Homeಅಂಕಣಗಳುಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ.

- Advertisement -
- Advertisement -

ಶ್ರಮಜೀವಿಯಾದ ಸದಾನಂದ ಪಟೇಲ್ ಕಷ್ಟಪಟ್ಟು ದುಡಿದು ಕೋಟ್ಯಾಂತರ ರೂಪಾಯಿಗಳ ಆಸ್ತಿಯ ಮಾಲೀಕನಾಗಿದ್ದಾನೆ. ತನ್ನ ಸಾಧನೆ ಬಗ್ಗೆ ಆತನಿಗೆ ತುಂಬಾ ಹೆಮ್ಮೆ ಇದೆ. ಹಾಗೆಯೇ ಅಶಿಕ್ಷಿತಳಾದ ಹೆಂಡತಿ ಸ್ವರ್ಣಳ ಬಗ್ಗೆ, ಇನ್ನೂ ಉಂಡಾಡಿ ಗುಂಡನಂತಾಡುವ ಮಗ ಅಜಯ್ ಬಗ್ಗೆ ಮತ್ತು ಸೌಮ್ಯ ಸ್ವಭಾವದವಳಂತೆ ಕಂಡರೂ ಒಳಗೊಳಗೆ ಕುತಂತ್ರಿಯಾದ ಸೊಸೆ ಪ್ರೀತಿ ಬಗ್ಗೆ ಸದಾನಂದನಿಗೆ ಇನ್ನಿಲ್ಲದಷ್ಟು ಕೋಪ, ಅಸಹನೆ ಮತ್ತು ಸೇಡಿನ ಭಾವನೆ. ಈ ಮೂವರೂ ತನ್ನ ಮರಣದ ನಂತರ ತಾನು ಕಷ್ಟಪಟ್ಟು ದುಡಿದಿದ್ದ ಆಸ್ತಿಯನ್ನೆಲ್ಲ ಮಜಾ ಮಾಡುತ್ತಾ ಕರಗಿಸುತ್ತಾರೆ ಎಂಬ ಗುಮಾನಿ. ಅದಕ್ಕಿಂತ ಮುಖ್ಯವಾಗಿ ಇವರೆಲ್ಲರಿಂದಾಗಿ ತನ್ನದು ಎಂಬುದು ಯಾವುದೂ ಈ ಭೂಮಿಯ ಮೇಲೆ ಉಳಿದಿರುವುದಿಲ್ಲ ಎಂಬ ಜಿಗುಪ್ಸೆ.

ಈತನ ಹೆಸರು ಸದಾನಂದ ಎಂಬುದಾದರೂ ಈತ ಕೋಪಿಷ್ಟ. ಈತ ನಕ್ಕಿದ್ದನ್ನು ನೋಡಿದವರೇ ಇಲ್ಲ. ಇತರರ ಬಗ್ಗೆ ಅಸೂಕ್ಷ್ಮವಾಗಿ ವರ್ತಿಸುವ, ಸದಾ ತನ್ನ ಬಗ್ಗೆ ಮಾತ್ರ ಯೋಚಿಸುವ ಸದಾನಂದ ಆಫೀಸಿನಲ್ಲೂ, ಮನೆಯಲ್ಲೂ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುವವನು. ಇದರಿಂದ ಬೇಸರವಾದರೂ ಸಂಪ್ರದಾಯಸ್ಥ ಗೃಹಿಣಿಯಾದ ಸ್ವರ್ಣ ಪ್ರತಿಭಟಿಸುವುದಿಲ್ಲ. ಆದರೆ ಅವರ ಮಗ ಅಜಯ್ ಹಾಗಲ್ಲ. ಕಾರಣವಿದ್ದರೂ, ಇರದಿದ್ದರೂ ತನ್ನ ಅಪ್ಪ ಸದಾನಂದ ತಾಳಿರುವ ನಿಲುವಿಗೆ ವಿರುದ್ಧವಾದ ನಿಲುವನ್ನು ತೆಗೆದುಕೊಳ್ಳುವುದು ಅಜಯ್‍ನ ಸ್ವಭಾವ. ಆ ಮೂಲಕವಾದರೂ ತನ್ನನ್ನು ಸದಾ ಅವಮಾನಿಸುವ ಅಪ್ಪನ ವಿರುದ್ಧ `ಕ್ರಾಂತಿ’ ಸಾಧಿಸಿದ್ದೇನೆಂಬ ಭಾವನೆ ಅವನಿಗೆ.

ಸದಾನಂದನ ಸೊಸೆ ಪ್ರೀತಿ ಮೇಲುನೋಟಕ್ಕೆ ತಗ್ಗಿಬಗ್ಗಿ ನಡೆಯುವ ಯುವತಿಯಂತೆ ಕಂಡರೂ ಆಕೆ ಧನಪಿಶಾಚಿ. ಮುಂದೊಂದು ದಿನ ಸದಾನಂದ ಸತ್ತು ಆತನ ಆಸ್ತಿಯೆಲ್ಲಾ ಅಜಯ್ ಪಾಲಿಗೆ ಬರುತ್ತೆ ಎಂಬ ಕಾರಣಕ್ಕೇ ಆ ಉಂಡಾಡಿಗುಂಡನನ್ನು ಮದುವೆ ಆಗಿರುವವಳು.

ಈ ಮೂವರಲ್ಲದೆ ಸದಾನಂದನ ಬದುಕಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವವಳು ಮಧ್ಯವಯಸ್ಕಿನ ಮಹಿಳೆ ಕಿರಣ್ ಮೆಣಸಿನಕಾಯಿ. ಸದಾನಂದನ ಕಂಪನಿಯ ಬೋರ್ಡ್‍ನಲ್ಲಿ ಪ್ರಮುಖ ಸದಸ್ಯೆಯಾಗಿರುವ ಕಿರಣ್ ಸದಾನಂದನ ಪ್ರೇಯಸಿ ಕೂಡ ಹೌದು. ಬೇರೆಯವರ ಬದುಕನ್ನು ನಿಯಂತ್ರಿಸುವಲ್ಲಿ ಎತ್ತಿದ ಕೈಯಾದ ಸದಾನಂದ ತನ್ನ ಮತ್ತು ಕಿರಣ್ ನಡುವಿನ ಸಂಬಂಧದ ಬಗ್ಗೆ ಬೇರೆಯವರಿಗೆ ಸುಳಿವು ಸಿಗಕೂಡದೆಂದು ಆಕೆಗೆ ಕುಡುಕನೊಬ್ಬನೊಂದಿಗೆ ಮದುವೆ ಮಾಡಿರುತ್ತಾನೆ. ಹಾಗೆ ಮಾಡುವ ಮೂಲಕ ಆಕೆಗೆ ಸಮಾಜದಲ್ಲಿ ಸ್ಥಾನಮಾನ, ಆಕೆಯ ಗಂಡನಿಗೆ ದಿನನಿತ್ಯ ಗುಂಡು ಮತ್ತು ತನಗೆ ಓರ್ವ ಸುಂದರ ಮತ್ತು ದಕ್ಷ ನಲ್ಲೆ ಸಿಗುವಂತೆ ಏರ್ಪಾಡು ಮಾಡಿಕೊಂಡಿರುತ್ತಾನೆ.

ಗುಂಡು, ಸಿಗರೇಟು ಹವ್ಯಾಸಗಳನ್ನು ಹೊಂದಿರುವ ಸದಾನಂದ ಹೈ ಬಿಪಿ, ಡಯಾಬಿಟೀಸ್ ಮತ್ತು ಹೈ ಕೊಲೆಸ್ಟರಾಲ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ತಾನು ಬದುಕಿರುವಾಗ ತನ್ನ ಸುತ್ತಲಿನವರನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸುತ್ತಿರುವ ಸದಾನಂದ ತಾನು ಸತ್ತ ಮೇಲೂ ಅವರೆಲ್ಲರ ಮೇಲೆ ನಿಯಂತ್ರಣ ಹೊಂದಿರುವುದು ಹೇಗೆ ಎಂದು ಯೋಚಿಸುತ್ತಾನೆ. ತನ್ನ ಅಪಾರ ಸಂಪತ್ತಿನಲ್ಲಿ ನಯಾಪೈಸೆಗೂ ತನ್ನ ಪತ್ನಿ ಸ್ವರ್ಣ, ಮಗ ಅಜಯ್, ಸೊಸೆ ಪ್ರೀತಿ ಮತ್ತು ಕೊನೆಗೆ ನಲ್ಲೆ ಕಿರಣ್ ಕೂಡ ಅರ್ಹರಲ್ಲ ಎಂದೇ ನಂಬಿರುವ ಸದಾನಂದ ಸಾಯುವ ಮುನ್ನ ಒಂದು ವಿಚಿತ್ರ ವಿಲ್ ಬರೆದಿಡುತ್ತಾನೆ.

ಆ ವಿಲ್‍ನಲ್ಲಿ ತನ್ನ ಸರ್ವ ಸಂಪತ್ತನ್ನು ಒಂದು ಟ್ರಸ್ಟ್‍ಗೆ ಬರೆದಿರುತ್ತಾನೆ. ಆ ಟ್ರಸ್ಟ್‍ಗೆ ಕಿರಣ್‍ಳನ್ನೇ ಟ್ರಸ್ಟೀ ಮಾಡಿರುತ್ತಾನೆ. ತನ್ನ 23ರ ಹರೆಯದ ಮಗ ಅಜಯ್‍ಗೆ 45 ವರ್ಷ ವಯಸ್ಸು ತುಂಬಿದಾಗ ಟ್ರಸ್ಟ್ ಅನ್ನು ಇಲ್ಲವಾಗಿಸಿ ತನ್ನ ಇಡೀ ಆಸ್ತಿ ಮಗನಿಗೆ ಬರಬೇಕು ಎಂದು ಆದೇಶಿಸಿರುತ್ತಾನೆ. ಆದರೆ ಅದಕ್ಕೂ ಹತ್ತಾರು ಶರತ್ತುಗಳನ್ನು ವಿಧಿಸಿರುತ್ತಾನೆ. ಪ್ರತಿದಿನ ಅಜಯ್ ಆಫೀಸಿಗೆ ಹಾಜರಾಗಬೇಕೆಂದೂ, ತನಗೆ ಇಷ್ಟವಾದ ಹಲ್ವಾವನ್ನು ಸಕ್ಕರೆ ಕಾಯಿಲೆಯಿಂದಾಗಿ ತಿನ್ನಲಾಗಿದ್ದರಿಂದ ಮಗನೂ ತನ್ನ ಜೀವಮಾನವಿಡೀ ಹಲ್ವಾ ತಿನ್ನಬಾರದೆಂದೂ ಶರತ್ತು ಹಾಕಿರುತ್ತಾನೆ. ಮನೆ ನಿರ್ವಹಣೆಗೆ, ಕೈಕಾಸಿಗೆ ತನ್ನ ಕುಟುಂಬದ ಮೂವರಿಗಲ್ಲದೆ ಟ್ರಸ್ಟಿ ಆಗಿರುವ ಕಿರಣ್‍ಳಿಗೂ ಮಾಸಾಶನವನ್ನು ನಿಗದಿ ಮಾಡಿರುತ್ತಾನೆ. ಹೀಗೆ ತನ್ನ ಸಮಾಧಿಯಿಂದಲೂ ತನ್ನ ಕುಟುಂಬದ ಮೇಲೆ ನಿಯಂತ್ರಣವನ್ನು ಸ್ಥಾಪಿಸಲು ಹವಣಿಸುವ ಸದಾನಂದ ತನ್ನ ನಲ್ಲೆ ಕಿರಣ್‍ಳನ್ನು ಸುಮ್ಮನೆ ಬಿಡುತ್ತಾನೆಯೇ? ಆಕೆ ಕೂಡ ತನ್ನ ಕುಡುಕ ಗಂಡನನ್ನು ತೊರೆದು ತನ್ನ ಮನೆಯಲ್ಲೇ ತನ್ನ ಸಂಸಾರದ ಸದಸ್ಯೆಯಂತೆ ವಾಸಿಸಬೇಕು ಎಂದು ಆದೇಶಿಸಿರುತ್ತಾನೆ. ತಾನು ವಿಧಿಸಿರುವ ಶರತ್ತುಗಳಲ್ಲಿ ಒಂದೇ ಒಂದನ್ನೂ ತನ್ನ ಕುಟುಂಬದ ಸದಸ್ಯರು ಪಾಲಿಸದಿದ್ದರೆ ತನ್ನ ಇಡೀ ಆಸ್ತಿಯನ್ನು ತಾನು ಪಟ್ಟಿ ಮಾಡಿರುವ ಸಂಘ ಸಂಸ್ಥೆಗಳಿಗೆ ದಾನ ಮಾಡಿ ತನ್ನ ಕುಟುಂಬಕ್ಕೆ ನಯಾಪೈಸೆ ಸಿಗಕೂಡದೆಂದು ಹೇಳಿರುತ್ತಾನೆ. ಆದರೆ ಈ ವಿಲ್‍ಅನ್ನು ಸದಾನಂದ ಗೌಪ್ಯವಾಗಿಟ್ಟಿರುತ್ತಾನೆ.

ಮಹೇಶ್ ದತ್ತಾನಿ

ಒಂದು ದಿನ ಸದಾನಂದ ಹೃದಯಘಾತದಿಂದ ಸತ್ತೇ ಹೋಗುತ್ತಾನೆ. ತಾನು ಬರೆದಿಟ್ಟಿರುವ ವಿಲ್‍ಗೆ ತನ್ನ ಕುಟುಂಬದ ಸದಸ್ಯರು ಹೇಗೆ ಪ್ರತಿಕ್ರಿಯಿಸುತ್ತಾರೆಂದು ನೋಡಲು ಆತನ ಆತ್ಮ ಅಲ್ಲೇ ಅವರೆಲ್ಲರ ಮಧ್ಯೆ ಸುಳಿದಾಡುತ್ತಿರುತ್ತದೆ. ಆದರೆ ಅವರು ಯಾರಿಗೂ ಆತನ ಆತ್ಮ ತಮ್ಮ ಮಧ್ಯೆ ಇರುವುದು ಗೊತ್ತಿರುವುದಿಲ್ಲ.

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ. ಅವರು ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಅವರೊಂದಿಗೆ ವಾಸಿಸಲು ಕಿರಣ್ ಬರುತ್ತಾಳೆ.

ಸದಾನಂದನ ವಿಲ್‍ನಿಂದಾಗಿ ಆತನ ಕುಟುಂಬದ ಸದಸ್ಯರ ಬದುಕೇ ಉಲ್ಟಾ ಪಲ್ಟಾ ಅಗಿದೆ. ಆದರೆ ವಿಧಿ ಇಲ್ಲ. ಆತನ ಕೋಟ್ಯಾಂತರ ರೂಪಾಯಿಗಳ ಆಸ್ತಿ ಬರಬೇಕೆಂದರೆ ಆತನ ಎಲ್ಲಾ ಶರತ್ತುಗಳನ್ನು ಪಾಲಿಸಬೇಕು. ಅಜಯ್ ಕೊನೆಗೂ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದನ್ನು ಕಲಿಯುತ್ತಾನೆ. ಆತನ ಹೆಂಡತಿ ಸ್ವರ್ಣ ಗೃಹಿಣಿಯಾಗಿ, ಹೆಂಡತಿಯಾಗಿ ತನ್ನ ಮಿತಿಗಳನ್ನು ಅರ್ಥಮಾಡಿಕೊಳ್ಳುತ್ತಾಳೆ. ಸೊಸೆ ಪ್ರೀತಿ ಕೂಡ ಬದುಕಿನಲ್ಲಿ ಹಣವೇ ಮುಖ್ಯವಲ್ಲ ಎಂದು ಮನಗಾಣುತ್ತಾಳೆ. ಇನ್ನು ಕಿರಣ್‍ಳಲ್ಲೂ ಬದಲಾವಣೆಗಳಾಗುತ್ತವೆ. ಸದಾನಂದ ಹೇಗೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಮರಣೋತ್ತರವೂ ನಿಯಂತ್ರಿಸುತ್ತಿದ್ದಾನೆ ಎಂದು ಗೊತ್ತಾಗುತ್ತದೆ. ಕೊನೆಗೆ ಅವರೆಲ್ಲ ಜೊತೆಗೂಡಿ ಸದಾನಂದನ ಕೀಲುಬೊಂಬೆಗಳಾಗಿ ಬದುಕುವುದನ್ನು ನಿಲ್ಲಿಸುವ ಮೂಲಕ ಆತನ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ.

-ಇದು ಯಾವುದೋ ಸಿನಿಮಾದ ಕತೆಯಲ್ಲ. ಬದಲಾಗಿ ನನ್ನ ಹಲವಾರು ವರ್ಷಗಳ ಸ್ನೇಹಿತನೂ, ಸಾಹಿತಿಯೂ ಆಗಿರುವ ಮಹೇಶ್ ದತ್ತಾನಿ ಬರೆದಿರುವ ಒಂದು ನಾಟಕದ ಕಥಾಸಾರಾಂಶ. ಇದನ್ನು ಒಂದು ಸೀರಿಯಸ್ ವಿಷಯದ ಸುತ್ತ ಹೆಣೆದಿದ್ದರೂ ಡೈಲಾಗ್‍ಗಳು ತುಂಬಾ ಮಜವಾಗಿದ್ದು ಇದೊಂದು ಕಾಮಿಡಿ ನಾಟಕವಾಗಿದೆ. ಈ ಇಂಗ್ಲಿಷ್ ನಾಟಕದ ಹೆಸರು `Where there is a will’. ಈಗ ಈ ನಾಟಕವು ಬೆಂಗಳೂರು ಮತ್ತು ಅಲಹಾಬಾದ್ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿದೆ.

ಆಗಸ್ಟ್ 14, 2013


ಇದನ್ನು ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...