Homeಅಂಕಣಗಳುಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹಣ ಇರುವೆಡೆ ಮನುಷ್ಯರ ಗುಣ ಎಂಥದ್ದು? ಗೌರಿ ಲಂಕೇಶರ ಚಿಂತನಾರ್ಹ ಬರಹ

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ.

- Advertisement -
- Advertisement -

ಶ್ರಮಜೀವಿಯಾದ ಸದಾನಂದ ಪಟೇಲ್ ಕಷ್ಟಪಟ್ಟು ದುಡಿದು ಕೋಟ್ಯಾಂತರ ರೂಪಾಯಿಗಳ ಆಸ್ತಿಯ ಮಾಲೀಕನಾಗಿದ್ದಾನೆ. ತನ್ನ ಸಾಧನೆ ಬಗ್ಗೆ ಆತನಿಗೆ ತುಂಬಾ ಹೆಮ್ಮೆ ಇದೆ. ಹಾಗೆಯೇ ಅಶಿಕ್ಷಿತಳಾದ ಹೆಂಡತಿ ಸ್ವರ್ಣಳ ಬಗ್ಗೆ, ಇನ್ನೂ ಉಂಡಾಡಿ ಗುಂಡನಂತಾಡುವ ಮಗ ಅಜಯ್ ಬಗ್ಗೆ ಮತ್ತು ಸೌಮ್ಯ ಸ್ವಭಾವದವಳಂತೆ ಕಂಡರೂ ಒಳಗೊಳಗೆ ಕುತಂತ್ರಿಯಾದ ಸೊಸೆ ಪ್ರೀತಿ ಬಗ್ಗೆ ಸದಾನಂದನಿಗೆ ಇನ್ನಿಲ್ಲದಷ್ಟು ಕೋಪ, ಅಸಹನೆ ಮತ್ತು ಸೇಡಿನ ಭಾವನೆ. ಈ ಮೂವರೂ ತನ್ನ ಮರಣದ ನಂತರ ತಾನು ಕಷ್ಟಪಟ್ಟು ದುಡಿದಿದ್ದ ಆಸ್ತಿಯನ್ನೆಲ್ಲ ಮಜಾ ಮಾಡುತ್ತಾ ಕರಗಿಸುತ್ತಾರೆ ಎಂಬ ಗುಮಾನಿ. ಅದಕ್ಕಿಂತ ಮುಖ್ಯವಾಗಿ ಇವರೆಲ್ಲರಿಂದಾಗಿ ತನ್ನದು ಎಂಬುದು ಯಾವುದೂ ಈ ಭೂಮಿಯ ಮೇಲೆ ಉಳಿದಿರುವುದಿಲ್ಲ ಎಂಬ ಜಿಗುಪ್ಸೆ.

ಈತನ ಹೆಸರು ಸದಾನಂದ ಎಂಬುದಾದರೂ ಈತ ಕೋಪಿಷ್ಟ. ಈತ ನಕ್ಕಿದ್ದನ್ನು ನೋಡಿದವರೇ ಇಲ್ಲ. ಇತರರ ಬಗ್ಗೆ ಅಸೂಕ್ಷ್ಮವಾಗಿ ವರ್ತಿಸುವ, ಸದಾ ತನ್ನ ಬಗ್ಗೆ ಮಾತ್ರ ಯೋಚಿಸುವ ಸದಾನಂದ ಆಫೀಸಿನಲ್ಲೂ, ಮನೆಯಲ್ಲೂ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುವವನು. ಇದರಿಂದ ಬೇಸರವಾದರೂ ಸಂಪ್ರದಾಯಸ್ಥ ಗೃಹಿಣಿಯಾದ ಸ್ವರ್ಣ ಪ್ರತಿಭಟಿಸುವುದಿಲ್ಲ. ಆದರೆ ಅವರ ಮಗ ಅಜಯ್ ಹಾಗಲ್ಲ. ಕಾರಣವಿದ್ದರೂ, ಇರದಿದ್ದರೂ ತನ್ನ ಅಪ್ಪ ಸದಾನಂದ ತಾಳಿರುವ ನಿಲುವಿಗೆ ವಿರುದ್ಧವಾದ ನಿಲುವನ್ನು ತೆಗೆದುಕೊಳ್ಳುವುದು ಅಜಯ್‍ನ ಸ್ವಭಾವ. ಆ ಮೂಲಕವಾದರೂ ತನ್ನನ್ನು ಸದಾ ಅವಮಾನಿಸುವ ಅಪ್ಪನ ವಿರುದ್ಧ `ಕ್ರಾಂತಿ’ ಸಾಧಿಸಿದ್ದೇನೆಂಬ ಭಾವನೆ ಅವನಿಗೆ.

ಸದಾನಂದನ ಸೊಸೆ ಪ್ರೀತಿ ಮೇಲುನೋಟಕ್ಕೆ ತಗ್ಗಿಬಗ್ಗಿ ನಡೆಯುವ ಯುವತಿಯಂತೆ ಕಂಡರೂ ಆಕೆ ಧನಪಿಶಾಚಿ. ಮುಂದೊಂದು ದಿನ ಸದಾನಂದ ಸತ್ತು ಆತನ ಆಸ್ತಿಯೆಲ್ಲಾ ಅಜಯ್ ಪಾಲಿಗೆ ಬರುತ್ತೆ ಎಂಬ ಕಾರಣಕ್ಕೇ ಆ ಉಂಡಾಡಿಗುಂಡನನ್ನು ಮದುವೆ ಆಗಿರುವವಳು.

ಈ ಮೂವರಲ್ಲದೆ ಸದಾನಂದನ ಬದುಕಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವವಳು ಮಧ್ಯವಯಸ್ಕಿನ ಮಹಿಳೆ ಕಿರಣ್ ಮೆಣಸಿನಕಾಯಿ. ಸದಾನಂದನ ಕಂಪನಿಯ ಬೋರ್ಡ್‍ನಲ್ಲಿ ಪ್ರಮುಖ ಸದಸ್ಯೆಯಾಗಿರುವ ಕಿರಣ್ ಸದಾನಂದನ ಪ್ರೇಯಸಿ ಕೂಡ ಹೌದು. ಬೇರೆಯವರ ಬದುಕನ್ನು ನಿಯಂತ್ರಿಸುವಲ್ಲಿ ಎತ್ತಿದ ಕೈಯಾದ ಸದಾನಂದ ತನ್ನ ಮತ್ತು ಕಿರಣ್ ನಡುವಿನ ಸಂಬಂಧದ ಬಗ್ಗೆ ಬೇರೆಯವರಿಗೆ ಸುಳಿವು ಸಿಗಕೂಡದೆಂದು ಆಕೆಗೆ ಕುಡುಕನೊಬ್ಬನೊಂದಿಗೆ ಮದುವೆ ಮಾಡಿರುತ್ತಾನೆ. ಹಾಗೆ ಮಾಡುವ ಮೂಲಕ ಆಕೆಗೆ ಸಮಾಜದಲ್ಲಿ ಸ್ಥಾನಮಾನ, ಆಕೆಯ ಗಂಡನಿಗೆ ದಿನನಿತ್ಯ ಗುಂಡು ಮತ್ತು ತನಗೆ ಓರ್ವ ಸುಂದರ ಮತ್ತು ದಕ್ಷ ನಲ್ಲೆ ಸಿಗುವಂತೆ ಏರ್ಪಾಡು ಮಾಡಿಕೊಂಡಿರುತ್ತಾನೆ.

ಗುಂಡು, ಸಿಗರೇಟು ಹವ್ಯಾಸಗಳನ್ನು ಹೊಂದಿರುವ ಸದಾನಂದ ಹೈ ಬಿಪಿ, ಡಯಾಬಿಟೀಸ್ ಮತ್ತು ಹೈ ಕೊಲೆಸ್ಟರಾಲ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ತಾನು ಬದುಕಿರುವಾಗ ತನ್ನ ಸುತ್ತಲಿನವರನ್ನು ತನ್ನ ತಾಳಕ್ಕೆ ತಕ್ಕಂತೆ ಕುಣಿಸುತ್ತಿರುವ ಸದಾನಂದ ತಾನು ಸತ್ತ ಮೇಲೂ ಅವರೆಲ್ಲರ ಮೇಲೆ ನಿಯಂತ್ರಣ ಹೊಂದಿರುವುದು ಹೇಗೆ ಎಂದು ಯೋಚಿಸುತ್ತಾನೆ. ತನ್ನ ಅಪಾರ ಸಂಪತ್ತಿನಲ್ಲಿ ನಯಾಪೈಸೆಗೂ ತನ್ನ ಪತ್ನಿ ಸ್ವರ್ಣ, ಮಗ ಅಜಯ್, ಸೊಸೆ ಪ್ರೀತಿ ಮತ್ತು ಕೊನೆಗೆ ನಲ್ಲೆ ಕಿರಣ್ ಕೂಡ ಅರ್ಹರಲ್ಲ ಎಂದೇ ನಂಬಿರುವ ಸದಾನಂದ ಸಾಯುವ ಮುನ್ನ ಒಂದು ವಿಚಿತ್ರ ವಿಲ್ ಬರೆದಿಡುತ್ತಾನೆ.

ಆ ವಿಲ್‍ನಲ್ಲಿ ತನ್ನ ಸರ್ವ ಸಂಪತ್ತನ್ನು ಒಂದು ಟ್ರಸ್ಟ್‍ಗೆ ಬರೆದಿರುತ್ತಾನೆ. ಆ ಟ್ರಸ್ಟ್‍ಗೆ ಕಿರಣ್‍ಳನ್ನೇ ಟ್ರಸ್ಟೀ ಮಾಡಿರುತ್ತಾನೆ. ತನ್ನ 23ರ ಹರೆಯದ ಮಗ ಅಜಯ್‍ಗೆ 45 ವರ್ಷ ವಯಸ್ಸು ತುಂಬಿದಾಗ ಟ್ರಸ್ಟ್ ಅನ್ನು ಇಲ್ಲವಾಗಿಸಿ ತನ್ನ ಇಡೀ ಆಸ್ತಿ ಮಗನಿಗೆ ಬರಬೇಕು ಎಂದು ಆದೇಶಿಸಿರುತ್ತಾನೆ. ಆದರೆ ಅದಕ್ಕೂ ಹತ್ತಾರು ಶರತ್ತುಗಳನ್ನು ವಿಧಿಸಿರುತ್ತಾನೆ. ಪ್ರತಿದಿನ ಅಜಯ್ ಆಫೀಸಿಗೆ ಹಾಜರಾಗಬೇಕೆಂದೂ, ತನಗೆ ಇಷ್ಟವಾದ ಹಲ್ವಾವನ್ನು ಸಕ್ಕರೆ ಕಾಯಿಲೆಯಿಂದಾಗಿ ತಿನ್ನಲಾಗಿದ್ದರಿಂದ ಮಗನೂ ತನ್ನ ಜೀವಮಾನವಿಡೀ ಹಲ್ವಾ ತಿನ್ನಬಾರದೆಂದೂ ಶರತ್ತು ಹಾಕಿರುತ್ತಾನೆ. ಮನೆ ನಿರ್ವಹಣೆಗೆ, ಕೈಕಾಸಿಗೆ ತನ್ನ ಕುಟುಂಬದ ಮೂವರಿಗಲ್ಲದೆ ಟ್ರಸ್ಟಿ ಆಗಿರುವ ಕಿರಣ್‍ಳಿಗೂ ಮಾಸಾಶನವನ್ನು ನಿಗದಿ ಮಾಡಿರುತ್ತಾನೆ. ಹೀಗೆ ತನ್ನ ಸಮಾಧಿಯಿಂದಲೂ ತನ್ನ ಕುಟುಂಬದ ಮೇಲೆ ನಿಯಂತ್ರಣವನ್ನು ಸ್ಥಾಪಿಸಲು ಹವಣಿಸುವ ಸದಾನಂದ ತನ್ನ ನಲ್ಲೆ ಕಿರಣ್‍ಳನ್ನು ಸುಮ್ಮನೆ ಬಿಡುತ್ತಾನೆಯೇ? ಆಕೆ ಕೂಡ ತನ್ನ ಕುಡುಕ ಗಂಡನನ್ನು ತೊರೆದು ತನ್ನ ಮನೆಯಲ್ಲೇ ತನ್ನ ಸಂಸಾರದ ಸದಸ್ಯೆಯಂತೆ ವಾಸಿಸಬೇಕು ಎಂದು ಆದೇಶಿಸಿರುತ್ತಾನೆ. ತಾನು ವಿಧಿಸಿರುವ ಶರತ್ತುಗಳಲ್ಲಿ ಒಂದೇ ಒಂದನ್ನೂ ತನ್ನ ಕುಟುಂಬದ ಸದಸ್ಯರು ಪಾಲಿಸದಿದ್ದರೆ ತನ್ನ ಇಡೀ ಆಸ್ತಿಯನ್ನು ತಾನು ಪಟ್ಟಿ ಮಾಡಿರುವ ಸಂಘ ಸಂಸ್ಥೆಗಳಿಗೆ ದಾನ ಮಾಡಿ ತನ್ನ ಕುಟುಂಬಕ್ಕೆ ನಯಾಪೈಸೆ ಸಿಗಕೂಡದೆಂದು ಹೇಳಿರುತ್ತಾನೆ. ಆದರೆ ಈ ವಿಲ್‍ಅನ್ನು ಸದಾನಂದ ಗೌಪ್ಯವಾಗಿಟ್ಟಿರುತ್ತಾನೆ.

ಮಹೇಶ್ ದತ್ತಾನಿ

ಒಂದು ದಿನ ಸದಾನಂದ ಹೃದಯಘಾತದಿಂದ ಸತ್ತೇ ಹೋಗುತ್ತಾನೆ. ತಾನು ಬರೆದಿಟ್ಟಿರುವ ವಿಲ್‍ಗೆ ತನ್ನ ಕುಟುಂಬದ ಸದಸ್ಯರು ಹೇಗೆ ಪ್ರತಿಕ್ರಿಯಿಸುತ್ತಾರೆಂದು ನೋಡಲು ಆತನ ಆತ್ಮ ಅಲ್ಲೇ ಅವರೆಲ್ಲರ ಮಧ್ಯೆ ಸುಳಿದಾಡುತ್ತಿರುತ್ತದೆ. ಆದರೆ ಅವರು ಯಾರಿಗೂ ಆತನ ಆತ್ಮ ತಮ್ಮ ಮಧ್ಯೆ ಇರುವುದು ಗೊತ್ತಿರುವುದಿಲ್ಲ.

ಹೊಸ ಯೋಜನೆಗಳನ್ನು ಜಾರಿಗೆ ತರುವ ಹುಮ್ಮಸ್ಸಿನಲ್ಲಿದ್ದ ಅಜಯ್, ಐಶಾರಾಮಿ ಬದುಕಿನ ಕನಸ್ಸು ಕಾಣುತ್ತಿದ್ದ ಪ್ರೀತಿ, ತನ್ನ ಗಂಡ ನಲ್ಲೆಯೋರ್ವಳನ್ನು ಇಟ್ಟುಕೊಂಡಿದ್ದು ಗೊತ್ತಾಗಿರುವ ಸ್ವರ್ಣ ಎಲ್ಲರೂ ಸದಾನಂದನ ವಿಲ್‍ನಲ್ಲಿರುವ ಶರತ್ತುಗಳನ್ನು ಕೇಳಿ ದಂಗುಬಡಿದುಹೋಗುತ್ತಾರೆ. ಅವರು ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಅವರೊಂದಿಗೆ ವಾಸಿಸಲು ಕಿರಣ್ ಬರುತ್ತಾಳೆ.

ಸದಾನಂದನ ವಿಲ್‍ನಿಂದಾಗಿ ಆತನ ಕುಟುಂಬದ ಸದಸ್ಯರ ಬದುಕೇ ಉಲ್ಟಾ ಪಲ್ಟಾ ಅಗಿದೆ. ಆದರೆ ವಿಧಿ ಇಲ್ಲ. ಆತನ ಕೋಟ್ಯಾಂತರ ರೂಪಾಯಿಗಳ ಆಸ್ತಿ ಬರಬೇಕೆಂದರೆ ಆತನ ಎಲ್ಲಾ ಶರತ್ತುಗಳನ್ನು ಪಾಲಿಸಬೇಕು. ಅಜಯ್ ಕೊನೆಗೂ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದನ್ನು ಕಲಿಯುತ್ತಾನೆ. ಆತನ ಹೆಂಡತಿ ಸ್ವರ್ಣ ಗೃಹಿಣಿಯಾಗಿ, ಹೆಂಡತಿಯಾಗಿ ತನ್ನ ಮಿತಿಗಳನ್ನು ಅರ್ಥಮಾಡಿಕೊಳ್ಳುತ್ತಾಳೆ. ಸೊಸೆ ಪ್ರೀತಿ ಕೂಡ ಬದುಕಿನಲ್ಲಿ ಹಣವೇ ಮುಖ್ಯವಲ್ಲ ಎಂದು ಮನಗಾಣುತ್ತಾಳೆ. ಇನ್ನು ಕಿರಣ್‍ಳಲ್ಲೂ ಬದಲಾವಣೆಗಳಾಗುತ್ತವೆ. ಸದಾನಂದ ಹೇಗೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಮರಣೋತ್ತರವೂ ನಿಯಂತ್ರಿಸುತ್ತಿದ್ದಾನೆ ಎಂದು ಗೊತ್ತಾಗುತ್ತದೆ. ಕೊನೆಗೆ ಅವರೆಲ್ಲ ಜೊತೆಗೂಡಿ ಸದಾನಂದನ ಕೀಲುಬೊಂಬೆಗಳಾಗಿ ಬದುಕುವುದನ್ನು ನಿಲ್ಲಿಸುವ ಮೂಲಕ ಆತನ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾನೆ.

-ಇದು ಯಾವುದೋ ಸಿನಿಮಾದ ಕತೆಯಲ್ಲ. ಬದಲಾಗಿ ನನ್ನ ಹಲವಾರು ವರ್ಷಗಳ ಸ್ನೇಹಿತನೂ, ಸಾಹಿತಿಯೂ ಆಗಿರುವ ಮಹೇಶ್ ದತ್ತಾನಿ ಬರೆದಿರುವ ಒಂದು ನಾಟಕದ ಕಥಾಸಾರಾಂಶ. ಇದನ್ನು ಒಂದು ಸೀರಿಯಸ್ ವಿಷಯದ ಸುತ್ತ ಹೆಣೆದಿದ್ದರೂ ಡೈಲಾಗ್‍ಗಳು ತುಂಬಾ ಮಜವಾಗಿದ್ದು ಇದೊಂದು ಕಾಮಿಡಿ ನಾಟಕವಾಗಿದೆ. ಈ ಇಂಗ್ಲಿಷ್ ನಾಟಕದ ಹೆಸರು `Where there is a will’. ಈಗ ಈ ನಾಟಕವು ಬೆಂಗಳೂರು ಮತ್ತು ಅಲಹಾಬಾದ್ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿದೆ.

ಆಗಸ್ಟ್ 14, 2013


ಇದನ್ನು ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...