Homeಮುಖಪುಟದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

"ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ" ಎಂದು ಅಂಬೇಡ್ಕರ್‌ ಹೇಳಿದ್ದರು.

- Advertisement -
- Advertisement -

ಅನುವಾದ: ನಿಖಿಲ್ ಕೋಲ್ಪೆ

ಪೌರತ್ವ ತಿದ್ದುಪಡಿ ಕಾಯಿದೆ(CAA)ಯು ಪಾಕಿಸ್ತಾನ ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಬಯಸಿದೆ. ಇಲ್ಲಿ ಧಾರ್ಮಿಕ ನೆಲೆಯನ್ನು ಅನುಸರಿಸಲಾಗಿದೆ. ಆದರೆ, ಇದೇ ಹೊತ್ತಿಗೆ ಮೂಲತಃ ಭಾರತೀಯರಾಗಿದ್ದು ರಬ್ಬರ್, ಚಹಾತೋಟಗಳಲ್ಲಿ ಕೆಲಸ ಮಾಡಲು ಬ್ರಿಟಿಷರು ಕೊಂಡೊಯ್ದು, ನಂತರ ಅಲ್ಲಿಯೇ ನೆಲೆನಿಂತ ಹಿಂದೂ ತಮಿಳರನ್ನು ಈ ಕಾಯಿದೆಯಿಂದ ಹೊರಗಿಡಲಾಗಿದೆ. ದೇಶ ವಿಭಜನೆಯ ಕಾಲದಲ್ಲಿ ಸಾವಿರಾರು ಮಂದಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಅಂತೆಯೇ ಸಾವಿರಾರು ಮಂದಿ ಭಾರತಕ್ಕೆ ವಲಸೆ ಬಂದಿದ್ದರು. (ಆಗ ಬಾಂಗ್ಲಾದೇಶವು ಪೂರ್ವ ಪಾಕಿಸ್ತಾನವಾಗಿತ್ತು.) ಆಗಲೂ ಸಂವಿಧಾನ ಸಭೆಯು ವಲಸಿಗರ ಕುರಿತು ಈಗ ಎತ್ತಲಾಗುತ್ತಿರುವ ಪ್ರಶ್ನೆಗಳನ್ನೂ ಚರ್ಚಿಸಿತ್ತು. ಆ ಕುರಿತ ಕೆಲವು ಕುತೂಹಲಕಾರಿ ವಿವರಗಳು ಇಲ್ಲಿವೆ.

ಕೇವಲ ಹಿಂದೂಗಳು ಮತ್ತು ಸಿಕ್ಖ್ ವಲಸಿಗರಿಗೆ ಮಾತ್ರ ಭಾರತೀಯ ಪೌರತ್ವ ನೀಡಬೇಕು ಎಂದು ಬಲಪಂಥೀಯರು ಬಯಸಿದ್ದರು. ಆದೆ, ಈ ರೀತಿ ಧರ್ಮಾಧರಿತ ಆಯ್ಕೆಗಳನ್ನು ಮಾಡುವುದು ಅನ್ಯಾಯ ಎಂದು ಇನ್ನೂ ಕೆಲವರು ಬಯಸಿದ್ದರು. ಅಷ್ಟಕ್ಕೂ ವಿಭಜನೆಯ ಬಳಿಕ ನಡೆದ ರಕ್ತಸಿಕ್ತ ಹಿಂಸಾಚಾರದಿಂದ ಭಯಗೊಂಡಷ್ಟೇ ವಲಸೆಹೋದ ಮುಸ್ಲಿಮರಿರಬಹುದು. ಅವರು ಎಲ್ಲಾ ಶಾಂತವಾದ ಮೇಲೆ ಮರಳಿ ಬಂದು ಭಾರತೀಯ ಪೌರರಾಗಲು ಬಯಸಿರಬಹುದು.

ಆದರೆ, ಮರಳಿ ಬರಲು ಬಯಸುವ ಮುಸ್ಲಿಮರನ್ನು ಹೊರಗಿಡಬೇಕು ಎಂದು ಕೆಲವರು ಬಯಸಿದ್ದರೆ, ಇಲ್ಲಿ ಬದುಕಲು ಬಯಸುವ ಎಲ್ಲರಿಗೂ ಭಾರತದ ಗಡಿಗಳು ತೆರೆದಿರಬೇಕೆಂದು ಕಾಂಗ್ರೆಸ್ ನಾಯಕ ಬ್ರಿಜೇಶ್ವರ ಪ್ರಸಾದ್ ಅವರಂತವರು ವಾದಿಸಿದ್ದರು. ಮುಸ್ಲಿಮ್ ನಿರಾಶ್ರಿತರು ವಾಸ್ತವದಲ್ಲಿ “ಗೂಢಚಾರ”ರಾಗಿದ್ದು, “ರಾಷ್ಟ್ರೀಯ ಭದ್ರತೆ”ಗೆ ಅಪಾಯವಾಗಬಹುದು ಎಂದು ವಾದಿಸಿದವರೂ ಇದ್ದರು. ಮುಸ್ಲಿಮರ ದೇಶಪ್ರೇಮದ ಮೇಲೆ ಆಗಲೇ ಸಂಶಯದ ಲೇಬಲ್ ಅಂಟಿಸಲಾಗಿತ್ತು.

ಹಿಂದೂ ಬಹುಸಂಖ್ಯಾತವಾದವು ತಲೆಯೆತ್ತಿದರೆ, ಅದು ಭಾರತಕ್ಕೆ ಯಾವುದೇ ಅಲ್ಪಸಂಖ್ಯಾತ ಗುಂಪಿಗಿಂತ ಹೆಚ್ಚಿನ ಅಪಾಯ ಒಡ್ಡಬಹುದು ಎಂಬ ಜವಾಹರಲಾಲ್ ನೆಹರೂ ಅವರ ವಾದನ್ನು ಬ್ರಿಜೇಶ್ವರ ಪ್ರಸಾದ್ ಬೆಂಬಲಿಸಿದ್ದರು. ಮತ್ತೆ ಕೆಲವರು ಮರಳಿ ಬರಬಯಸುವ ಮುಸ್ಲಿಮರನ್ನು ಹಿಂದಕ್ಕೆ ಪಡೆಯುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದೂ ವಾದಿಸಿದ್ದರು.

ಆದರೆ, ಬ್ರಿಜೇಶ್ವರ ಪ್ರಸಾದ್ ಅವರು ಮಾರ್ಮಿಕ ಉತ್ತರ ನೀಡಿ. “ನಾವು ಒಂದು ಅಂಗಡಿ ವ್ಯಾಪಾರಿಗಳ ದೇಶವಲ್ಲ…ಆರ್ಥಿಕ ಪರಿಣಾಮ ಏನೇ ಇದ್ದರೂ, ನಾವು ಕೆಲವು ಕೆಲವು ಆದರ್ಶಗಳ ಮೇಲೆ ನಿಲ್ಲಬಯಸುತ್ತೇವೆ. ಕೆಲವು ನೈತಿಕ ತತ್ವಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಮೂಲಕ ಮಾತ್ರ ದೇಶಗಳು ಪ್ರಗತಿ ಸಾಧಿಸುತ್ತವೆ. ಜೀವನದ ಭೌತಿಕ ಅಭಿವೃದ್ಧಿಯು ಪ್ರಗತಿ ಮತ್ತು ನಾಗರಿಕತೆಯ ಮಾನದಂಡವಲ್ಲ. ಅಗ್ಗದ ಆರ್ಥಿಕತೆಗೆ ಭದ್ರವಾದ ರಾಜಕೀಯ ತತ್ವಗಳನ್ನು ಅಡಿಯಾಳಾಗಿಸುವುದು ರಾಜಕೀಯ ಅಥವಾ ಮುತ್ಸದ್ದಿತನವೆಂದು ನಾನು ಭಾವಿಸುವುದಿಲ್ಲ. ಭಾರತೀಯ ಪ್ರಜೆಯಾಗಿರುವ ಒಬ್ಬ ಮುಸ್ಲಿಮನನ್ನು ಈ ಸಂವಿಧಾನದ ಆರಂಭದೊಂದಿಗೆ ಆತನ ಪೌರತ್ವದಿಂದ ವಂಚಿತಗೊಳಿಸಲು ಯಾವುದೇ ಕಾರಣವೂ ನನಗೆ ಕಾಣುವುದಿಲ್ಲ. ಅದೂ ಕೂಡಾ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳಿಗೆ ಭಾರತೀಯ ಪೌರತ್ವ ಪಡೆಯಲು ನಾವು ಆಹ್ವಾನಿಸುತ್ತಿರುವಾಗ” ಎಂದು ಹೇಳಿದ್ದರು.

ಯುದ್ಧವಿನ್ನೂ ಮುಗಿದಿಲ್ಲ

ಬಹುಸಂಖ್ಯಾತವಾದದ ಪರವಿದ್ದವರು 1948ರಲ್ಲಿ ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ಸೋತಿದ್ದರು. ಆದರೆ, ಜಾತ್ಯತೀತವಾದಿಗಳು ಕೆಲವು ರಾಜಿಗಳನ್ನು ಒಪ್ಪುವಂತೆ ಮಾಡಲು ಅವರು ಸಫಲರಾಗಿದ್ದರು. ಹೀಗಿದ್ದರೂ, ಜನಾಂಗೀಯವಾದದ ವಿಚಾರ ಮತ್ತು ಹೆಚ್ಚು ಪ್ರಜಾಪ್ರಭುತ್ವವಾದಿ ವಿಚಾರಗಳ ನಡುವಿನ ಯುದ್ಧವು ಇನ್ನೂ ಮುಗಿದಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಅಂಗಸಂಸ್ಥೆಗಳಾದ ಭಾರತೀಯ ಜನತಾ ಪಕ್ಷ ಮುಂತಾದವು ಈ ಚರ್ಚೆಯನ್ನು ತಮ್ಮ ಪರವಾಗಿ ಮುಗಿಸಲು ಶ್ರಮಿಸುತ್ತಿವೆ.

ಕೊನೆಗೂ ಪೌರತ್ವ ತಿದ್ದುಪಡಿ ಕಾಯಿದೆಯು ಕೇವಲ ಊರು ದೇಶಗಳ ಮುಸ್ಲಿಮೇತರರಿಗೆ ಪೌರತ್ವ ನೀಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ.  ಅದನ್ನು ಈ ಕಾಯಿದೆ ಇಲ್ಲದೆಯೇ ಮಾಡಬಹುದು. ಭಾರತವು ಕೆಲವರಿಗೆ ಸಹಜ ಮನೆಯಾಗಿದ್ದು, ಮತ್ತೆ ಕೆಲವರು ಇನ್ನೂ ಹೊರಗಿನವರಾಗಿದ್ದಾರೆ ಎಂಬ ಚಿಂತನೆಗೆ ಕಾನೂನು ಮಾನ್ಯತೆ ಒದಗಿಸುವ ಉದ್ದೇಶವನ್ನು ಈ ಕಾಯಿದೆ ಹೊಂದಿದೆ.

ಬಿ.ಆರ್. ಅಂಬೇಡ್ಕರ್ ಅವರ ಭಯವು ನಿಜವಾಗಿದೆ. “ಭಾರತದಲ್ಲಿ ಪ್ರಜಾಪ್ರಭುತ್ವವು ಭಾರತದ ಮಣ್ಣಿನ ಮೇಲಿನ ಮೇಲುಡುಪು ಮಾತ್ರವಾಗಿದೆ‌; ಅದು ಮೂಲಭೂತವಾಗಿ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಅವರು ಹೇಳಿದ್ದರು. “ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ” ಎಂದೂ ಅವರು ಹೇಳಿದ್ದರು.

ಇವತ್ತು ಭವಿಷ್ಯಕ್ಕಾಗಿನ ಹೋರಾಟವನ್ನು ಬೀದಿಗಳಲ್ಲಿ- ದೇಶದಾದ್ಯಂತ ಅನೇಕ ಶಾಹೀನ್‌ ಬಾಗ್‌ಗಳಲ್ಲಿ ನಡೆಸಲಾಗುತ್ತಿದೆ. ಸಂಗೀತ, ಕವಿತೆ, ಚಿತ್ರಗಳು, ಫಲಕಗಳು ಮತ್ತು ಘೋಷಣೆಗಳಿಂದ ಸಜ್ಜಿತ ಮಹಿಳೆಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ಪ್ರತಿಯೊಂದು ಸ್ಥಳವೂ ನಾವು ಸಾಂವಿಧಾನಿಕ ನೈತಿಕತೆಯನ್ನು ಕಲಿಯುವ ಶಾಲೆಯಾಗಿದೆ. ಸಂವಿಧಾನದ ಪೀಠಿಕೆಯನ್ನು ಉಚ್ಛರಿಸುವ, ಪುನರುಚ್ಛರಿಸುವ ಮತ್ತು ವಿಶ್ಲೇಷಿಸುವ ಮೂಲಕ ನಾವು ಸಂವಿಧಾನವು ನಮಗೆ ನೀಡಿರುವುದನ್ನು ಗಳಿಸುತ್ತಿದ್ದೇವೆ. ಅಷ್ಟಕ್ಕೂ ರಸ್ತೆಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುವುದರ ಹೊರತಾಗಿ ಈ ನಿಟ್ಟಿನಲ್ಲಿ ನಿಜವಾದ ಕಲಿಕೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...