Homeಮುಖಪುಟದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

"ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ" ಎಂದು ಅಂಬೇಡ್ಕರ್‌ ಹೇಳಿದ್ದರು.

- Advertisement -
- Advertisement -

ಅನುವಾದ: ನಿಖಿಲ್ ಕೋಲ್ಪೆ

ಪೌರತ್ವ ತಿದ್ದುಪಡಿ ಕಾಯಿದೆ(CAA)ಯು ಪಾಕಿಸ್ತಾನ ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಬಯಸಿದೆ. ಇಲ್ಲಿ ಧಾರ್ಮಿಕ ನೆಲೆಯನ್ನು ಅನುಸರಿಸಲಾಗಿದೆ. ಆದರೆ, ಇದೇ ಹೊತ್ತಿಗೆ ಮೂಲತಃ ಭಾರತೀಯರಾಗಿದ್ದು ರಬ್ಬರ್, ಚಹಾತೋಟಗಳಲ್ಲಿ ಕೆಲಸ ಮಾಡಲು ಬ್ರಿಟಿಷರು ಕೊಂಡೊಯ್ದು, ನಂತರ ಅಲ್ಲಿಯೇ ನೆಲೆನಿಂತ ಹಿಂದೂ ತಮಿಳರನ್ನು ಈ ಕಾಯಿದೆಯಿಂದ ಹೊರಗಿಡಲಾಗಿದೆ. ದೇಶ ವಿಭಜನೆಯ ಕಾಲದಲ್ಲಿ ಸಾವಿರಾರು ಮಂದಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಅಂತೆಯೇ ಸಾವಿರಾರು ಮಂದಿ ಭಾರತಕ್ಕೆ ವಲಸೆ ಬಂದಿದ್ದರು. (ಆಗ ಬಾಂಗ್ಲಾದೇಶವು ಪೂರ್ವ ಪಾಕಿಸ್ತಾನವಾಗಿತ್ತು.) ಆಗಲೂ ಸಂವಿಧಾನ ಸಭೆಯು ವಲಸಿಗರ ಕುರಿತು ಈಗ ಎತ್ತಲಾಗುತ್ತಿರುವ ಪ್ರಶ್ನೆಗಳನ್ನೂ ಚರ್ಚಿಸಿತ್ತು. ಆ ಕುರಿತ ಕೆಲವು ಕುತೂಹಲಕಾರಿ ವಿವರಗಳು ಇಲ್ಲಿವೆ.

ಕೇವಲ ಹಿಂದೂಗಳು ಮತ್ತು ಸಿಕ್ಖ್ ವಲಸಿಗರಿಗೆ ಮಾತ್ರ ಭಾರತೀಯ ಪೌರತ್ವ ನೀಡಬೇಕು ಎಂದು ಬಲಪಂಥೀಯರು ಬಯಸಿದ್ದರು. ಆದೆ, ಈ ರೀತಿ ಧರ್ಮಾಧರಿತ ಆಯ್ಕೆಗಳನ್ನು ಮಾಡುವುದು ಅನ್ಯಾಯ ಎಂದು ಇನ್ನೂ ಕೆಲವರು ಬಯಸಿದ್ದರು. ಅಷ್ಟಕ್ಕೂ ವಿಭಜನೆಯ ಬಳಿಕ ನಡೆದ ರಕ್ತಸಿಕ್ತ ಹಿಂಸಾಚಾರದಿಂದ ಭಯಗೊಂಡಷ್ಟೇ ವಲಸೆಹೋದ ಮುಸ್ಲಿಮರಿರಬಹುದು. ಅವರು ಎಲ್ಲಾ ಶಾಂತವಾದ ಮೇಲೆ ಮರಳಿ ಬಂದು ಭಾರತೀಯ ಪೌರರಾಗಲು ಬಯಸಿರಬಹುದು.

ಆದರೆ, ಮರಳಿ ಬರಲು ಬಯಸುವ ಮುಸ್ಲಿಮರನ್ನು ಹೊರಗಿಡಬೇಕು ಎಂದು ಕೆಲವರು ಬಯಸಿದ್ದರೆ, ಇಲ್ಲಿ ಬದುಕಲು ಬಯಸುವ ಎಲ್ಲರಿಗೂ ಭಾರತದ ಗಡಿಗಳು ತೆರೆದಿರಬೇಕೆಂದು ಕಾಂಗ್ರೆಸ್ ನಾಯಕ ಬ್ರಿಜೇಶ್ವರ ಪ್ರಸಾದ್ ಅವರಂತವರು ವಾದಿಸಿದ್ದರು. ಮುಸ್ಲಿಮ್ ನಿರಾಶ್ರಿತರು ವಾಸ್ತವದಲ್ಲಿ “ಗೂಢಚಾರ”ರಾಗಿದ್ದು, “ರಾಷ್ಟ್ರೀಯ ಭದ್ರತೆ”ಗೆ ಅಪಾಯವಾಗಬಹುದು ಎಂದು ವಾದಿಸಿದವರೂ ಇದ್ದರು. ಮುಸ್ಲಿಮರ ದೇಶಪ್ರೇಮದ ಮೇಲೆ ಆಗಲೇ ಸಂಶಯದ ಲೇಬಲ್ ಅಂಟಿಸಲಾಗಿತ್ತು.

ಹಿಂದೂ ಬಹುಸಂಖ್ಯಾತವಾದವು ತಲೆಯೆತ್ತಿದರೆ, ಅದು ಭಾರತಕ್ಕೆ ಯಾವುದೇ ಅಲ್ಪಸಂಖ್ಯಾತ ಗುಂಪಿಗಿಂತ ಹೆಚ್ಚಿನ ಅಪಾಯ ಒಡ್ಡಬಹುದು ಎಂಬ ಜವಾಹರಲಾಲ್ ನೆಹರೂ ಅವರ ವಾದನ್ನು ಬ್ರಿಜೇಶ್ವರ ಪ್ರಸಾದ್ ಬೆಂಬಲಿಸಿದ್ದರು. ಮತ್ತೆ ಕೆಲವರು ಮರಳಿ ಬರಬಯಸುವ ಮುಸ್ಲಿಮರನ್ನು ಹಿಂದಕ್ಕೆ ಪಡೆಯುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದೂ ವಾದಿಸಿದ್ದರು.

ಆದರೆ, ಬ್ರಿಜೇಶ್ವರ ಪ್ರಸಾದ್ ಅವರು ಮಾರ್ಮಿಕ ಉತ್ತರ ನೀಡಿ. “ನಾವು ಒಂದು ಅಂಗಡಿ ವ್ಯಾಪಾರಿಗಳ ದೇಶವಲ್ಲ…ಆರ್ಥಿಕ ಪರಿಣಾಮ ಏನೇ ಇದ್ದರೂ, ನಾವು ಕೆಲವು ಕೆಲವು ಆದರ್ಶಗಳ ಮೇಲೆ ನಿಲ್ಲಬಯಸುತ್ತೇವೆ. ಕೆಲವು ನೈತಿಕ ತತ್ವಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಮೂಲಕ ಮಾತ್ರ ದೇಶಗಳು ಪ್ರಗತಿ ಸಾಧಿಸುತ್ತವೆ. ಜೀವನದ ಭೌತಿಕ ಅಭಿವೃದ್ಧಿಯು ಪ್ರಗತಿ ಮತ್ತು ನಾಗರಿಕತೆಯ ಮಾನದಂಡವಲ್ಲ. ಅಗ್ಗದ ಆರ್ಥಿಕತೆಗೆ ಭದ್ರವಾದ ರಾಜಕೀಯ ತತ್ವಗಳನ್ನು ಅಡಿಯಾಳಾಗಿಸುವುದು ರಾಜಕೀಯ ಅಥವಾ ಮುತ್ಸದ್ದಿತನವೆಂದು ನಾನು ಭಾವಿಸುವುದಿಲ್ಲ. ಭಾರತೀಯ ಪ್ರಜೆಯಾಗಿರುವ ಒಬ್ಬ ಮುಸ್ಲಿಮನನ್ನು ಈ ಸಂವಿಧಾನದ ಆರಂಭದೊಂದಿಗೆ ಆತನ ಪೌರತ್ವದಿಂದ ವಂಚಿತಗೊಳಿಸಲು ಯಾವುದೇ ಕಾರಣವೂ ನನಗೆ ಕಾಣುವುದಿಲ್ಲ. ಅದೂ ಕೂಡಾ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳಿಗೆ ಭಾರತೀಯ ಪೌರತ್ವ ಪಡೆಯಲು ನಾವು ಆಹ್ವಾನಿಸುತ್ತಿರುವಾಗ” ಎಂದು ಹೇಳಿದ್ದರು.

ಯುದ್ಧವಿನ್ನೂ ಮುಗಿದಿಲ್ಲ

ಬಹುಸಂಖ್ಯಾತವಾದದ ಪರವಿದ್ದವರು 1948ರಲ್ಲಿ ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ಸೋತಿದ್ದರು. ಆದರೆ, ಜಾತ್ಯತೀತವಾದಿಗಳು ಕೆಲವು ರಾಜಿಗಳನ್ನು ಒಪ್ಪುವಂತೆ ಮಾಡಲು ಅವರು ಸಫಲರಾಗಿದ್ದರು. ಹೀಗಿದ್ದರೂ, ಜನಾಂಗೀಯವಾದದ ವಿಚಾರ ಮತ್ತು ಹೆಚ್ಚು ಪ್ರಜಾಪ್ರಭುತ್ವವಾದಿ ವಿಚಾರಗಳ ನಡುವಿನ ಯುದ್ಧವು ಇನ್ನೂ ಮುಗಿದಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಅಂಗಸಂಸ್ಥೆಗಳಾದ ಭಾರತೀಯ ಜನತಾ ಪಕ್ಷ ಮುಂತಾದವು ಈ ಚರ್ಚೆಯನ್ನು ತಮ್ಮ ಪರವಾಗಿ ಮುಗಿಸಲು ಶ್ರಮಿಸುತ್ತಿವೆ.

ಕೊನೆಗೂ ಪೌರತ್ವ ತಿದ್ದುಪಡಿ ಕಾಯಿದೆಯು ಕೇವಲ ಊರು ದೇಶಗಳ ಮುಸ್ಲಿಮೇತರರಿಗೆ ಪೌರತ್ವ ನೀಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ.  ಅದನ್ನು ಈ ಕಾಯಿದೆ ಇಲ್ಲದೆಯೇ ಮಾಡಬಹುದು. ಭಾರತವು ಕೆಲವರಿಗೆ ಸಹಜ ಮನೆಯಾಗಿದ್ದು, ಮತ್ತೆ ಕೆಲವರು ಇನ್ನೂ ಹೊರಗಿನವರಾಗಿದ್ದಾರೆ ಎಂಬ ಚಿಂತನೆಗೆ ಕಾನೂನು ಮಾನ್ಯತೆ ಒದಗಿಸುವ ಉದ್ದೇಶವನ್ನು ಈ ಕಾಯಿದೆ ಹೊಂದಿದೆ.

ಬಿ.ಆರ್. ಅಂಬೇಡ್ಕರ್ ಅವರ ಭಯವು ನಿಜವಾಗಿದೆ. “ಭಾರತದಲ್ಲಿ ಪ್ರಜಾಪ್ರಭುತ್ವವು ಭಾರತದ ಮಣ್ಣಿನ ಮೇಲಿನ ಮೇಲುಡುಪು ಮಾತ್ರವಾಗಿದೆ‌; ಅದು ಮೂಲಭೂತವಾಗಿ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಅವರು ಹೇಳಿದ್ದರು. “ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ” ಎಂದೂ ಅವರು ಹೇಳಿದ್ದರು.

ಇವತ್ತು ಭವಿಷ್ಯಕ್ಕಾಗಿನ ಹೋರಾಟವನ್ನು ಬೀದಿಗಳಲ್ಲಿ- ದೇಶದಾದ್ಯಂತ ಅನೇಕ ಶಾಹೀನ್‌ ಬಾಗ್‌ಗಳಲ್ಲಿ ನಡೆಸಲಾಗುತ್ತಿದೆ. ಸಂಗೀತ, ಕವಿತೆ, ಚಿತ್ರಗಳು, ಫಲಕಗಳು ಮತ್ತು ಘೋಷಣೆಗಳಿಂದ ಸಜ್ಜಿತ ಮಹಿಳೆಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ಪ್ರತಿಯೊಂದು ಸ್ಥಳವೂ ನಾವು ಸಾಂವಿಧಾನಿಕ ನೈತಿಕತೆಯನ್ನು ಕಲಿಯುವ ಶಾಲೆಯಾಗಿದೆ. ಸಂವಿಧಾನದ ಪೀಠಿಕೆಯನ್ನು ಉಚ್ಛರಿಸುವ, ಪುನರುಚ್ಛರಿಸುವ ಮತ್ತು ವಿಶ್ಲೇಷಿಸುವ ಮೂಲಕ ನಾವು ಸಂವಿಧಾನವು ನಮಗೆ ನೀಡಿರುವುದನ್ನು ಗಳಿಸುತ್ತಿದ್ದೇವೆ. ಅಷ್ಟಕ್ಕೂ ರಸ್ತೆಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುವುದರ ಹೊರತಾಗಿ ಈ ನಿಟ್ಟಿನಲ್ಲಿ ನಿಜವಾದ ಕಲಿಕೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...