Homeಮುಖಪುಟದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

"ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ" ಎಂದು ಅಂಬೇಡ್ಕರ್‌ ಹೇಳಿದ್ದರು.

- Advertisement -
- Advertisement -

ಅನುವಾದ: ನಿಖಿಲ್ ಕೋಲ್ಪೆ

ಪೌರತ್ವ ತಿದ್ದುಪಡಿ ಕಾಯಿದೆ(CAA)ಯು ಪಾಕಿಸ್ತಾನ ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಬಯಸಿದೆ. ಇಲ್ಲಿ ಧಾರ್ಮಿಕ ನೆಲೆಯನ್ನು ಅನುಸರಿಸಲಾಗಿದೆ. ಆದರೆ, ಇದೇ ಹೊತ್ತಿಗೆ ಮೂಲತಃ ಭಾರತೀಯರಾಗಿದ್ದು ರಬ್ಬರ್, ಚಹಾತೋಟಗಳಲ್ಲಿ ಕೆಲಸ ಮಾಡಲು ಬ್ರಿಟಿಷರು ಕೊಂಡೊಯ್ದು, ನಂತರ ಅಲ್ಲಿಯೇ ನೆಲೆನಿಂತ ಹಿಂದೂ ತಮಿಳರನ್ನು ಈ ಕಾಯಿದೆಯಿಂದ ಹೊರಗಿಡಲಾಗಿದೆ. ದೇಶ ವಿಭಜನೆಯ ಕಾಲದಲ್ಲಿ ಸಾವಿರಾರು ಮಂದಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಅಂತೆಯೇ ಸಾವಿರಾರು ಮಂದಿ ಭಾರತಕ್ಕೆ ವಲಸೆ ಬಂದಿದ್ದರು. (ಆಗ ಬಾಂಗ್ಲಾದೇಶವು ಪೂರ್ವ ಪಾಕಿಸ್ತಾನವಾಗಿತ್ತು.) ಆಗಲೂ ಸಂವಿಧಾನ ಸಭೆಯು ವಲಸಿಗರ ಕುರಿತು ಈಗ ಎತ್ತಲಾಗುತ್ತಿರುವ ಪ್ರಶ್ನೆಗಳನ್ನೂ ಚರ್ಚಿಸಿತ್ತು. ಆ ಕುರಿತ ಕೆಲವು ಕುತೂಹಲಕಾರಿ ವಿವರಗಳು ಇಲ್ಲಿವೆ.

ಕೇವಲ ಹಿಂದೂಗಳು ಮತ್ತು ಸಿಕ್ಖ್ ವಲಸಿಗರಿಗೆ ಮಾತ್ರ ಭಾರತೀಯ ಪೌರತ್ವ ನೀಡಬೇಕು ಎಂದು ಬಲಪಂಥೀಯರು ಬಯಸಿದ್ದರು. ಆದೆ, ಈ ರೀತಿ ಧರ್ಮಾಧರಿತ ಆಯ್ಕೆಗಳನ್ನು ಮಾಡುವುದು ಅನ್ಯಾಯ ಎಂದು ಇನ್ನೂ ಕೆಲವರು ಬಯಸಿದ್ದರು. ಅಷ್ಟಕ್ಕೂ ವಿಭಜನೆಯ ಬಳಿಕ ನಡೆದ ರಕ್ತಸಿಕ್ತ ಹಿಂಸಾಚಾರದಿಂದ ಭಯಗೊಂಡಷ್ಟೇ ವಲಸೆಹೋದ ಮುಸ್ಲಿಮರಿರಬಹುದು. ಅವರು ಎಲ್ಲಾ ಶಾಂತವಾದ ಮೇಲೆ ಮರಳಿ ಬಂದು ಭಾರತೀಯ ಪೌರರಾಗಲು ಬಯಸಿರಬಹುದು.

ಆದರೆ, ಮರಳಿ ಬರಲು ಬಯಸುವ ಮುಸ್ಲಿಮರನ್ನು ಹೊರಗಿಡಬೇಕು ಎಂದು ಕೆಲವರು ಬಯಸಿದ್ದರೆ, ಇಲ್ಲಿ ಬದುಕಲು ಬಯಸುವ ಎಲ್ಲರಿಗೂ ಭಾರತದ ಗಡಿಗಳು ತೆರೆದಿರಬೇಕೆಂದು ಕಾಂಗ್ರೆಸ್ ನಾಯಕ ಬ್ರಿಜೇಶ್ವರ ಪ್ರಸಾದ್ ಅವರಂತವರು ವಾದಿಸಿದ್ದರು. ಮುಸ್ಲಿಮ್ ನಿರಾಶ್ರಿತರು ವಾಸ್ತವದಲ್ಲಿ “ಗೂಢಚಾರ”ರಾಗಿದ್ದು, “ರಾಷ್ಟ್ರೀಯ ಭದ್ರತೆ”ಗೆ ಅಪಾಯವಾಗಬಹುದು ಎಂದು ವಾದಿಸಿದವರೂ ಇದ್ದರು. ಮುಸ್ಲಿಮರ ದೇಶಪ್ರೇಮದ ಮೇಲೆ ಆಗಲೇ ಸಂಶಯದ ಲೇಬಲ್ ಅಂಟಿಸಲಾಗಿತ್ತು.

ಹಿಂದೂ ಬಹುಸಂಖ್ಯಾತವಾದವು ತಲೆಯೆತ್ತಿದರೆ, ಅದು ಭಾರತಕ್ಕೆ ಯಾವುದೇ ಅಲ್ಪಸಂಖ್ಯಾತ ಗುಂಪಿಗಿಂತ ಹೆಚ್ಚಿನ ಅಪಾಯ ಒಡ್ಡಬಹುದು ಎಂಬ ಜವಾಹರಲಾಲ್ ನೆಹರೂ ಅವರ ವಾದನ್ನು ಬ್ರಿಜೇಶ್ವರ ಪ್ರಸಾದ್ ಬೆಂಬಲಿಸಿದ್ದರು. ಮತ್ತೆ ಕೆಲವರು ಮರಳಿ ಬರಬಯಸುವ ಮುಸ್ಲಿಮರನ್ನು ಹಿಂದಕ್ಕೆ ಪಡೆಯುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದೂ ವಾದಿಸಿದ್ದರು.

ಆದರೆ, ಬ್ರಿಜೇಶ್ವರ ಪ್ರಸಾದ್ ಅವರು ಮಾರ್ಮಿಕ ಉತ್ತರ ನೀಡಿ. “ನಾವು ಒಂದು ಅಂಗಡಿ ವ್ಯಾಪಾರಿಗಳ ದೇಶವಲ್ಲ…ಆರ್ಥಿಕ ಪರಿಣಾಮ ಏನೇ ಇದ್ದರೂ, ನಾವು ಕೆಲವು ಕೆಲವು ಆದರ್ಶಗಳ ಮೇಲೆ ನಿಲ್ಲಬಯಸುತ್ತೇವೆ. ಕೆಲವು ನೈತಿಕ ತತ್ವಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಮೂಲಕ ಮಾತ್ರ ದೇಶಗಳು ಪ್ರಗತಿ ಸಾಧಿಸುತ್ತವೆ. ಜೀವನದ ಭೌತಿಕ ಅಭಿವೃದ್ಧಿಯು ಪ್ರಗತಿ ಮತ್ತು ನಾಗರಿಕತೆಯ ಮಾನದಂಡವಲ್ಲ. ಅಗ್ಗದ ಆರ್ಥಿಕತೆಗೆ ಭದ್ರವಾದ ರಾಜಕೀಯ ತತ್ವಗಳನ್ನು ಅಡಿಯಾಳಾಗಿಸುವುದು ರಾಜಕೀಯ ಅಥವಾ ಮುತ್ಸದ್ದಿತನವೆಂದು ನಾನು ಭಾವಿಸುವುದಿಲ್ಲ. ಭಾರತೀಯ ಪ್ರಜೆಯಾಗಿರುವ ಒಬ್ಬ ಮುಸ್ಲಿಮನನ್ನು ಈ ಸಂವಿಧಾನದ ಆರಂಭದೊಂದಿಗೆ ಆತನ ಪೌರತ್ವದಿಂದ ವಂಚಿತಗೊಳಿಸಲು ಯಾವುದೇ ಕಾರಣವೂ ನನಗೆ ಕಾಣುವುದಿಲ್ಲ. ಅದೂ ಕೂಡಾ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳಿಗೆ ಭಾರತೀಯ ಪೌರತ್ವ ಪಡೆಯಲು ನಾವು ಆಹ್ವಾನಿಸುತ್ತಿರುವಾಗ” ಎಂದು ಹೇಳಿದ್ದರು.

ಯುದ್ಧವಿನ್ನೂ ಮುಗಿದಿಲ್ಲ

ಬಹುಸಂಖ್ಯಾತವಾದದ ಪರವಿದ್ದವರು 1948ರಲ್ಲಿ ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ಸೋತಿದ್ದರು. ಆದರೆ, ಜಾತ್ಯತೀತವಾದಿಗಳು ಕೆಲವು ರಾಜಿಗಳನ್ನು ಒಪ್ಪುವಂತೆ ಮಾಡಲು ಅವರು ಸಫಲರಾಗಿದ್ದರು. ಹೀಗಿದ್ದರೂ, ಜನಾಂಗೀಯವಾದದ ವಿಚಾರ ಮತ್ತು ಹೆಚ್ಚು ಪ್ರಜಾಪ್ರಭುತ್ವವಾದಿ ವಿಚಾರಗಳ ನಡುವಿನ ಯುದ್ಧವು ಇನ್ನೂ ಮುಗಿದಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಅಂಗಸಂಸ್ಥೆಗಳಾದ ಭಾರತೀಯ ಜನತಾ ಪಕ್ಷ ಮುಂತಾದವು ಈ ಚರ್ಚೆಯನ್ನು ತಮ್ಮ ಪರವಾಗಿ ಮುಗಿಸಲು ಶ್ರಮಿಸುತ್ತಿವೆ.

ಕೊನೆಗೂ ಪೌರತ್ವ ತಿದ್ದುಪಡಿ ಕಾಯಿದೆಯು ಕೇವಲ ಊರು ದೇಶಗಳ ಮುಸ್ಲಿಮೇತರರಿಗೆ ಪೌರತ್ವ ನೀಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ.  ಅದನ್ನು ಈ ಕಾಯಿದೆ ಇಲ್ಲದೆಯೇ ಮಾಡಬಹುದು. ಭಾರತವು ಕೆಲವರಿಗೆ ಸಹಜ ಮನೆಯಾಗಿದ್ದು, ಮತ್ತೆ ಕೆಲವರು ಇನ್ನೂ ಹೊರಗಿನವರಾಗಿದ್ದಾರೆ ಎಂಬ ಚಿಂತನೆಗೆ ಕಾನೂನು ಮಾನ್ಯತೆ ಒದಗಿಸುವ ಉದ್ದೇಶವನ್ನು ಈ ಕಾಯಿದೆ ಹೊಂದಿದೆ.

ಬಿ.ಆರ್. ಅಂಬೇಡ್ಕರ್ ಅವರ ಭಯವು ನಿಜವಾಗಿದೆ. “ಭಾರತದಲ್ಲಿ ಪ್ರಜಾಪ್ರಭುತ್ವವು ಭಾರತದ ಮಣ್ಣಿನ ಮೇಲಿನ ಮೇಲುಡುಪು ಮಾತ್ರವಾಗಿದೆ‌; ಅದು ಮೂಲಭೂತವಾಗಿ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಅವರು ಹೇಳಿದ್ದರು. “ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ” ಎಂದೂ ಅವರು ಹೇಳಿದ್ದರು.

ಇವತ್ತು ಭವಿಷ್ಯಕ್ಕಾಗಿನ ಹೋರಾಟವನ್ನು ಬೀದಿಗಳಲ್ಲಿ- ದೇಶದಾದ್ಯಂತ ಅನೇಕ ಶಾಹೀನ್‌ ಬಾಗ್‌ಗಳಲ್ಲಿ ನಡೆಸಲಾಗುತ್ತಿದೆ. ಸಂಗೀತ, ಕವಿತೆ, ಚಿತ್ರಗಳು, ಫಲಕಗಳು ಮತ್ತು ಘೋಷಣೆಗಳಿಂದ ಸಜ್ಜಿತ ಮಹಿಳೆಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ಪ್ರತಿಯೊಂದು ಸ್ಥಳವೂ ನಾವು ಸಾಂವಿಧಾನಿಕ ನೈತಿಕತೆಯನ್ನು ಕಲಿಯುವ ಶಾಲೆಯಾಗಿದೆ. ಸಂವಿಧಾನದ ಪೀಠಿಕೆಯನ್ನು ಉಚ್ಛರಿಸುವ, ಪುನರುಚ್ಛರಿಸುವ ಮತ್ತು ವಿಶ್ಲೇಷಿಸುವ ಮೂಲಕ ನಾವು ಸಂವಿಧಾನವು ನಮಗೆ ನೀಡಿರುವುದನ್ನು ಗಳಿಸುತ್ತಿದ್ದೇವೆ. ಅಷ್ಟಕ್ಕೂ ರಸ್ತೆಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುವುದರ ಹೊರತಾಗಿ ಈ ನಿಟ್ಟಿನಲ್ಲಿ ನಿಜವಾದ ಕಲಿಕೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...