Homeಕರ್ನಾಟಕ’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮಾಡಲಾಗಿರುವ ಪಠ್ಯ ಪುಸ್ತಕ ಮರು ಪರಿಷ್ಕರಣೆಯನ್ನು ವಿರೋಧಿಸಿ ಪಠ್ಯ ವಾಪಾಸಾತಿ ಚಳವಳಿ ಮುಂದುವರೆಯುತ್ತಿದೆ. ಡಾ.ಆರ್.ವಿ. ಭಂಡಾರಿಯವರು ಬರೆದ ‘ಹಾರಿಹೋದ ಹಕ್ಕಿಗಳು’ ಕವನವನ್ನು ಪರಿಷ್ಕೃತ ಪಠ್ಯದಲ್ಲಿ ಅಳವಡಿಸಿಕೊಳ್ಳಲು ನೀಡಿರುವ ಪರವಾನಗಿಯನ್ನು ಹಿಂಪಡೆದಿರುವುದಾಗಿ ಅವರ ಕುಟುಂಬಿಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಶುಕ್ರವಾರದಂದು ಪತ್ರ ಬರೆದಿದ್ದಾರೆ.

ಆರ್‌.ವಿ. ಭಂಡಾರಿ ಅವರ ಸೊಸೆ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರು ಕುಟುಂಬಸ್ಥರ ಪರವಾಗಿ ಬರೆದಿರುವ ಪತ್ರದಲ್ಲಿ,“ಸಧ್ಯದ ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅವರ ಬರಹವನ್ನು ಬಳಸಿಕೊಳ್ಳು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಮುನಾ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ನಾಡಿನ ಜನತೆಯ ಸಾಕ್ಷಿ ಪ್ರಜ್ಞೆಯಂತಿದ್ದ ಡಾ. ಆರ್. ವಿ. ಭಂಡಾರಿಯವರು ಅರವತ್ತರ ದಶಕದಲ್ಲಿಯೇ ಎರಡು ಸ್ನಾತಕೋತ್ತರ ಉನ್ನತ ಪದವಿಗಳನ್ನು ನಂತರ ಸಂಶೋಧನಾ ಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕೊನೆಯವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಸಲ್ಲಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

“ಮೂವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಮನಸ್ಸನ್ನು ಅರಳಿಸುವ ಪರಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಂಡವರು. ನೂರಾರು ಪುಸ್ತಕ ಬರೆದು ಮಕ್ಕಳ ಸಾಹಿತ್ಯ, ವಿಮರ್ಶೆ, ಕತೆ, ಕಾದಂಬರಿ, ವೈಚಾರಿಕ, ಮಾನವಿಕ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದವರು. ಪ್ರಸಿದ್ಧ ತಾಳಮದ್ದಲೆ ಅರ್ಥಧಾರಿಗಳೂ ಆಗಿದ್ದರು”

“ಸಾಕ್ಷರತಾ ಆಂದೋಲನವನ್ನು ಒಳಗೊಂಡು ಶೈಕ್ಷಣಿಕ ಎಲ್ಲಾ ಕೆಲಸಗಳಲ್ಲಿ ಇದ್ದವರು. ಅಂದು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ಗ್ರಂಥಾಲಯ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಲವತ್ತು ದಶಕಗಳ ಕಾಲ ವಿವಿಧ ಸರ್ಕಾರಗಳ ಅವಧಿಯಲ್ಲಿ ಪಠ್ಯ ಪುಸ್ತಕ ರಚನೆಗೆ ತನ್ನ ಪ್ರಬುದ್ಧ ಸಲಹೆಗಳನ್ನು, ಅಗತ್ಯವಿದ್ದಲ್ಲಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸುವಲ್ಲಿ ತೊಡಗಿಸಿಕೊಂಡಿದ್ದರು” ಎಂದು ಯಮುನಾ ಹೇಳಿದ್ದಾರೆ.

“ಕಳೆದ ಅವಧಿಯಲ್ಲಿ ತಿಳಿ ಕನ್ನಡ, ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ, ಪರಿಷ್ಕೃತ, (ಎರಡನೇ ಭಾಷೆ, ಕನ್ನಡ ಪಠ್ಯಪುಸ್ತಕ) ಎಂಟನೆಯ ತರಗತಿಯ ಪರಿವಿಡಿಯ ಪದ್ಯಭಾಗದ 2 ನೇ ಕವನ ಪುಟ ಸಂಖ್ಯೆ 69-71ರಲ್ಲಿರುವ ಆರ್.ವಿ. ಭಂಡಾರಿಯವರು ಬರೆದ ‘ಹಾರಿದ ಹಕ್ಕಿಗಳು’ ಕವನವನ್ನು ಪಠ್ಯದಲ್ಲಿ ಬಳಸಲು ನೀಡಿದ ಪರವಾನಗಿಯನ್ನು ಡಾ. ಆರ್. ವಿ. ಭಂಡಾರಿಯವರ ಕುಟುಂಬದ ಪರವಾಗಿ ನೀಡಲಾಗಿತ್ತು” ಎಂದು ಯಮುನಾ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಶಿಕ್ಷಣ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಅವರು, “ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ-ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬ ವರ್ಗ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಉಳಿಸಿಕೊಳ್ಳಲು ಅನುಮತಿಯನ್ನು ಹಿಂತೆದುಕೊಂಡಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಿಯ ಯಮುನಾ,
    ಆರ್ವಿ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಕೊಟ್ಟ ಅನುಮತಿಯನ್ನು ಹಿಂತೆಗೆದುಕೊಂಡ ನಿಮ್ಮ ಕುಟುಂಬದ ತೀರ್ಮಾನ ಸಮಯೋಚಿತ.

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...