Homeಕರ್ನಾಟಕ’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

’ತಾತ್ವಿಕತೆಗೆ ವಿರುದ್ಧ’: ಪಠ್ಯ ಪುಸ್ತಕದಿಂದ ಡಾ.ಆರ್‌.ವಿ. ಭಂಡಾರಿ ಕವನ ವಾಪಾಸು ಪಡೆದ ಕುಟುಂಬ

- Advertisement -
- Advertisement -

ಬಲಪಂಥೀಯ ಟ್ರೋಲರ್‌‌ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಮಾಡಲಾಗಿರುವ ಪಠ್ಯ ಪುಸ್ತಕ ಮರು ಪರಿಷ್ಕರಣೆಯನ್ನು ವಿರೋಧಿಸಿ ಪಠ್ಯ ವಾಪಾಸಾತಿ ಚಳವಳಿ ಮುಂದುವರೆಯುತ್ತಿದೆ. ಡಾ.ಆರ್.ವಿ. ಭಂಡಾರಿಯವರು ಬರೆದ ‘ಹಾರಿಹೋದ ಹಕ್ಕಿಗಳು’ ಕವನವನ್ನು ಪರಿಷ್ಕೃತ ಪಠ್ಯದಲ್ಲಿ ಅಳವಡಿಸಿಕೊಳ್ಳಲು ನೀಡಿರುವ ಪರವಾನಗಿಯನ್ನು ಹಿಂಪಡೆದಿರುವುದಾಗಿ ಅವರ ಕುಟುಂಬಿಕರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಶುಕ್ರವಾರದಂದು ಪತ್ರ ಬರೆದಿದ್ದಾರೆ.

ಆರ್‌.ವಿ. ಭಂಡಾರಿ ಅವರ ಸೊಸೆ, ಹೋರಾಟಗಾರ್ತಿ ಯಮುನಾ ಗಾಂವ್ಕರ್ ಅವರು ಕುಟುಂಬಸ್ಥರ ಪರವಾಗಿ ಬರೆದಿರುವ ಪತ್ರದಲ್ಲಿ,“ಸಧ್ಯದ ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅವರ ಬರಹವನ್ನು ಬಳಸಿಕೊಳ್ಳು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಮುನಾ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ನಾಡಿನ ಜನತೆಯ ಸಾಕ್ಷಿ ಪ್ರಜ್ಞೆಯಂತಿದ್ದ ಡಾ. ಆರ್. ವಿ. ಭಂಡಾರಿಯವರು ಅರವತ್ತರ ದಶಕದಲ್ಲಿಯೇ ಎರಡು ಸ್ನಾತಕೋತ್ತರ ಉನ್ನತ ಪದವಿಗಳನ್ನು ನಂತರ ಸಂಶೋಧನಾ ಪ್ರಬಂಧವನ್ನು ಸಲ್ಲಿಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕೊನೆಯವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ತೀರಾ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಸಲ್ಲಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

“ಮೂವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದವರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರ ಮನಸ್ಸನ್ನು ಅರಳಿಸುವ ಪರಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಂಡವರು. ನೂರಾರು ಪುಸ್ತಕ ಬರೆದು ಮಕ್ಕಳ ಸಾಹಿತ್ಯ, ವಿಮರ್ಶೆ, ಕತೆ, ಕಾದಂಬರಿ, ವೈಚಾರಿಕ, ಮಾನವಿಕ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದವರು. ಪ್ರಸಿದ್ಧ ತಾಳಮದ್ದಲೆ ಅರ್ಥಧಾರಿಗಳೂ ಆಗಿದ್ದರು”

“ಸಾಕ್ಷರತಾ ಆಂದೋಲನವನ್ನು ಒಳಗೊಂಡು ಶೈಕ್ಷಣಿಕ ಎಲ್ಲಾ ಕೆಲಸಗಳಲ್ಲಿ ಇದ್ದವರು. ಅಂದು ಸಾಹಿತ್ಯ ಅಕಾಡೆಮಿ, ಕನ್ನಡ ಜಾಗೃತಿ ಸಮಿತಿ, ಗ್ರಂಥಾಲಯ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಲವತ್ತು ದಶಕಗಳ ಕಾಲ ವಿವಿಧ ಸರ್ಕಾರಗಳ ಅವಧಿಯಲ್ಲಿ ಪಠ್ಯ ಪುಸ್ತಕ ರಚನೆಗೆ ತನ್ನ ಪ್ರಬುದ್ಧ ಸಲಹೆಗಳನ್ನು, ಅಗತ್ಯವಿದ್ದಲ್ಲಿ ಸೂಕ್ತ ಮಾರ್ಪಾಡುಗಳನ್ನು ಸೂಚಿಸುವಲ್ಲಿ ತೊಡಗಿಸಿಕೊಂಡಿದ್ದರು” ಎಂದು ಯಮುನಾ ಹೇಳಿದ್ದಾರೆ.

“ಕಳೆದ ಅವಧಿಯಲ್ಲಿ ತಿಳಿ ಕನ್ನಡ, ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ, ಪರಿಷ್ಕೃತ, (ಎರಡನೇ ಭಾಷೆ, ಕನ್ನಡ ಪಠ್ಯಪುಸ್ತಕ) ಎಂಟನೆಯ ತರಗತಿಯ ಪರಿವಿಡಿಯ ಪದ್ಯಭಾಗದ 2 ನೇ ಕವನ ಪುಟ ಸಂಖ್ಯೆ 69-71ರಲ್ಲಿರುವ ಆರ್.ವಿ. ಭಂಡಾರಿಯವರು ಬರೆದ ‘ಹಾರಿದ ಹಕ್ಕಿಗಳು’ ಕವನವನ್ನು ಪಠ್ಯದಲ್ಲಿ ಬಳಸಲು ನೀಡಿದ ಪರವಾನಗಿಯನ್ನು ಡಾ. ಆರ್. ವಿ. ಭಂಡಾರಿಯವರ ಕುಟುಂಬದ ಪರವಾಗಿ ನೀಡಲಾಗಿತ್ತು” ಎಂದು ಯಮುನಾ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಶಿಕ್ಷಣ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಅವರು, “ಪಠ್ಯಪುಸ್ತಕ ಪರಿಷ್ಕರಣೆಯ ಧ್ಯೇಯ-ಉದ್ದೇಶಗಳು ಮತ್ತು ಫಲಿತಗಳು ಡಾ.ಆರ್‌.ವಿ. ಭಂಡಾರಿಯವರು ಬಾಳಿದ ಮತ್ತು ಬೋಧಿಸಿದ ತಾತ್ವಿಕತೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬ ವರ್ಗ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಉಳಿಸಿಕೊಳ್ಳಲು ಅನುಮತಿಯನ್ನು ಹಿಂತೆದುಕೊಂಡಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಿಯ ಯಮುನಾ,
    ಆರ್ವಿ ಅವರ ಕವನವನ್ನು ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಕೊಟ್ಟ ಅನುಮತಿಯನ್ನು ಹಿಂತೆಗೆದುಕೊಂಡ ನಿಮ್ಮ ಕುಟುಂಬದ ತೀರ್ಮಾನ ಸಮಯೋಚಿತ.

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...