಂಸದ ಕೆ.ಸಿ. ವೇಣುಗೋಪಾಲ್ ಅವರು, ಜಿಲ್ಲಾಧಿಕಾರಿಯನ್ನು ‘ಕಳಂಕಿತ ಅಧಿಕಾರಿ’ ಎಂದು ಕರೆದಿದ್ದಾರೆ.

ಹರಿಪಾದ್ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಕೂಡ ನೇಮಕಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯ ನೇಮಕಾತಿಯನ್ನು ವಿರೋಧಿಸಿ ಆಲಪ್ಪುಳದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ನೇಮಕಾತಿಯನ್ನು ವಿರೋಧಿಸಿದೆ. ಸಾರ್ವಜನಿಕರೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕಾದ ಹುದ್ದೆಯಲ್ಲಿ ಕೊಲೆ ಆರೋಪಿ ಶ್ರೀರಾಮ್ ಅವರನ್ನು ಏಕೆ ನೇಮಿಸಲಾಗಿದೆ ಎಂದು ಎರಡೂ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಜುಲೈ 27 ರಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ಕಲೆಕ್ಟರೇಟ್ ಹೊರಗೆ ಅಲಪ್ಪುಳದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೇರಳದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರತಿಭಟನೆಗಳನ್ನು ಪತ್ರಕರ್ತರು ನಡೆಸಿದ್ದರು.

ಆದಾಗ್ಯೂ ಕೆಲವು ಗುಂಪುಗಳು ಪ್ರತಿಭಟನೆಗಳಿಗೆ ಕೋಮು ಬಣ್ಣ ನೀಡಿದ್ದಾರೆ. ಕ್ರಿಶ್ಚಿಯನ್ ಮೂಲಭೂತವಾದಿ ಸಂಘಟನೆಯಾದ ಡೆಮಾಕ್ರಟಿಕ್ ಕ್ರಿಶ್ಚಿಯನ್ ಫೆಡರೇಶನ್ ಕೇರಳ, ಪ್ರತಿಭಟನೆಯನ್ನು ಫೇಸ್‌ಬುಕ್‌ನಲ್ಲಿ ಟೀಕಿಸುತ್ತಾ,“ಸಾವಿಗೀಡಾದವರಿಗಿಂತ ಜಿಲ್ಲಾಧಿಕಾರಿಗೆ ಹೆಚ್ಚು ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ಅದಕ್ಕೆ ಕಾರಣ ಅವರ ಧಾರ್ಮಿಕ ಉಗ್ರವಾದ. ಪತ್ರಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವುದು ಇದೇ ಮೊದಲಲ್ಲ. ನಾಗರಿಕ ಸೇವಾ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲಲ್ಲ”

“ಹಾಗಾದರೆ ಈ ಪ್ರತಿಭಟನೆಗಳು ಏಕೆ ನಡೆಯುತ್ತಿವೆ? ಏಕೆಂದರೆ ಇದು ಕೇವಲ ಪ್ರತಿಭಟನೆಯಲ್ಲ. ಇದು ವೆಂಕಟರಾಮನ್‌ಗೆ ಮಾತ್ರವಲ್ಲ, ಅಧಿಕಾರಶಾಹಿ ಮತ್ತು ಸರ್ಕಾರಕ್ಕೆ ಬೆದರಿಕೆಯಾಗಿದೆ. ಒಬ್ಬ ಮುಸಲ್ಮಾನನನ್ನು ಕೊಂದ ಮಾತ್ರಕ್ಕೆ ಅವರು ಬೀದಿಪಾಲಾಗಿದ್ದಾರೆ. ಸತ್ತವರು ರಾಮನ್, ಕೃಷ್ಣನ್ ಅಥವಾ ವರ್ಗೀಸ್ ಆಗಿದ್ದರೆ ಮತ್ತು ಕಾರು ಓಡಿಸಿದವರು ಸಲಾಂ ಅಥವಾ ರಹೀಮ್ ಆಗಿದ್ದರೆ, ಬೀದಿಗಳು ಖಾಲಿಯಾಗಿ ಇರುತ್ತಿದ್ದವು” ಎಂದು ಅದು ಹೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮತ್ತೊಂದು ಕ್ರಿಶ್ಚಿಯನ್ ಮೂಲಭೂತವಾದಿ ಗುಂಪು CASA ತಮ್ಮ ಎಫ್‌ಬಿ ಪೋಸ್ಟ್‌ನಲ್ಲಿ, “ಅವರ ಮುಂದಿರುವ ಸಮಸ್ಯೆ ಶ್ರೀರಾಮ್ ವೆಂಕಟರಾಮನ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರನ್ನಾದರೂ ಕೊಂದದ್ದಲ್ಲ. ಸತ್ತವರು ತಮ್ಮ ಸಮುದಾಯದ ಸದಸ್ಯರಾಗಿದ್ದಾರೆ ಎಂಬ ಕಾರಣ ಮಾತ್ರ” ಎಂದು ಹೇಳಿತ್ತು.

ಇದೇ ರೀತಿಯ ಸಂದೇಶಗಳು ಅನೇಕ ವಾಟ್ಸಾಪ್ ಗುಂಪುಗಳಲ್ಲಿ ಕಾಣಿಸಿಕೊಂಡಿವೆ. “ಮೃತ ವ್ಯಕ್ತಿ ಮುಸ್ಲಿಂ ಆಗಿರುವುದರಿಂದ ಭಯೋತ್ಪಾದಕ ಗುಂಪುಗಳ ಸಹಾನುಭೂತಿ. ಶ್ರೀರಾಮ್ ಒಬ್ಬ ಬ್ರಾಹ್ಮಣ, ಹಿಂದೂ ವ್ಯಕ್ತಿ. ಹಾಗಾಗಿ ಇಲ್ಲಿ ಪ್ರತಿಭಟನೆ ಧರ್ಮದ ವಿರುದ್ಧವಾಗಿದೆ. ಅವರು ತಮ್ಮ ಶಕ್ತಿ ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ, ಇದು ಸಾಮಾಜಿಕ ಕಾರಣಕ್ಕಾಗಿ ನಡೆದ ಪ್ರತಿಭಟನೆಯಲ್ಲ” ಎಂದು ಪ್ರತಿಪಾದಿಸಿದ್ದವು.

ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ, ಕೇರಳ ಸರ್ಕಾರವು ಆಗಸ್ಟ್ 1 ರಂದು ಶ್ರೀರಾಮ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕೇರಳ ರಾಜ್ಯ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...