Homeಮುಖಪುಟಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

ಕೇರಳದ IAS ಅಧಿಕಾರಿ ಶ್ರೀರಾಮ್ ವಿರುದ್ಧದ ಶಾಂತಿಯುತ ಪ್ರತಿಭಟನೆಗಳಿಗೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರು

- Advertisement -
- Advertisement -

ಪತ್ರಕರ್ತ ಪಿ.ಕೆ.ಬಶೀರ್ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್ ವೆಂಕಟರಾಮನ್ ಅವರನ್ನು ಆಲಪ್ಪುಳ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಇತ್ತೀಚೆಕಗೆ ಕೇರಳದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಿದ್ದವು. ಆದರೆ ಬಿಜೆಪಿ ಬೆಂಬಲಿತ ಹಾಗೂ ಇತರ ಹಿಂದೂ ಮತ್ತು ಕ್ರಿಶ್ಚಿಯನ್ ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಬಣ್ಣವನ್ನು ನೀಡಿ ಅಪಪ್ರಚಾರ ಮಾಡುತ್ತಿವೆ.

ಜುಲೈ 30 ರಂದು ನಡೆದ ಈ ಪ್ರತಿಭಟನೆಯು ರಾಜಕೀಯೇತರ ಸಂಘಟನೆಯಾದ ‘ಕೇರಳ ಮುಸ್ಲಿಂ ಜಮಾತ್‌’ ಆಶ್ರಯದಲ್ಲಿ ನಡೆದಿತ್ತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಕಚೇರಿಗಳಿಗೆ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ‘ಕೇರಳ ಮುಸ್ಲಿಂ ಜಮಾತ್‌’‌ನ ಅಂಗ ಸಂಘಟನೆಗಳಾದ ಸುನ್ನಿ ಯುವಜನ ಸಂಘ (SYS) ಮತ್ತು ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ನಂತಹ ಸುನ್ನಿ ಮುಸ್ಲಿಂ ಸಂಘಟನೆಗಳು ಭಾಗವಹಿಸಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಸಾಮಾಜಿಕ ಮಾಧ್ಯಮಗಳ ಬಲಪಂಥೀಯ ಹ್ಯಾಂಡಲ್‌ಗಳು ಈ ಪ್ರತಿಭಟನೆಗೆ ಕೋಮು ಆಯಾಮವನ್ನು ನೀಡಿ ಅಪಪ್ರಚಾರ ನಡೆಸುತ್ತಿದೆ. ಈ ಹ್ಯಾಂಡಲ್‌ಗಳು, “ಹೊಸದಾಗಿ ನೇಮಕಗೊಂಡ ಬ್ರಾಹ್ಮಣ ಐಎಎಸ್‌ ಜಿಲ್ಲಾಧಿಕಾರಿಯನ್ನು ವಿರೋಧಿಸಿ ಕೇರಳದ ಮಲಪ್ಪುರಂನಲ್ಲಿ ಮುಸ್ಲಿಮರು ಮೆರವಣಿಗೆ ಮಾಡಿದ್ದಾರೆ. MSM ಇದನ್ನು ಕುತಂತ್ರದಿಂದ ತಪ್ಪಿಸಿದ್ದು, ಕರ್ನಾಟಕದಲ್ಲಿ ABVP ಯನ್ನು ಎತ್ತಿ ತೋರಿಸಿತು. ಅವರ ಘೋಷಣೆಗಳನ್ನು ಆಲಿಸಿ” ಎಂದು ಹಿಂದೂ ಮಕ್ಕಳ್ ಕಚ್ಚಿಯ ಅರ್ಜುನ್ ಸಂಪತ್ ಟ್ವೀಟ್ ಮಾಡಿದ್ದಾರೆ.

ಅರ್ಜುನ್ ಸಂಪತ್‌ ಅವರ ಟ್ವೀಟ್‌ನಂತೆಯೆ ಸತ್ಯವನ್ನು ತಿರುಚಿ ಹಲವಾರು ಟ್ವೀಟ್‌ಗಳನ್ನು ಟ್ವಿಟರ್‌ನಲ್ಲಿ ಮಾಡಲಾಗಿವೆ. ಆದರೆ ವಾಸ್ತವದಲ್ಲಿ ಪತ್ರಕರ್ತ ಕೆ.ಎಂ.ಬಶೀರ್‌ ಸಾವಿನ ಪ್ರಕರಣದ ಆರೋಪಿ ಶ್ರೀರಾಮ್‌ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

ಪತ್ರಕರ್ತ ಬಶೀರ್ ಅವರು ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾ ಒಡೆತನದ ಸಿರಾಜ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 4 ರಂದು ರಾತ್ರಿ ಬಶೀರ್ ಅವರು ತನ್ನ ಬೈಕ್ ಅನ್ನು ರಸ್ತೆಯಲ್ಲಿ ನಿಲ್ಲಿಸಿದ್ದಾಗ ಶ್ರೀರಾಮ್ ಅವರ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದರು.

“ಅಪಘಾತದ ವೇಳೆ ಶ್ರೀರಾಮ್ ಅವರು ಕುಡಿದು ವಾಹನ ಚಲಾಯಿಸುತ್ತಿದ್ದರು. ಅಪಘಾತದ ನಂತರ ಅವರು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಮತ್ತು ಗಂಟೆಗಳ ಕಾಲ ರಕ್ತ ಪರೀಕ್ಷೆಯನ್ನು ನೀಡಲು ಒಪ್ಪಲಿಲ್ಲ” ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಕೇರಳದ ಸುನ್ನಿ ಸಂಘಟನೆಗಳು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದರ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಬದಲಾಗಿ ಅವರು ಬ್ರಾಹ್ಮಣ ಎಂಬ ಕಾರಣಕ್ಕೆ ಪ್ರತಿಭಟನೆ ನಡೆದಿರಲಿಲ್ಲ.

ಬಲಪಂಥೀಯ ನಾಯಕ ಅರ್ಜುನ್ ಸಂಪತ್ ಹಂಚಿಕೊಂಡಿರುವ ವಿಡಿಯೋದಲ್ಲಿ ‘‘ಕಲೆಕ್ಟರ್ ನೇಮಕದ ಆದೇಶವನ್ನು ಹಿಂಪಡೆಯಿರಿ. ಸರಕಾರವೇ, ಕೊಲೆಗಡುಕನಾದ ಕುಡುಕನಿಗೆ ಅಧಿಕಾರವನ್ನು ಒಪ್ಪಿಸಲು ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂಬ ಘೋಷಣೆಗಳನ್ನು ಕೂಗಲಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಜಿಲ್ಲಾಧಿಕಾರಿಯನ್ನು ನೇಮಕಾತಿ ಆದೇಶ ಬಂದಾಗಿನಿಂದ ಕೇರಳ ಮುಸ್ಲಿಂ ಜಮಾತ್ ಮಾತ್ರವಲ್ಲದೆ ರಾಜ್ಯದ ಪತ್ರಕರ್ತರು ಸೇರಿದಂತೆ ಹಲವು ಸಂಘಟನೆಗಳು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಆದರೆ ರಾಜಕಿಯೇತರ ಮುಸ್ಲಿಂ ಸಂಘಟನೆಗಳು ಇದನ್ನು ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಿದ ನಂತರ ಬಲಪಂಥೀಯರು ಪ್ರತಿಭಟನೆಗೆ ಕೋಮು ಬಣ್ಣ ಹಚ್ಚಿದ್ದಾರೆ.

ಜುಲೈ 26 ರಂದು ಐಎಎಸ್ ಅಧಿಕಾರಿ ಅಧಿಕಾರ ಸ್ವೀಕರಿಸಲು ಕಲೆಕ್ಟರೇಟ್ ತಲುಪಿದಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೊರಹಾಕಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಅಲಪ್ಪುಳದ ಮಾಜಿ ಸಂಸದ ಕೆ.ಸಿ. ವೇಣುಗೋಪಾಲ್ ಅವರು, ಜಿಲ್ಲಾಧಿಕಾರಿಯನ್ನು ‘ಕಳಂಕಿತ ಅಧಿಕಾರಿ’ ಎಂದು ಕರೆದಿದ್ದಾರೆ.

ಹರಿಪಾದ್ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಕೂಡ ನೇಮಕಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಯ ನೇಮಕಾತಿಯನ್ನು ವಿರೋಧಿಸಿ ಆಲಪ್ಪುಳದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ನೇಮಕಾತಿಯನ್ನು ವಿರೋಧಿಸಿದೆ. ಸಾರ್ವಜನಿಕರೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕಾದ ಹುದ್ದೆಯಲ್ಲಿ ಕೊಲೆ ಆರೋಪಿ ಶ್ರೀರಾಮ್ ಅವರನ್ನು ಏಕೆ ನೇಮಿಸಲಾಗಿದೆ ಎಂದು ಎರಡೂ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಜುಲೈ 27 ರಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ಕಲೆಕ್ಟರೇಟ್ ಹೊರಗೆ ಅಲಪ್ಪುಳದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೇರಳದ ವಿವಿಧ ಜಿಲ್ಲೆಗಳಲ್ಲಿ ಇದೇ ರೀತಿಯ ಪ್ರತಿಭಟನೆಗಳನ್ನು ಪತ್ರಕರ್ತರು ನಡೆಸಿದ್ದರು.

ಆದಾಗ್ಯೂ ಕೆಲವು ಗುಂಪುಗಳು ಪ್ರತಿಭಟನೆಗಳಿಗೆ ಕೋಮು ಬಣ್ಣ ನೀಡಿದ್ದಾರೆ. ಕ್ರಿಶ್ಚಿಯನ್ ಮೂಲಭೂತವಾದಿ ಸಂಘಟನೆಯಾದ ಡೆಮಾಕ್ರಟಿಕ್ ಕ್ರಿಶ್ಚಿಯನ್ ಫೆಡರೇಶನ್ ಕೇರಳ, ಪ್ರತಿಭಟನೆಯನ್ನು ಫೇಸ್‌ಬುಕ್‌ನಲ್ಲಿ ಟೀಕಿಸುತ್ತಾ,“ಸಾವಿಗೀಡಾದವರಿಗಿಂತ ಜಿಲ್ಲಾಧಿಕಾರಿಗೆ ಹೆಚ್ಚು ಸಹಾನುಭೂತಿ ವ್ಯಕ್ತಪಡಿಸುತ್ತೇವೆ. ಅದಕ್ಕೆ ಕಾರಣ ಅವರ ಧಾರ್ಮಿಕ ಉಗ್ರವಾದ. ಪತ್ರಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವುದು ಇದೇ ಮೊದಲಲ್ಲ. ನಾಗರಿಕ ಸೇವಾ ಅಧಿಕಾರಿಯೊಬ್ಬರು ವಿಚಾರಣೆ ಎದುರಿಸುತ್ತಿರುವುದು ಇದೇ ಮೊದಲಲ್ಲ”

“ಹಾಗಾದರೆ ಈ ಪ್ರತಿಭಟನೆಗಳು ಏಕೆ ನಡೆಯುತ್ತಿವೆ? ಏಕೆಂದರೆ ಇದು ಕೇವಲ ಪ್ರತಿಭಟನೆಯಲ್ಲ. ಇದು ವೆಂಕಟರಾಮನ್‌ಗೆ ಮಾತ್ರವಲ್ಲ, ಅಧಿಕಾರಶಾಹಿ ಮತ್ತು ಸರ್ಕಾರಕ್ಕೆ ಬೆದರಿಕೆಯಾಗಿದೆ. ಒಬ್ಬ ಮುಸಲ್ಮಾನನನ್ನು ಕೊಂದ ಮಾತ್ರಕ್ಕೆ ಅವರು ಬೀದಿಪಾಲಾಗಿದ್ದಾರೆ. ಸತ್ತವರು ರಾಮನ್, ಕೃಷ್ಣನ್ ಅಥವಾ ವರ್ಗೀಸ್ ಆಗಿದ್ದರೆ ಮತ್ತು ಕಾರು ಓಡಿಸಿದವರು ಸಲಾಂ ಅಥವಾ ರಹೀಮ್ ಆಗಿದ್ದರೆ, ಬೀದಿಗಳು ಖಾಲಿಯಾಗಿ ಇರುತ್ತಿದ್ದವು” ಎಂದು ಅದು ಹೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮತ್ತೊಂದು ಕ್ರಿಶ್ಚಿಯನ್ ಮೂಲಭೂತವಾದಿ ಗುಂಪು CASA ತಮ್ಮ ಎಫ್‌ಬಿ ಪೋಸ್ಟ್‌ನಲ್ಲಿ, “ಅವರ ಮುಂದಿರುವ ಸಮಸ್ಯೆ ಶ್ರೀರಾಮ್ ವೆಂಕಟರಾಮನ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರನ್ನಾದರೂ ಕೊಂದದ್ದಲ್ಲ. ಸತ್ತವರು ತಮ್ಮ ಸಮುದಾಯದ ಸದಸ್ಯರಾಗಿದ್ದಾರೆ ಎಂಬ ಕಾರಣ ಮಾತ್ರ” ಎಂದು ಹೇಳಿತ್ತು.

ಇದೇ ರೀತಿಯ ಸಂದೇಶಗಳು ಅನೇಕ ವಾಟ್ಸಾಪ್ ಗುಂಪುಗಳಲ್ಲಿ ಕಾಣಿಸಿಕೊಂಡಿವೆ. “ಮೃತ ವ್ಯಕ್ತಿ ಮುಸ್ಲಿಂ ಆಗಿರುವುದರಿಂದ ಭಯೋತ್ಪಾದಕ ಗುಂಪುಗಳ ಸಹಾನುಭೂತಿ. ಶ್ರೀರಾಮ್ ಒಬ್ಬ ಬ್ರಾಹ್ಮಣ, ಹಿಂದೂ ವ್ಯಕ್ತಿ. ಹಾಗಾಗಿ ಇಲ್ಲಿ ಪ್ರತಿಭಟನೆ ಧರ್ಮದ ವಿರುದ್ಧವಾಗಿದೆ. ಅವರು ತಮ್ಮ ಶಕ್ತಿ ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ, ಇದು ಸಾಮಾಜಿಕ ಕಾರಣಕ್ಕಾಗಿ ನಡೆದ ಪ್ರತಿಭಟನೆಯಲ್ಲ” ಎಂದು ಪ್ರತಿಪಾದಿಸಿದ್ದವು.

ಪ್ರತಿಭಟನೆಗಳು ಹೆಚ್ಚಾಗುತ್ತಿದ್ದಂತೆ, ಕೇರಳ ಸರ್ಕಾರವು ಆಗಸ್ಟ್ 1 ರಂದು ಶ್ರೀರಾಮ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕೇರಳ ರಾಜ್ಯ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...