Homeಚಳವಳಿಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ರಾಜ್ಯದ ದಲಿತ ಸಂಘಟನೆಗಳ 12 ಬಣಗಳು ಒಗ್ಗೂಡಿ 'ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ' ರಚಿಸಲಾಗಿದೆ.

- Advertisement -
- Advertisement -

ಸಂವಿಧಾನದಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸಾಮಾಜಿಕ ನ್ಯಾಯ ಮತ್ತು ಪ್ರಾತಿನಿಧ್ಯವನ್ನು ಖಾತ್ರಿಪಡಿಸುವುದಕ್ಕಾಗಿಯೇ ಹೊರತು ಬಡತನ ನಿರ್ಮೂಲನೆಗಾಗಿ ಅಲ್ಲ. ಹಾಗಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ EWS ಮೀಸಲಾತಿ ನೀಡುವುದು ಸಂವಿಧಾನಬಾಹಿರವಾದುದು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು ಸಾಮಾಜಿಕ ನ್ಯಾಯಕ್ಕೆ ಆದ ಬಹುದೊಡ್ಡ ಹಿನ್ನಡೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡಬ್ಲ್ಯೂಎಸ್ ತೀರ್ಪು ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಅದು ಮೀಸಲಾತಿ ಪರಿಕಲ್ಪನೆಯನ್ನೆ ಬುಡಮೇಲು ಮಾಡುತ್ತದೆ. ಈ ಇಡಬ್ಲ್ಯೂಎಸ್ ತೀರ್ಪು ಸಂವಿಧಾನದ ಮೇಲಿನ ನೇರ ದಾಳಿ” ಎಂದು ಅಭಿಪ್ರಾಯಪಟ್ಟರು.

“ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕೊಡಬೇಕು ಎನ್ನುವಾಗ ಮಾತ್ರ, ಯಾವ ಆಧಾರದ ಮೇಲೆ ಕೊಡುತ್ತೀರಿ, ಜಾತಿ ಸಮೀಕ್ಷೆ ಮಾಡಿದ್ದೀರಾ? ಅವರ ಆರ್ಥಿಕ ಸ್ಥಿತಿಗತಿ ಅಧ್ಯಯನ ನಡೆಸಿದ್ದೀರಾ ಎಂಬ ಪ್ರಶ್ನೆಗಳು ಮುನ್ನೆಲೆಗೆ ಬರುತ್ತವೆ. ಆದರೆ ಮೀಸಲಾತಿ ವಿರುದ್ಧವೆ ಮಾತಾಡಿಕೊಂಡ ಬಂದ ಸಮುದಾಯಗಳು, ಇಂದು ಏಕಾಏಕಿ ಮೀಸಲಾತಿಯನ್ನು ಪಡೆಯುತ್ತಿವೆ. ಒಂದು ದಿನ ಹೋರಾಟ ಮಾಡದವರಿಗೆ ಈ ಸೌಲಭ್ಯ ಸಿಗುತ್ತಿದೆ? ಇದಕ್ಕೆ ಯಾವ ಆಧಾರಗಳಿವೆ ಎಂದು ಅವರು ಕಿಡಿಕಾರಿದರು.

ನಮ್ಮ ಉನ್ನತ ನ್ಯಾಯಾಂಗದಲ್ಲಿಯೂ ಹಿಂದುಳಿದ ಸಮುದಾಯಗಳ ಪ್ರಾತಿನಿಧ್ಯ ಇಲ್ಲದ ಕಾರಣ ಈ ರೀತಿಯ ತೀರ್ಪುಗಳು ಬರುತ್ತವೆ. ನಾವು ಅದನ್ನು ಸರಿಪಡಿಸಿ ತಳಸಮುದಾಯಗಳು ಅಲ್ಲಿ ಪಾಲುದಾರರಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಸಹ ಮೀಸಲಾತಿ ಜಾರಿಗಾಗಿ ಹೋರಾಡಬೇಕು ಎಂದು ಕರೆ ನೀಡಿದರು.

ಡಿಸೆಂಬರ್ 06 ರಂದು ದಲಿತ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ

ರಾಜ್ಯದಲ್ಲಿ ಮತ್ತು ದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನ ವಿರೋಧಿ ಆಡಳಿತದ ಮೂಲಕ ಪ್ರಜಾಪ್ರಭುತ್ವ ಸಂವಿಧಾನ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಹೊಸಕಿ ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ದಲಿತ ಸಂಘಟನೆಗಳು ಒಗ್ಗಟ್ಟಾಗಬೇಕಾದ ಜರೂರು ಅತೀ ಅಗತ್ಯವಾಗಿದೆ. ಅದಕ್ಕಾಗಿ ನಾವೆಲ್ಲರೂ ಒಂದಾಗಿ 12 ಬಣಗಳು ಒಗ್ಗೂಡಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರಚಿಸಲಾಗಿದೆ ಎಂದು ಮುಖಂಡರಾದ ಇಂದೂಧರ ಹೊನ್ನಾಪುರ ತಿಳಿಸಿದರು.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಲ್ಲಿ “ರಾಜ್ಯ ದಲಿತ ಸಂಘರ್ಷ ಸಮಿತಿಯ ಎನ್ ವೆಂಕಟೇಶ್, ಡಾ. ಡಿ ಜಿ ಸಾಗರ್, ಎನ್ ಮುನಿಸ್ವಾಮಿ, ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ, ಎಂ ಸೋಮಶೇಖರ್, ಗುರುಪ್ರಸಾದ್ ಕೆರಗೋಡು, ಅಣ್ಣಯ್ಯ ಜಿಗಣಿ ಶಂಕರ್, ವಿ ನಾಗರಾಜ್‌, ಅರ್ಜುನ ಭದ್ರೆ, ಎಸ್ ಆರ್ ಕೊಲ್ಲೂರು” ಅವರೆಲ್ಲರೂ ಸೇರಿದ್ದಾರೆ ಎಂದರು.

ಚಾಲನಾ ಸಮಿತಿಯ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ದಿನದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿ. 6ರಂದು “ದಲಿತ ಸಾಂಸ್ಕೃತಿಕ ಪ್ರತಿರೋಧ” ಸಮಾವೇಶ ಏರ್ಪಡಿಸಲಾಗಿದೆ ಎಂದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಸ್ವಾತಂತ್ರ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್.ಎಸ್‌ಎಸ್ ಮತ್ತು ಬಿಜೆಪಿಯ ಸರ್ವಾಧಿಕಾರಿ ದುರಾಡಳಿತದ” ವಿರುದ್ಧ ಸಮಾವೇಶ ಆಯೋಜಿಸಲಾಗಿದೆ.

ಇದನ್ನೂ ಓದಿ; ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...