Homeಕರ್ನಾಟಕ’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮಾಡಲಾಗಿರುವ ಪಠ್ಯ ಪುಸ್ತಕ ಮರು ಪರಿಷ್ಕರಣೆಯನ್ನು ವಿರೋಧಿಸಿ ಪಠ್ಯ ವಾಪಾಸಾತಿ ಚಳವಳಿ ಮುಂದುವರೆಯುತ್ತಿದೆ. ಡಾ.ಆರ್.ವಿ. ಭಂಡಾರಿಯವರು ಬರೆದ ‘ಹಾರಿಹೋದ ಹಕ್ಕಿಗಳು’ ಕವನವನ್ನು ಪರಿಷ್ಕೃತ ಪಠ್ಯದಲ್ಲಿ ಅಳವಡಿಸಿಕೊಳ್ಳಲು ನೀಡಿರುವ ಪರವಾನಗಿಯನ್ನು ಹಿಂಪಡೆದಿರುವುದಾಗಿ ಅವರ ಕುಟುಂಬಿಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಶುಕ್ರವಾರದಂದು ಪತ್ರ ಬರೆದಿದ್ದಾರೆ.

ಆರ್‌.ವಿ. ಭಂಡಾರಿ ಅವರ ಸೊಸೆ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರು ಕುಟುಂಬಸ್ಥರ ಪರವಾಗಿ ಬರೆದಿರುವ ಪತ್ರದಲ್ಲಿ,“ಸಧ್ಯದ ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅವರ ಬರಹವನ್ನು ಬಳಸಿಕೊಳ್ಳು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಮುನಾ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ನಾಡಿನ ಜನತೆಯ ಸಾಕ್ಷಿ ಪ್ರಜ್ಞೆಯಂತಿದ್ದ ಡಾ. ಆರ್. ವಿ. ಭಂಡಾರಿಯವರು ಅರವತ್ತರ ದಶಕದಲ್ಲಿಯೇ ಎರಡು ಸ್ನಾತಕೋತ್ತರ ಉನ್ನತ ಪದವಿಗಳನ್ನು ನಂತರ ಸಂಶೋಧನಾ ಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕೊನೆಯವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಸಲ್ಲಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

“ಮೂವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಮನಸ್ಸನ್ನು ಅರಳಿಸುವ ಪರಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಂಡವರು. ನೂರಾರು ಪುಸ್ತಕ ಬರೆದು ಮಕ್ಕಳ ಸಾಹಿತ್ಯ, ವಿಮರ್ಶೆ, ಕತೆ, ಕಾದಂಬರಿ, ವೈಚಾರಿಕ, ಮಾನವಿಕ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದವರು. ಪ್ರಸಿದ್ಧ ತಾಳಮದ್ದಲೆ ಅರ್ಥಧಾರಿಗಳೂ ಆಗಿದ್ದರು”

“ಸಾಕ್ಷರತಾ ಆಂದೋಲನವನ್ನು ಒಳಗೊಂಡು ಶೈಕ್ಷಣಿಕ ಎಲ್ಲಾ ಕೆಲಸಗಳಲ್ಲಿ ಇದ್ದವರು. ಅಂದು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ಗ್ರಂಥಾಲಯ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಲವತ್ತು ದಶಕಗಳ ಕಾಲ ವಿವಿಧ ಸರ್ಕಾರಗಳ ಅವಧಿಯಲ್ಲಿ ಪಠ್ಯ ಪುಸ್ತಕ ರಚನೆಗೆ ತನ್ನ ಪ್ರಬುದ್ಧ ಸಲಹೆಗಳನ್ನು, ಅಗತ್ಯವಿದ್ದಲ್ಲಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸುವಲ್ಲಿ ತೊಡಗಿಸಿಕೊಂಡಿದ್ದರು” ಎಂದು ಯಮುನಾ ಹೇಳಿದ್ದಾರೆ.

“ಕಳೆದ ಅವಧಿಯಲ್ಲಿ ತಿಳಿ ಕನ್ನಡ, ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ, ಪರಿಷ್ಕೃತ, (ಎರಡನೇ ಭಾಷೆ, ಕನ್ನಡ ಪಠ್ಯಪುಸ್ತಕ) ಎಂಟನೆಯ ತರಗತಿಯ ಪರಿವಿಡಿಯ ಪದ್ಯಭಾಗದ 2 ನೇ ಕವನ ಪುಟ ಸಂಖ್ಯೆ 69-71ರಲ್ಲಿರುವ ಆರ್.ವಿ. ಭಂಡಾರಿಯವರು ಬರೆದ ‘ಹಾರಿದ ಹಕ್ಕಿಗಳು’ ಕವನವನ್ನು ಪಠ್ಯದಲ್ಲಿ ಬಳಸಲು ನೀಡಿದ ಪರವಾನಗಿಯನ್ನು ಡಾ. ಆರ್. ವಿ. ಭಂಡಾರಿಯವರ ಕುಟುಂಬದ ಪರವಾಗಿ ನೀಡಲಾಗಿತ್ತು” ಎಂದು ಯಮುನಾ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಶಿಕ್ಷಣ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಅವರು, “ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ-ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬ ವರ್ಗ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಉಳಿಸಿಕೊಳ್ಳಲು ಅನುಮತಿಯನ್ನು ಹಿಂತೆದುಕೊಂಡಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಿಯ ಯಮುನಾ,
    ಆರ್ವಿ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಕೊಟ್ಟ ಅನುಮತಿಯನ್ನು ಹಿಂತೆಗೆದುಕೊಂಡ ನಿಮ್ಮ ಕುಟುಂಬದ ತೀರ್ಮಾನ ಸಮಯೋಚಿತ.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...