Homeಕರ್ನಾಟಕ’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮಾಡಲಾಗಿರುವ ಪಠ್ಯ ಪುಸ್ತಕ ಮರು ಪರಿಷ್ಕರಣೆಯನ್ನು ವಿರೋಧಿಸಿ ಪಠ್ಯ ವಾಪಾಸಾತಿ ಚಳವಳಿ ಮುಂದುವರೆಯುತ್ತಿದೆ. ಡಾ.ಆರ್.ವಿ. ಭಂಡಾರಿಯವರು ಬರೆದ ‘ಹಾರಿಹೋದ ಹಕ್ಕಿಗಳು’ ಕವನವನ್ನು ಪರಿಷ್ಕೃತ ಪಠ್ಯದಲ್ಲಿ ಅಳವಡಿಸಿಕೊಳ್ಳಲು ನೀಡಿರುವ ಪರವಾನಗಿಯನ್ನು ಹಿಂಪಡೆದಿರುವುದಾಗಿ ಅವರ ಕುಟುಂಬಿಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಶುಕ್ರವಾರದಂದು ಪತ್ರ ಬರೆದಿದ್ದಾರೆ.

ಆರ್‌.ವಿ. ಭಂಡಾರಿ ಅವರ ಸೊಸೆ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರು ಕುಟುಂಬಸ್ಥರ ಪರವಾಗಿ ಬರೆದಿರುವ ಪತ್ರದಲ್ಲಿ,“ಸಧ್ಯದ ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅವರ ಬರಹವನ್ನು ಬಳಸಿಕೊಳ್ಳು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಮುನಾ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ನಾಡಿನ ಜನತೆಯ ಸಾಕ್ಷಿ ಪ್ರಜ್ಞೆಯಂತಿದ್ದ ಡಾ. ಆರ್. ವಿ. ಭಂಡಾರಿಯವರು ಅರವತ್ತರ ದಶಕದಲ್ಲಿಯೇ ಎರಡು ಸ್ನಾತಕೋತ್ತರ ಉನ್ನತ ಪದವಿಗಳನ್ನು ನಂತರ ಸಂಶೋಧನಾ ಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕೊನೆಯವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಸಲ್ಲಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

“ಮೂವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಮನಸ್ಸನ್ನು ಅರಳಿಸುವ ಪರಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಂಡವರು. ನೂರಾರು ಪುಸ್ತಕ ಬರೆದು ಮಕ್ಕಳ ಸಾಹಿತ್ಯ, ವಿಮರ್ಶೆ, ಕತೆ, ಕಾದಂಬರಿ, ವೈಚಾರಿಕ, ಮಾನವಿಕ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದವರು. ಪ್ರಸಿದ್ಧ ತಾಳಮದ್ದಲೆ ಅರ್ಥಧಾರಿಗಳೂ ಆಗಿದ್ದರು”

“ಸಾಕ್ಷರತಾ ಆಂದೋಲನವನ್ನು ಒಳಗೊಂಡು ಶೈಕ್ಷಣಿಕ ಎಲ್ಲಾ ಕೆಲಸಗಳಲ್ಲಿ ಇದ್ದವರು. ಅಂದು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ಗ್ರಂಥಾಲಯ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಲವತ್ತು ದಶಕಗಳ ಕಾಲ ವಿವಿಧ ಸರ್ಕಾರಗಳ ಅವಧಿಯಲ್ಲಿ ಪಠ್ಯ ಪುಸ್ತಕ ರಚನೆಗೆ ತನ್ನ ಪ್ರಬುದ್ಧ ಸಲಹೆಗಳನ್ನು, ಅಗತ್ಯವಿದ್ದಲ್ಲಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸುವಲ್ಲಿ ತೊಡಗಿಸಿಕೊಂಡಿದ್ದರು” ಎಂದು ಯಮುನಾ ಹೇಳಿದ್ದಾರೆ.

“ಕಳೆದ ಅವಧಿಯಲ್ಲಿ ತಿಳಿ ಕನ್ನಡ, ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ, ಪರಿಷ್ಕೃತ, (ಎರಡನೇ ಭಾಷೆ, ಕನ್ನಡ ಪಠ್ಯಪುಸ್ತಕ) ಎಂಟನೆಯ ತರಗತಿಯ ಪರಿವಿಡಿಯ ಪದ್ಯಭಾಗದ 2 ನೇ ಕವನ ಪುಟ ಸಂಖ್ಯೆ 69-71ರಲ್ಲಿರುವ ಆರ್.ವಿ. ಭಂಡಾರಿಯವರು ಬರೆದ ‘ಹಾರಿದ ಹಕ್ಕಿಗಳು’ ಕವನವನ್ನು ಪಠ್ಯದಲ್ಲಿ ಬಳಸಲು ನೀಡಿದ ಪರವಾನಗಿಯನ್ನು ಡಾ. ಆರ್. ವಿ. ಭಂಡಾರಿಯವರ ಕುಟುಂಬದ ಪರವಾಗಿ ನೀಡಲಾಗಿತ್ತು” ಎಂದು ಯಮುನಾ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಶಿಕ್ಷಣ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಅವರು, “ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ-ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬ ವರ್ಗ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಉಳಿಸಿಕೊಳ್ಳಲು ಅನುಮತಿಯನ್ನು ಹಿಂತೆದುಕೊಂಡಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಿಯ ಯಮುನಾ,
    ಆರ್ವಿ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಕೊಟ್ಟ ಅನುಮತಿಯನ್ನು ಹಿಂತೆಗೆದುಕೊಂಡ ನಿಮ್ಮ ಕುಟುಂಬದ ತೀರ್ಮಾನ ಸಮಯೋಚಿತ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...