Homeಅಂಕಣಗಳುಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ.

- Advertisement -
- Advertisement -

ಶ್ರಮಜೀವಿಯಾದ ಸದಾನಂದ ಪಟೇಲ್ ಕಷ್ಟಪಟ್ಟು ದುಡಿದು ಕೋಟ್ಯಾಂತರ ರೂಪಾಯಿಗಳ ಆಸ್ತಿಯ ಮಾಲೀಕನಾಗಿದ್ದಾನೆ. ತನ್ನ ಸಾಧನೆ ಬಗ್ಗೆ ಆತನಿಗೆ ತುಂಬಾ ಹೆಮ್ಮೆ ಇದೆ. ಹಾಗೆಯೇ ಅಶಿಕ್ಷಿತಳಾದ ಹೆಂಡತಿ ಸ್ವರ್ಣಳ ಬಗ್ಗೆ, ಇನ್ನೂ ಉಂಡಾಡಿ ಗುಂಡನಂತಾಡುವ ಮಗ ಅಜಯ್ ಬಗ್ಗೆ ಮತ್ತು ಸೌಮ್ಯ ಸ್ವಭಾವದವಳಂತೆ ಕಂಡರೂ ಒಳಗೊಳಗೆ ಕುತಂತ್ರಿಯಾದ ಸೊಸೆ ಪ್ರೀತಿ ಬಗ್ಗೆ ಸದಾನಂದನಿಗೆ ಇನ್ನಿಲ್ಲದಷ್ಟು ಕೋಪ, ಅಸಹನೆ ಮತ್ತು ಸೇಡಿನ ಭಾವನೆ. ಈ ಮೂವರೂ ತನ್ನ ಮರಣದ ನಂತರ ತಾನು ಕಷ್ಟಪಟ್ಟು ದುಡಿದಿದ್ದ ಆಸ್ತಿಯನ್ನೆಲ್ಲ ಮಜಾ ಮಾಡುತ್ತಾ ಕರಗಿಸುತ್ತಾರೆ ಎಂಬ ಗುಮಾನಿ. ಅದಕ್ಕಿಂತ ಮುಖ್ಯವಾಗಿ ಇವರೆಲ್ಲರಿಂದಾಗಿ ತನ್ನದು ಎಂಬುದು ಯಾವುದೂ ಈ ಭೂಮಿಯ ಮೇಲೆ ಉಳಿದಿರುವುದಿಲ್ಲ ಎಂಬ ಜಿಗುಪ್ಸೆ.

ಈತನ ಹೆಸರು ಸದಾನಂದ ಎಂಬುದಾದರೂ ಈತ ಕೋಪಿಷ್ಟ. ಈತ ನಕ್ಕಿದ್ದನ್ನು ನೋಡಿದವರೇ ಇಲ್ಲ. ಇತರರ ಬಗ್ಗೆ ಅಸೂಕ್ಷ್ಮವಾಗಿ ವರ್ತಿಸುವ, ಸದಾ ತನ್ನ ಬಗ್ಗೆ ಮಾತ್ರ ಯೋಚಿಸುವ ಸದಾನಂದ ಆಫೀಸಿನಲ್ಲೂ, ಮನೆಯಲ್ಲೂ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುವವನು. ಇದರಿಂದ ಬೇಸರವಾದರೂ ಸಂಪ್ರದಾಯಸ್ಥ ಗೃಹಿಣಿಯಾದ ಸ್ವರ್ಣ ಪ್ರತಿಭಟಿಸುವುದಿಲ್ಲ. ಆದರೆ ಅವರ ಮಗ ಅಜಯ್ ಹಾಗಲ್ಲ. ಕಾರಣವಿದ್ದರೂ, ಇರದಿದ್ದರೂ ತನ್ನ ಅಪ್ಪ ಸದಾನಂದ ತಾಳಿರುವ ನಿಲುವಿಗೆ ವಿರುದ್ಧವಾದ ನಿಲುವನ್ನು ತೆಗೆದುಕೊಳ್ಳುವುದು ಅಜಯ್‍ನ ಸ್ವಭಾವ. ಆ ಮೂಲಕವಾದರೂ ತನ್ನನ್ನು ಸದಾ ಅವಮಾನಿಸುವ ಅಪ್ಪನ ವಿರುದ್ಧ `ಕ್ರಾಂತಿ’ ಸಾಧಿಸಿದ್ದೇನೆಂಬ ಭಾವನೆ ಅವನಿಗೆ.

ಸದಾನಂದನ ಸೊಸೆ ಪ್ರೀತಿ ಮೇಲುನೋಟಕ್ಕೆ ತಗ್ಗಿಬಗ್ಗಿ ನಡೆಯುವ ಯುವತಿಯಂತೆ ಕಂಡರೂ ಆಕೆ ಧನಪಿಶಾಚಿ. ಮುಂದೊಂದು ದಿನ ಸದಾನಂದ ಸತ್ತು ಆತನ ಆಸ್ತಿಯೆಲ್ಲಾ ಅಜಯ್ ಪಾಲಿಗೆ ಬರುತ್ತೆ ಎಂಬ ಕಾರಣಕ್ಕೇ ಆ ಉಂಡಾಡಿಗುಂಡನನ್ನು ಮದುವೆ ಆಗಿರುವವಳು.

ಈ ಮೂವರಲ್ಲದೆ ಸದಾನಂದನ ಬದುಕಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವವಳು ಮಧ್ಯವಯಸ್ಕಿನ ಮಹಿಳೆ ಕಿರಣ್ ಮೆಣಸಿನಕಾಯಿ. ಸದಾನಂದನ ಕಂಪನಿಯ ಬೋರ್ಡ್‍ನಲ್ಲಿ ಪ್ರಮುಖ ಸದಸ್ಯೆಯಾಗಿರುವ ಕಿರಣ್ ಸದಾನಂದನ ಪ್ರೇಯಸಿ ಕೂಡ ಹೌದು. ಬೇರೆಯವರ ಬದುಕನ್ನು ನಿಯಂತ್ರಿಸುವಲ್ಲಿ ಎತ್ತಿದ ಕೈಯಾದ ಸದಾನಂದ ತನ್ನ ಮತ್ತು ಕಿರಣ್ ನಡುವಿನ ಸಂಬಂಧದ ಬಗ್ಗೆ ಬೇರೆಯವರಿಗೆ ಸುಳಿವು ಸಿಗಕೂಡದೆಂದು ಆಕೆಗೆ ಕುಡುಕನೊಬ್ಬನೊಂದಿಗೆ ಮದುವೆ ಮಾಡಿರುತ್ತಾನೆ. ಹಾಗೆ ಮಾಡುವ ಮೂಲಕ ಆಕೆಗೆ ಸಮಾಜದಲ್ಲಿ ಸ್ಥಾನಮಾನ, ಆಕೆಯ ಗಂಡನಿಗೆ ದಿನನಿತ್ಯ ಗುಂಡು ಮತ್ತು ತನಗೆ ಓರ್ವ ಸುಂದರ ಮತ್ತು ದಕ್ಷ ನಲ್ಲೆ ಸಿಗುವಂತೆ ಏರ್ಪಾಡು ಮಾಡಿಕೊಂಡಿರುತ್ತಾನೆ.

ಗುಂಡು, ಸಿಗರೇಟು ಹವ್ಯಾಸಗಳನ್ನು ಹೊಂದಿರುವ ಸದಾನಂದ ಹೈ ಬಿಪಿ, ಡಯಾಬಿಟೀಸ್ ಮತ್ತು ಹೈ ಕೊಲೆಸ್ಟರಾಲ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ತಾನು ಬದುಕಿರುವಾಗ ತನ್ನ ಸುತ್ತಲಿನವರನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸುತ್ತಿರುವ ಸದಾನಂದ ತಾನು ಸತ್ತ ಮೇಲೂ ಅವರೆಲ್ಲರ ಮೇಲೆ ನಿಯಂತ್ರಣ ಹೊಂದಿರುವುದು ಹೇಗೆ ಎಂದು ಯೋಚಿಸುತ್ತಾನೆ. ತನ್ನ ಅಪಾರ ಸಂಪತ್ತಿನಲ್ಲಿ ನಯಾಪೈಸೆಗೂ ತನ್ನ ಪತ್ನಿ ಸ್ವರ್ಣ, ಮಗ ಅಜಯ್, ಸೊಸೆ ಪ್ರೀತಿ ಮತ್ತು ಕೊನೆಗೆ ನಲ್ಲೆ ಕಿರಣ್ ಕೂಡ ಅರ್ಹರಲ್ಲ ಎಂದೇ ನಂಬಿರುವ ಸದಾನಂದ ಸಾಯುವ ಮುನ್ನ ಒಂದು ವಿಚಿತ್ರ ವಿಲ್ ಬರೆದಿಡುತ್ತಾನೆ.

ಆ ವಿಲ್‍ನಲ್ಲಿ ತನ್ನ ಸರ್ವ ಸಂಪತ್ತನ್ನು ಒಂದು ಟ್ರಸ್ಟ್‍ಗೆ ಬರೆದಿರುತ್ತಾನೆ. ಆ ಟ್ರಸ್ಟ್‍ಗೆ ಕಿರಣ್‍ಳನ್ನೇ ಟ್ರಸ್ಟೀ ಮಾಡಿರುತ್ತಾನೆ. ತನ್ನ 23ರ ಹರೆಯದ ಮಗ ಅಜಯ್‍ಗೆ 45 ವರ್ಷ ವಯಸ್ಸು ತುಂಬಿದಾಗ ಟ್ರಸ್ಟ್ ಅನ್ನು ಇಲ್ಲವಾಗಿಸಿ ತನ್ನ ಇಡೀ ಆಸ್ತಿ ಮಗನಿಗೆ ಬರಬೇಕು ಎಂದು ಆದೇಶಿಸಿರುತ್ತಾನೆ. ಆದರೆ ಅದಕ್ಕೂ ಹತ್ತಾರು ಶರತ್ತುಗಳನ್ನು ವಿಧಿಸಿರುತ್ತಾನೆ. ಪ್ರತಿದಿನ ಅಜಯ್ ಆಫೀಸಿಗೆ ಹಾಜರಾಗಬೇಕೆಂದೂ, ತನಗೆ ಇಷ್ಟವಾದ ಹಲ್ವಾವನ್ನು ಸಕ್ಕರೆ ಕಾಯಿಲೆಯಿಂದಾಗಿ ತಿನ್ನಲಾಗಿದ್ದರಿಂದ ಮಗನೂ ತನ್ನ ಜೀವಮಾನವಿಡೀ ಹಲ್ವಾ ತಿನ್ನಬಾರದೆಂದೂ ಶರತ್ತು ಹಾಕಿರುತ್ತಾನೆ. ಮನೆ ನಿರ್ವಹಣೆಗೆ, ಕೈಕಾಸಿಗೆ ತನ್ನ ಕುಟುಂಬದ ಮೂವರಿಗಲ್ಲದೆ ಟ್ರಸ್ಟಿ ಆಗಿರುವ ಕಿರಣ್‍ಳಿಗೂ ಮಾಸಾಶನವನ್ನು ನಿಗದಿ ಮಾಡಿರುತ್ತಾನೆ. ಹೀಗೆ ತನ್ನ ಸಮಾಧಿಯಿಂದಲೂ ತನ್ನ ಕುಟುಂಬದ ಮೇಲೆ ನಿಯಂತ್ರಣವನ್ನು ಸ್ಥಾಪಿಸಲು ಹವಣಿಸುವ ಸದಾನಂದ ತನ್ನ ನಲ್ಲೆ ಕಿರಣ್‍ಳನ್ನು ಸುಮ್ಮನೆ ಬಿಡುತ್ತಾನೆಯೇ? ಆಕೆ ಕೂಡ ತನ್ನ ಕುಡುಕ ಗಂಡನನ್ನು ತೊರೆದು ತನ್ನ ಮನೆಯಲ್ಲೇ ತನ್ನ ಸಂಸಾರದ ಸದಸ್ಯೆಯಂತೆ ವಾಸಿಸಬೇಕು ಎಂದು ಆದೇಶಿಸಿರುತ್ತಾನೆ. ತಾನು ವಿಧಿಸಿರುವ ಶರತ್ತುಗಳಲ್ಲಿ ಒಂದೇ ಒಂದನ್ನೂ ತನ್ನ ಕುಟುಂಬದ ಸದಸ್ಯರು ಪಾಲಿಸದಿದ್ದರೆ ತನ್ನ ಇಡೀ ಆಸ್ತಿಯನ್ನು ತಾನು ಪಟ್ಟಿ ಮಾಡಿರುವ ಸಂಘ ಸಂಸ್ಥೆಗಳಿಗೆ ದಾನ ಮಾಡಿ ತನ್ನ ಕುಟುಂಬಕ್ಕೆ ನಯಾಪೈಸೆ ಸಿಗಕೂಡದೆಂದು ಹೇಳಿರುತ್ತಾನೆ. ಆದರೆ ಈ ವಿಲ್‍ಅನ್ನು ಸದಾನಂದ ಗೌಪ್ಯವಾಗಿಟ್ಟಿರುತ್ತಾನೆ.

ಮಹೇಶ್ ದತ್ತಾನಿ

ಒಂದು ದಿನ ಸದಾನಂದ ಹೃದಯಘಾತದಿಂದ ಸತ್ತೇ ಹೋಗುತ್ತಾನೆ. ತಾನು ಬರೆದಿಟ್ಟಿರುವ ವಿಲ್‍ಗೆ ತನ್ನ ಕುಟುಂಬದ ಸದಸ್ಯರು ಹೇಗೆ ಪ್ರತಿಕ್ರಿಯಿಸುತ್ತಾರೆಂದು ನೋಡಲು ಆತನ ಆತ್ಮ ಅಲ್ಲೇ ಅವರೆಲ್ಲರ ಮಧ್ಯೆ ಸುಳಿದಾಡುತ್ತಿರುತ್ತದೆ. ಆದರೆ ಅವರು ಯಾರಿಗೂ ಆತನ ಆತ್ಮ ತಮ್ಮ ಮಧ್ಯೆ ಇರುವುದು ಗೊತ್ತಿರುವುದಿಲ್ಲ.

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ. ಅವರು ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಅವರೊಂದಿಗೆ ವಾಸಿಸಲು ಕಿರಣ್ ಬರುತ್ತಾಳೆ.

ಸದಾನಂದನ ವಿಲ್‍ನಿಂದಾಗಿ ಆತನ ಕುಟುಂಬದ ಸದಸ್ಯರ ಬದುಕೇ ಉಲ್ಟಾ ಪಲ್ಟಾ ಅಗಿದೆ. ಆದರೆ ವಿಧಿ ಇಲ್ಲ. ಆತನ ಕೋಟ್ಯಾಂತರ ರೂಪಾಯಿಗಳ ಆಸ್ತಿ ಬರಬೇಕೆಂದರೆ ಆತನ ಎಲ್ಲಾ ಶರತ್ತುಗಳನ್ನು ಪಾಲಿಸಬೇಕು. ಅಜಯ್ ಕೊನೆಗೂ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದನ್ನು ಕಲಿಯುತ್ತಾನೆ. ಆತನ ಹೆಂಡತಿ ಸ್ವರ್ಣ ಗೃಹಿಣಿಯಾಗಿ, ಹೆಂಡತಿಯಾಗಿ ತನ್ನ ಮಿತಿಗಳನ್ನು ಅರ್ಥಮಾಡಿಕೊಳ್ಳುತ್ತಾಳೆ. ಸೊಸೆ ಪ್ರೀತಿ ಕೂಡ ಬದುಕಿನಲ್ಲಿ ಹಣವೇ ಮುಖ್ಯವಲ್ಲ ಎಂದು ಮನಗಾಣುತ್ತಾಳೆ. ಇನ್ನು ಕಿರಣ್‍ಳಲ್ಲೂ ಬದಲಾವಣೆಗಳಾಗುತ್ತವೆ. ಸದಾನಂದ ಹೇಗೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಮರಣೋತ್ತರವೂ ನಿಯಂತ್ರಿಸುತ್ತಿದ್ದಾನೆ ಎಂದು ಗೊತ್ತಾಗುತ್ತದೆ. ಕೊನೆಗೆ ಅವರೆಲ್ಲ ಜೊತೆಗೂಡಿ ಸದಾನಂದನ ಕೀಲುಬೊಂಬೆಗಳಾಗಿ ಬದುಕುವುದನ್ನು ನಿಲ್ಲಿಸುವ ಮೂಲಕ ಆತನ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ.

-ಇದು ಯಾವುದೋ ಸಿನಿಮಾದ ಕತೆಯಲ್ಲ. ಬದಲಾಗಿ ನನ್ನ ಹಲವಾರು ವರ್ಷಗಳ ಸ್ನೇಹಿತನೂ, ಸಾಹಿತಿಯೂ ಆಗಿರುವ ಮಹೇಶ್ ದತ್ತಾನಿ ಬರೆದಿರುವ ಒಂದು ನಾಟಕದ ಕಥಾಸಾರಾಂಶ. ಇದನ್ನು ಒಂದು ಸೀರಿಯಸ್ ವಿಷಯದ ಸುತ್ತ ಹೆಣೆದಿದ್ದರೂ ಡೈಲಾಗ್‍ಗಳು ತುಂಬಾ ಮಜವಾಗಿದ್ದು ಇದೊಂದು ಕಾಮಿಡಿ ನಾಟಕವಾಗಿದೆ. ಈ ಇಂಗ್ಲಿಷ್ ನಾಟಕದ ಹೆಸರು `Where there is a will’. ಈಗ ಈ ನಾಟಕವು ಬೆಂಗಳೂರು ಮತ್ತು ಅಲಹಾಬಾದ್ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿದೆ.

ಆಗಸ್ಟ್ 14, 2013


ಇದನ್ನು ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...