Homeಕರ್ನಾಟಕ’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮಾಡಲಾಗಿರುವ ಪಠ್ಯ ಪುಸ್ತಕ ಮರು ಪರಿಷ್ಕರಣೆಯನ್ನು ವಿರೋಧಿಸಿ ಪಠ್ಯ ವಾಪಾಸಾತಿ ಚಳವಳಿ ಮುಂದುವರೆಯುತ್ತಿದೆ. ಡಾ.ಆರ್.ವಿ. ಭಂಡಾರಿಯವರು ಬರೆದ ‘ಹಾರಿಹೋದ ಹಕ್ಕಿಗಳು’ ಕವನವನ್ನು ಪರಿಷ್ಕೃತ ಪಠ್ಯದಲ್ಲಿ ಅಳವಡಿಸಿಕೊಳ್ಳಲು ನೀಡಿರುವ ಪರವಾನಗಿಯನ್ನು ಹಿಂಪಡೆದಿರುವುದಾಗಿ ಅವರ ಕುಟುಂಬಿಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಶುಕ್ರವಾರದಂದು ಪತ್ರ ಬರೆದಿದ್ದಾರೆ.

ಆರ್‌.ವಿ. ಭಂಡಾರಿ ಅವರ ಸೊಸೆ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರು ಕುಟುಂಬಸ್ಥರ ಪರವಾಗಿ ಬರೆದಿರುವ ಪತ್ರದಲ್ಲಿ,“ಸಧ್ಯದ ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅವರ ಬರಹವನ್ನು ಬಳಸಿಕೊಳ್ಳು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಮುನಾ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ನಾಡಿನ ಜನತೆಯ ಸಾಕ್ಷಿ ಪ್ರಜ್ಞೆಯಂತಿದ್ದ ಡಾ. ಆರ್. ವಿ. ಭಂಡಾರಿಯವರು ಅರವತ್ತರ ದಶಕದಲ್ಲಿಯೇ ಎರಡು ಸ್ನಾತಕೋತ್ತರ ಉನ್ನತ ಪದವಿಗಳನ್ನು ನಂತರ ಸಂಶೋಧನಾ ಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕೊನೆಯವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಸಲ್ಲಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

“ಮೂವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಮನಸ್ಸನ್ನು ಅರಳಿಸುವ ಪರಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಂಡವರು. ನೂರಾರು ಪುಸ್ತಕ ಬರೆದು ಮಕ್ಕಳ ಸಾಹಿತ್ಯ, ವಿಮರ್ಶೆ, ಕತೆ, ಕಾದಂಬರಿ, ವೈಚಾರಿಕ, ಮಾನವಿಕ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದವರು. ಪ್ರಸಿದ್ಧ ತಾಳಮದ್ದಲೆ ಅರ್ಥಧಾರಿಗಳೂ ಆಗಿದ್ದರು”

“ಸಾಕ್ಷರತಾ ಆಂದೋಲನವನ್ನು ಒಳಗೊಂಡು ಶೈಕ್ಷಣಿಕ ಎಲ್ಲಾ ಕೆಲಸಗಳಲ್ಲಿ ಇದ್ದವರು. ಅಂದು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ಗ್ರಂಥಾಲಯ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಲವತ್ತು ದಶಕಗಳ ಕಾಲ ವಿವಿಧ ಸರ್ಕಾರಗಳ ಅವಧಿಯಲ್ಲಿ ಪಠ್ಯ ಪುಸ್ತಕ ರಚನೆಗೆ ತನ್ನ ಪ್ರಬುದ್ಧ ಸಲಹೆಗಳನ್ನು, ಅಗತ್ಯವಿದ್ದಲ್ಲಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸುವಲ್ಲಿ ತೊಡಗಿಸಿಕೊಂಡಿದ್ದರು” ಎಂದು ಯಮುನಾ ಹೇಳಿದ್ದಾರೆ.

“ಕಳೆದ ಅವಧಿಯಲ್ಲಿ ತಿಳಿ ಕನ್ನಡ, ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ, ಪರಿಷ್ಕೃತ, (ಎರಡನೇ ಭಾಷೆ, ಕನ್ನಡ ಪಠ್ಯಪುಸ್ತಕ) ಎಂಟನೆಯ ತರಗತಿಯ ಪರಿವಿಡಿಯ ಪದ್ಯಭಾಗದ 2 ನೇ ಕವನ ಪುಟ ಸಂಖ್ಯೆ 69-71ರಲ್ಲಿರುವ ಆರ್.ವಿ. ಭಂಡಾರಿಯವರು ಬರೆದ ‘ಹಾರಿದ ಹಕ್ಕಿಗಳು’ ಕವನವನ್ನು ಪಠ್ಯದಲ್ಲಿ ಬಳಸಲು ನೀಡಿದ ಪರವಾನಗಿಯನ್ನು ಡಾ. ಆರ್. ವಿ. ಭಂಡಾರಿಯವರ ಕುಟುಂಬದ ಪರವಾಗಿ ನೀಡಲಾಗಿತ್ತು” ಎಂದು ಯಮುನಾ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಶಿಕ್ಷಣ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಅವರು, “ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ-ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬ ವರ್ಗ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಉಳಿಸಿಕೊಳ್ಳಲು ಅನುಮತಿಯನ್ನು ಹಿಂತೆದುಕೊಂಡಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಿಯ ಯಮುನಾ,
    ಆರ್ವಿ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಕೊಟ್ಟ ಅನುಮತಿಯನ್ನು ಹಿಂತೆಗೆದುಕೊಂಡ ನಿಮ್ಮ ಕುಟುಂಬದ ತೀರ್ಮಾನ ಸಮಯೋಚಿತ.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...