Homeಚಳವಳಿಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆಯಲ್ಲ: EWS ಮೀಸಲಾತಿ ವಿರುದ್ಧ ದಸಂಸ ಖಂಡನೆ

ರಾಜ್ಯದ ದಲಿತ ಸಂಘಟನೆಗಳ 12 ಬಣಗಳು ಒಗ್ಗೂಡಿ 'ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ' ರಚಿಸಲಾಗಿದೆ.

- Advertisement -
- Advertisement -

ಸಂವಿಧಾನದಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿರುವುದು ಸಾಮಾಜಿಕ ನ್ಯಾಯ ಮತ್ತು ಪ್ರಾತಿನಿಧ್ಯವನ್ನು ಖಾತ್ರಿಪಡಿಸುವುದಕ್ಕಾಗಿಯೇ ಹೊರತು ಬಡತನ ನಿರ್ಮೂಲನೆಗಾಗಿ ಅಲ್ಲ. ಹಾಗಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ EWS ಮೀಸಲಾತಿ ನೀಡುವುದು ಸಂವಿಧಾನಬಾಹಿರವಾದುದು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮುಖಂಡರಾದ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು ಸಾಮಾಜಿಕ ನ್ಯಾಯಕ್ಕೆ ಆದ ಬಹುದೊಡ್ಡ ಹಿನ್ನಡೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡಬ್ಲ್ಯೂಎಸ್ ತೀರ್ಪು ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಅದು ಮೀಸಲಾತಿ ಪರಿಕಲ್ಪನೆಯನ್ನೆ ಬುಡಮೇಲು ಮಾಡುತ್ತದೆ. ಈ ಇಡಬ್ಲ್ಯೂಎಸ್ ತೀರ್ಪು ಸಂವಿಧಾನದ ಮೇಲಿನ ನೇರ ದಾಳಿ” ಎಂದು ಅಭಿಪ್ರಾಯಪಟ್ಟರು.

“ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕೊಡಬೇಕು ಎನ್ನುವಾಗ ಮಾತ್ರ, ಯಾವ ಆಧಾರದ ಮೇಲೆ ಕೊಡುತ್ತೀರಿ, ಜಾತಿ ಸಮೀಕ್ಷೆ ಮಾಡಿದ್ದೀರಾ? ಅವರ ಆರ್ಥಿಕ ಸ್ಥಿತಿಗತಿ ಅಧ್ಯಯನ ನಡೆಸಿದ್ದೀರಾ ಎಂಬ ಪ್ರಶ್ನೆಗಳು ಮುನ್ನೆಲೆಗೆ ಬರುತ್ತವೆ. ಆದರೆ ಮೀಸಲಾತಿ ವಿರುದ್ಧವೆ ಮಾತಾಡಿಕೊಂಡ ಬಂದ ಸಮುದಾಯಗಳು, ಇಂದು ಏಕಾಏಕಿ ಮೀಸಲಾತಿಯನ್ನು ಪಡೆಯುತ್ತಿವೆ. ಒಂದು ದಿನ ಹೋರಾಟ ಮಾಡದವರಿಗೆ ಈ ಸೌಲಭ್ಯ ಸಿಗುತ್ತಿದೆ? ಇದಕ್ಕೆ ಯಾವ ಆಧಾರಗಳಿವೆ ಎಂದು ಅವರು ಕಿಡಿಕಾರಿದರು.

ನಮ್ಮ ಉನ್ನತ ನ್ಯಾಯಾಂಗದಲ್ಲಿಯೂ ಹಿಂದುಳಿದ ಸಮುದಾಯಗಳ ಪ್ರಾತಿನಿಧ್ಯ ಇಲ್ಲದ ಕಾರಣ ಈ ರೀತಿಯ ತೀರ್ಪುಗಳು ಬರುತ್ತವೆ. ನಾವು ಅದನ್ನು ಸರಿಪಡಿಸಿ ತಳಸಮುದಾಯಗಳು ಅಲ್ಲಿ ಪಾಲುದಾರರಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಸಹ ಮೀಸಲಾತಿ ಜಾರಿಗಾಗಿ ಹೋರಾಡಬೇಕು ಎಂದು ಕರೆ ನೀಡಿದರು.

ಡಿಸೆಂಬರ್ 06 ರಂದು ದಲಿತ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ

ರಾಜ್ಯದಲ್ಲಿ ಮತ್ತು ದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನ ವಿರೋಧಿ ಆಡಳಿತದ ಮೂಲಕ ಪ್ರಜಾಪ್ರಭುತ್ವ ಸಂವಿಧಾನ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಹೊಸಕಿ ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ದಲಿತ ಸಂಘಟನೆಗಳು ಒಗ್ಗಟ್ಟಾಗಬೇಕಾದ ಜರೂರು ಅತೀ ಅಗತ್ಯವಾಗಿದೆ. ಅದಕ್ಕಾಗಿ ನಾವೆಲ್ಲರೂ ಒಂದಾಗಿ 12 ಬಣಗಳು ಒಗ್ಗೂಡಿ ‘ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ’ ರಚಿಸಲಾಗಿದೆ ಎಂದು ಮುಖಂಡರಾದ ಇಂದೂಧರ ಹೊನ್ನಾಪುರ ತಿಳಿಸಿದರು.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಲ್ಲಿ “ರಾಜ್ಯ ದಲಿತ ಸಂಘರ್ಷ ಸಮಿತಿಯ ಎನ್ ವೆಂಕಟೇಶ್, ಡಾ. ಡಿ ಜಿ ಸಾಗರ್, ಎನ್ ಮುನಿಸ್ವಾಮಿ, ಮಾವಳ್ಳಿ ಶಂಕರ್, ಲಕ್ಷ್ಮೀನಾರಾಯಣ ನಾಗವಾರ, ಎಂ ಸೋಮಶೇಖರ್, ಗುರುಪ್ರಸಾದ್ ಕೆರಗೋಡು, ಅಣ್ಣಯ್ಯ ಜಿಗಣಿ ಶಂಕರ್, ವಿ ನಾಗರಾಜ್‌, ಅರ್ಜುನ ಭದ್ರೆ, ಎಸ್ ಆರ್ ಕೊಲ್ಲೂರು” ಅವರೆಲ್ಲರೂ ಸೇರಿದ್ದಾರೆ ಎಂದರು.

ಚಾಲನಾ ಸಮಿತಿಯ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ದಿನದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿ. 6ರಂದು “ದಲಿತ ಸಾಂಸ್ಕೃತಿಕ ಪ್ರತಿರೋಧ” ಸಮಾವೇಶ ಏರ್ಪಡಿಸಲಾಗಿದೆ ಎಂದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಸ್ವಾತಂತ್ರ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್.ಎಸ್‌ಎಸ್ ಮತ್ತು ಬಿಜೆಪಿಯ ಸರ್ವಾಧಿಕಾರಿ ದುರಾಡಳಿತದ” ವಿರುದ್ಧ ಸಮಾವೇಶ ಆಯೋಜಿಸಲಾಗಿದೆ.

ಇದನ್ನೂ ಓದಿ; ಸುಳ್ಯ: 2 ಹಳ್ಳಿಗಳ 4 ಕಿ.ಮಿ. ಅಂತರದಲ್ಲಿ 2 ಬಾರ್‌‌ ಓಪನ್‌; ಗ್ರಾಮಸ್ಥರ ಪ್ರತಿಭಟನೆ ಕೇಳುವವರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...