Homeಅಂಕಣಗಳುಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ.

- Advertisement -
- Advertisement -

ಶ್ರಮಜೀವಿಯಾದ ಸದಾನಂದ ಪಟೇಲ್ ಕಷ್ಟಪಟ್ಟು ದುಡಿದು ಕೋಟ್ಯಾಂತರ ರೂಪಾಯಿಗಳ ಆಸ್ತಿಯ ಮಾಲೀಕನಾಗಿದ್ದಾನೆ. ತನ್ನ ಸಾಧನೆ ಬಗ್ಗೆ ಆತನಿಗೆ ತುಂಬಾ ಹೆಮ್ಮೆ ಇದೆ. ಹಾಗೆಯೇ ಅಶಿಕ್ಷಿತಳಾದ ಹೆಂಡತಿ ಸ್ವರ್ಣಳ ಬಗ್ಗೆ, ಇನ್ನೂ ಉಂಡಾಡಿ ಗುಂಡನಂತಾಡುವ ಮಗ ಅಜಯ್ ಬಗ್ಗೆ ಮತ್ತು ಸೌಮ್ಯ ಸ್ವಭಾವದವಳಂತೆ ಕಂಡರೂ ಒಳಗೊಳಗೆ ಕುತಂತ್ರಿಯಾದ ಸೊಸೆ ಪ್ರೀತಿ ಬಗ್ಗೆ ಸದಾನಂದನಿಗೆ ಇನ್ನಿಲ್ಲದಷ್ಟು ಕೋಪ, ಅಸಹನೆ ಮತ್ತು ಸೇಡಿನ ಭಾವನೆ. ಈ ಮೂವರೂ ತನ್ನ ಮರಣದ ನಂತರ ತಾನು ಕಷ್ಟಪಟ್ಟು ದುಡಿದಿದ್ದ ಆಸ್ತಿಯನ್ನೆಲ್ಲ ಮಜಾ ಮಾಡುತ್ತಾ ಕರಗಿಸುತ್ತಾರೆ ಎಂಬ ಗುಮಾನಿ. ಅದಕ್ಕಿಂತ ಮುಖ್ಯವಾಗಿ ಇವರೆಲ್ಲರಿಂದಾಗಿ ತನ್ನದು ಎಂಬುದು ಯಾವುದೂ ಈ ಭೂಮಿಯ ಮೇಲೆ ಉಳಿದಿರುವುದಿಲ್ಲ ಎಂಬ ಜಿಗುಪ್ಸೆ.

ಈತನ ಹೆಸರು ಸದಾನಂದ ಎಂಬುದಾದರೂ ಈತ ಕೋಪಿಷ್ಟ. ಈತ ನಕ್ಕಿದ್ದನ್ನು ನೋಡಿದವರೇ ಇಲ್ಲ. ಇತರರ ಬಗ್ಗೆ ಅಸೂಕ್ಷ್ಮವಾಗಿ ವರ್ತಿಸುವ, ಸದಾ ತನ್ನ ಬಗ್ಗೆ ಮಾತ್ರ ಯೋಚಿಸುವ ಸದಾನಂದ ಆಫೀಸಿನಲ್ಲೂ, ಮನೆಯಲ್ಲೂ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುವವನು. ಇದರಿಂದ ಬೇಸರವಾದರೂ ಸಂಪ್ರದಾಯಸ್ಥ ಗೃಹಿಣಿಯಾದ ಸ್ವರ್ಣ ಪ್ರತಿಭಟಿಸುವುದಿಲ್ಲ. ಆದರೆ ಅವರ ಮಗ ಅಜಯ್ ಹಾಗಲ್ಲ. ಕಾರಣವಿದ್ದರೂ, ಇರದಿದ್ದರೂ ತನ್ನ ಅಪ್ಪ ಸದಾನಂದ ತಾಳಿರುವ ನಿಲುವಿಗೆ ವಿರುದ್ಧವಾದ ನಿಲುವನ್ನು ತೆಗೆದುಕೊಳ್ಳುವುದು ಅಜಯ್‍ನ ಸ್ವಭಾವ. ಆ ಮೂಲಕವಾದರೂ ತನ್ನನ್ನು ಸದಾ ಅವಮಾನಿಸುವ ಅಪ್ಪನ ವಿರುದ್ಧ `ಕ್ರಾಂತಿ’ ಸಾಧಿಸಿದ್ದೇನೆಂಬ ಭಾವನೆ ಅವನಿಗೆ.

ಸದಾನಂದನ ಸೊಸೆ ಪ್ರೀತಿ ಮೇಲುನೋಟಕ್ಕೆ ತಗ್ಗಿಬಗ್ಗಿ ನಡೆಯುವ ಯುವತಿಯಂತೆ ಕಂಡರೂ ಆಕೆ ಧನಪಿಶಾಚಿ. ಮುಂದೊಂದು ದಿನ ಸದಾನಂದ ಸತ್ತು ಆತನ ಆಸ್ತಿಯೆಲ್ಲಾ ಅಜಯ್ ಪಾಲಿಗೆ ಬರುತ್ತೆ ಎಂಬ ಕಾರಣಕ್ಕೇ ಆ ಉಂಡಾಡಿಗುಂಡನನ್ನು ಮದುವೆ ಆಗಿರುವವಳು.

ಈ ಮೂವರಲ್ಲದೆ ಸದಾನಂದನ ಬದುಕಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವವಳು ಮಧ್ಯವಯಸ್ಕಿನ ಮಹಿಳೆ ಕಿರಣ್ ಮೆಣಸಿನಕಾಯಿ. ಸದಾನಂದನ ಕಂಪನಿಯ ಬೋರ್ಡ್‍ನಲ್ಲಿ ಪ್ರಮುಖ ಸದಸ್ಯೆಯಾಗಿರುವ ಕಿರಣ್ ಸದಾನಂದನ ಪ್ರೇಯಸಿ ಕೂಡ ಹೌದು. ಬೇರೆಯವರ ಬದುಕನ್ನು ನಿಯಂತ್ರಿಸುವಲ್ಲಿ ಎತ್ತಿದ ಕೈಯಾದ ಸದಾನಂದ ತನ್ನ ಮತ್ತು ಕಿರಣ್ ನಡುವಿನ ಸಂಬಂಧದ ಬಗ್ಗೆ ಬೇರೆಯವರಿಗೆ ಸುಳಿವು ಸಿಗಕೂಡದೆಂದು ಆಕೆಗೆ ಕುಡುಕನೊಬ್ಬನೊಂದಿಗೆ ಮದುವೆ ಮಾಡಿರುತ್ತಾನೆ. ಹಾಗೆ ಮಾಡುವ ಮೂಲಕ ಆಕೆಗೆ ಸಮಾಜದಲ್ಲಿ ಸ್ಥಾನಮಾನ, ಆಕೆಯ ಗಂಡನಿಗೆ ದಿನನಿತ್ಯ ಗುಂಡು ಮತ್ತು ತನಗೆ ಓರ್ವ ಸುಂದರ ಮತ್ತು ದಕ್ಷ ನಲ್ಲೆ ಸಿಗುವಂತೆ ಏರ್ಪಾಡು ಮಾಡಿಕೊಂಡಿರುತ್ತಾನೆ.

ಗುಂಡು, ಸಿಗರೇಟು ಹವ್ಯಾಸಗಳನ್ನು ಹೊಂದಿರುವ ಸದಾನಂದ ಹೈ ಬಿಪಿ, ಡಯಾಬಿಟೀಸ್ ಮತ್ತು ಹೈ ಕೊಲೆಸ್ಟರಾಲ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ತಾನು ಬದುಕಿರುವಾಗ ತನ್ನ ಸುತ್ತಲಿನವರನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸುತ್ತಿರುವ ಸದಾನಂದ ತಾನು ಸತ್ತ ಮೇಲೂ ಅವರೆಲ್ಲರ ಮೇಲೆ ನಿಯಂತ್ರಣ ಹೊಂದಿರುವುದು ಹೇಗೆ ಎಂದು ಯೋಚಿಸುತ್ತಾನೆ. ತನ್ನ ಅಪಾರ ಸಂಪತ್ತಿನಲ್ಲಿ ನಯಾಪೈಸೆಗೂ ತನ್ನ ಪತ್ನಿ ಸ್ವರ್ಣ, ಮಗ ಅಜಯ್, ಸೊಸೆ ಪ್ರೀತಿ ಮತ್ತು ಕೊನೆಗೆ ನಲ್ಲೆ ಕಿರಣ್ ಕೂಡ ಅರ್ಹರಲ್ಲ ಎಂದೇ ನಂಬಿರುವ ಸದಾನಂದ ಸಾಯುವ ಮುನ್ನ ಒಂದು ವಿಚಿತ್ರ ವಿಲ್ ಬರೆದಿಡುತ್ತಾನೆ.

ಆ ವಿಲ್‍ನಲ್ಲಿ ತನ್ನ ಸರ್ವ ಸಂಪತ್ತನ್ನು ಒಂದು ಟ್ರಸ್ಟ್‍ಗೆ ಬರೆದಿರುತ್ತಾನೆ. ಆ ಟ್ರಸ್ಟ್‍ಗೆ ಕಿರಣ್‍ಳನ್ನೇ ಟ್ರಸ್ಟೀ ಮಾಡಿರುತ್ತಾನೆ. ತನ್ನ 23ರ ಹರೆಯದ ಮಗ ಅಜಯ್‍ಗೆ 45 ವರ್ಷ ವಯಸ್ಸು ತುಂಬಿದಾಗ ಟ್ರಸ್ಟ್ ಅನ್ನು ಇಲ್ಲವಾಗಿಸಿ ತನ್ನ ಇಡೀ ಆಸ್ತಿ ಮಗನಿಗೆ ಬರಬೇಕು ಎಂದು ಆದೇಶಿಸಿರುತ್ತಾನೆ. ಆದರೆ ಅದಕ್ಕೂ ಹತ್ತಾರು ಶರತ್ತುಗಳನ್ನು ವಿಧಿಸಿರುತ್ತಾನೆ. ಪ್ರತಿದಿನ ಅಜಯ್ ಆಫೀಸಿಗೆ ಹಾಜರಾಗಬೇಕೆಂದೂ, ತನಗೆ ಇಷ್ಟವಾದ ಹಲ್ವಾವನ್ನು ಸಕ್ಕರೆ ಕಾಯಿಲೆಯಿಂದಾಗಿ ತಿನ್ನಲಾಗಿದ್ದರಿಂದ ಮಗನೂ ತನ್ನ ಜೀವಮಾನವಿಡೀ ಹಲ್ವಾ ತಿನ್ನಬಾರದೆಂದೂ ಶರತ್ತು ಹಾಕಿರುತ್ತಾನೆ. ಮನೆ ನಿರ್ವಹಣೆಗೆ, ಕೈಕಾಸಿಗೆ ತನ್ನ ಕುಟುಂಬದ ಮೂವರಿಗಲ್ಲದೆ ಟ್ರಸ್ಟಿ ಆಗಿರುವ ಕಿರಣ್‍ಳಿಗೂ ಮಾಸಾಶನವನ್ನು ನಿಗದಿ ಮಾಡಿರುತ್ತಾನೆ. ಹೀಗೆ ತನ್ನ ಸಮಾಧಿಯಿಂದಲೂ ತನ್ನ ಕುಟುಂಬದ ಮೇಲೆ ನಿಯಂತ್ರಣವನ್ನು ಸ್ಥಾಪಿಸಲು ಹವಣಿಸುವ ಸದಾನಂದ ತನ್ನ ನಲ್ಲೆ ಕಿರಣ್‍ಳನ್ನು ಸುಮ್ಮನೆ ಬಿಡುತ್ತಾನೆಯೇ? ಆಕೆ ಕೂಡ ತನ್ನ ಕುಡುಕ ಗಂಡನನ್ನು ತೊರೆದು ತನ್ನ ಮನೆಯಲ್ಲೇ ತನ್ನ ಸಂಸಾರದ ಸದಸ್ಯೆಯಂತೆ ವಾಸಿಸಬೇಕು ಎಂದು ಆದೇಶಿಸಿರುತ್ತಾನೆ. ತಾನು ವಿಧಿಸಿರುವ ಶರತ್ತುಗಳಲ್ಲಿ ಒಂದೇ ಒಂದನ್ನೂ ತನ್ನ ಕುಟುಂಬದ ಸದಸ್ಯರು ಪಾಲಿಸದಿದ್ದರೆ ತನ್ನ ಇಡೀ ಆಸ್ತಿಯನ್ನು ತಾನು ಪಟ್ಟಿ ಮಾಡಿರುವ ಸಂಘ ಸಂಸ್ಥೆಗಳಿಗೆ ದಾನ ಮಾಡಿ ತನ್ನ ಕುಟುಂಬಕ್ಕೆ ನಯಾಪೈಸೆ ಸಿಗಕೂಡದೆಂದು ಹೇಳಿರುತ್ತಾನೆ. ಆದರೆ ಈ ವಿಲ್‍ಅನ್ನು ಸದಾನಂದ ಗೌಪ್ಯವಾಗಿಟ್ಟಿರುತ್ತಾನೆ.

ಮಹೇಶ್ ದತ್ತಾನಿ

ಒಂದು ದಿನ ಸದಾನಂದ ಹೃದಯಘಾತದಿಂದ ಸತ್ತೇ ಹೋಗುತ್ತಾನೆ. ತಾನು ಬರೆದಿಟ್ಟಿರುವ ವಿಲ್‍ಗೆ ತನ್ನ ಕುಟುಂಬದ ಸದಸ್ಯರು ಹೇಗೆ ಪ್ರತಿಕ್ರಿಯಿಸುತ್ತಾರೆಂದು ನೋಡಲು ಆತನ ಆತ್ಮ ಅಲ್ಲೇ ಅವರೆಲ್ಲರ ಮಧ್ಯೆ ಸುಳಿದಾಡುತ್ತಿರುತ್ತದೆ. ಆದರೆ ಅವರು ಯಾರಿಗೂ ಆತನ ಆತ್ಮ ತಮ್ಮ ಮಧ್ಯೆ ಇರುವುದು ಗೊತ್ತಿರುವುದಿಲ್ಲ.

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ. ಅವರು ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಅವರೊಂದಿಗೆ ವಾಸಿಸಲು ಕಿರಣ್ ಬರುತ್ತಾಳೆ.

ಸದಾನಂದನ ವಿಲ್‍ನಿಂದಾಗಿ ಆತನ ಕುಟುಂಬದ ಸದಸ್ಯರ ಬದುಕೇ ಉಲ್ಟಾ ಪಲ್ಟಾ ಅಗಿದೆ. ಆದರೆ ವಿಧಿ ಇಲ್ಲ. ಆತನ ಕೋಟ್ಯಾಂತರ ರೂಪಾಯಿಗಳ ಆಸ್ತಿ ಬರಬೇಕೆಂದರೆ ಆತನ ಎಲ್ಲಾ ಶರತ್ತುಗಳನ್ನು ಪಾಲಿಸಬೇಕು. ಅಜಯ್ ಕೊನೆಗೂ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದನ್ನು ಕಲಿಯುತ್ತಾನೆ. ಆತನ ಹೆಂಡತಿ ಸ್ವರ್ಣ ಗೃಹಿಣಿಯಾಗಿ, ಹೆಂಡತಿಯಾಗಿ ತನ್ನ ಮಿತಿಗಳನ್ನು ಅರ್ಥಮಾಡಿಕೊಳ್ಳುತ್ತಾಳೆ. ಸೊಸೆ ಪ್ರೀತಿ ಕೂಡ ಬದುಕಿನಲ್ಲಿ ಹಣವೇ ಮುಖ್ಯವಲ್ಲ ಎಂದು ಮನಗಾಣುತ್ತಾಳೆ. ಇನ್ನು ಕಿರಣ್‍ಳಲ್ಲೂ ಬದಲಾವಣೆಗಳಾಗುತ್ತವೆ. ಸದಾನಂದ ಹೇಗೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಮರಣೋತ್ತರವೂ ನಿಯಂತ್ರಿಸುತ್ತಿದ್ದಾನೆ ಎಂದು ಗೊತ್ತಾಗುತ್ತದೆ. ಕೊನೆಗೆ ಅವರೆಲ್ಲ ಜೊತೆಗೂಡಿ ಸದಾನಂದನ ಕೀಲುಬೊಂಬೆಗಳಾಗಿ ಬದುಕುವುದನ್ನು ನಿಲ್ಲಿಸುವ ಮೂಲಕ ಆತನ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ.

-ಇದು ಯಾವುದೋ ಸಿನಿಮಾದ ಕತೆಯಲ್ಲ. ಬದಲಾಗಿ ನನ್ನ ಹಲವಾರು ವರ್ಷಗಳ ಸ್ನೇಹಿತನೂ, ಸಾಹಿತಿಯೂ ಆಗಿರುವ ಮಹೇಶ್ ದತ್ತಾನಿ ಬರೆದಿರುವ ಒಂದು ನಾಟಕದ ಕಥಾಸಾರಾಂಶ. ಇದನ್ನು ಒಂದು ಸೀರಿಯಸ್ ವಿಷಯದ ಸುತ್ತ ಹೆಣೆದಿದ್ದರೂ ಡೈಲಾಗ್‍ಗಳು ತುಂಬಾ ಮಜವಾಗಿದ್ದು ಇದೊಂದು ಕಾಮಿಡಿ ನಾಟಕವಾಗಿದೆ. ಈ ಇಂಗ್ಲಿಷ್ ನಾಟಕದ ಹೆಸರು `Where there is a will’. ಈಗ ಈ ನಾಟಕವು ಬೆಂಗಳೂರು ಮತ್ತು ಅಲಹಾಬಾದ್ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿದೆ.

ಆಗಸ್ಟ್ 14, 2013


ಇದನ್ನು ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...