Homeಮುಖಪುಟದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

"ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ" ಎಂದು ಅಂಬೇಡ್ಕರ್‌ ಹೇಳಿದ್ದರು.

- Advertisement -
- Advertisement -

ಅನುವಾದ: ನಿಖಿಲ್ ಕೋಲ್ಪೆ

ಪೌರತ್ವ ತಿದ್ದುಪಡಿ ಕಾಯಿದೆ(CAA)ಯು ಪಾಕಿಸ್ತಾನ ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಬಯಸಿದೆ. ಇಲ್ಲಿ ಧಾರ್ಮಿಕ ನೆಲೆಯನ್ನು ಅನುಸರಿಸಲಾಗಿದೆ. ಆದರೆ, ಇದೇ ಹೊತ್ತಿಗೆ ಮೂಲತಃ ಭಾರತೀಯರಾಗಿದ್ದು ರಬ್ಬರ್, ಚಹಾತೋಟಗಳಲ್ಲಿ ಕೆಲಸ ಮಾಡಲು ಬ್ರಿಟಿಷರು ಕೊಂಡೊಯ್ದು, ನಂತರ ಅಲ್ಲಿಯೇ ನೆಲೆನಿಂತ ಹಿಂದೂ ತಮಿಳರನ್ನು ಈ ಕಾಯಿದೆಯಿಂದ ಹೊರಗಿಡಲಾಗಿದೆ. ದೇಶ ವಿಭಜನೆಯ ಕಾಲದಲ್ಲಿ ಸಾವಿರಾರು ಮಂದಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಅಂತೆಯೇ ಸಾವಿರಾರು ಮಂದಿ ಭಾರತಕ್ಕೆ ವಲಸೆ ಬಂದಿದ್ದರು. (ಆಗ ಬಾಂಗ್ಲಾದೇಶವು ಪೂರ್ವ ಪಾಕಿಸ್ತಾನವಾಗಿತ್ತು.) ಆಗಲೂ ಸಂವಿಧಾನ ಸಭೆಯು ವಲಸಿಗರ ಕುರಿತು ಈಗ ಎತ್ತಲಾಗುತ್ತಿರುವ ಪ್ರಶ್ನೆಗಳನ್ನೂ ಚರ್ಚಿಸಿತ್ತು. ಆ ಕುರಿತ ಕೆಲವು ಕುತೂಹಲಕಾರಿ ವಿವರಗಳು ಇಲ್ಲಿವೆ.

ಕೇವಲ ಹಿಂದೂಗಳು ಮತ್ತು ಸಿಕ್ಖ್ ವಲಸಿಗರಿಗೆ ಮಾತ್ರ ಭಾರತೀಯ ಪೌರತ್ವ ನೀಡಬೇಕು ಎಂದು ಬಲಪಂಥೀಯರು ಬಯಸಿದ್ದರು. ಆದೆ, ಈ ರೀತಿ ಧರ್ಮಾಧರಿತ ಆಯ್ಕೆಗಳನ್ನು ಮಾಡುವುದು ಅನ್ಯಾಯ ಎಂದು ಇನ್ನೂ ಕೆಲವರು ಬಯಸಿದ್ದರು. ಅಷ್ಟಕ್ಕೂ ವಿಭಜನೆಯ ಬಳಿಕ ನಡೆದ ರಕ್ತಸಿಕ್ತ ಹಿಂಸಾಚಾರದಿಂದ ಭಯಗೊಂಡಷ್ಟೇ ವಲಸೆಹೋದ ಮುಸ್ಲಿಮರಿರಬಹುದು. ಅವರು ಎಲ್ಲಾ ಶಾಂತವಾದ ಮೇಲೆ ಮರಳಿ ಬಂದು ಭಾರತೀಯ ಪೌರರಾಗಲು ಬಯಸಿರಬಹುದು.

ಆದರೆ, ಮರಳಿ ಬರಲು ಬಯಸುವ ಮುಸ್ಲಿಮರನ್ನು ಹೊರಗಿಡಬೇಕು ಎಂದು ಕೆಲವರು ಬಯಸಿದ್ದರೆ, ಇಲ್ಲಿ ಬದುಕಲು ಬಯಸುವ ಎಲ್ಲರಿಗೂ ಭಾರತದ ಗಡಿಗಳು ತೆರೆದಿರಬೇಕೆಂದು ಕಾಂಗ್ರೆಸ್ ನಾಯಕ ಬ್ರಿಜೇಶ್ವರ ಪ್ರಸಾದ್ ಅವರಂತವರು ವಾದಿಸಿದ್ದರು. ಮುಸ್ಲಿಮ್ ನಿರಾಶ್ರಿತರು ವಾಸ್ತವದಲ್ಲಿ “ಗೂಢಚಾರ”ರಾಗಿದ್ದು, “ರಾಷ್ಟ್ರೀಯ ಭದ್ರತೆ”ಗೆ ಅಪಾಯವಾಗಬಹುದು ಎಂದು ವಾದಿಸಿದವರೂ ಇದ್ದರು. ಮುಸ್ಲಿಮರ ದೇಶಪ್ರೇಮದ ಮೇಲೆ ಆಗಲೇ ಸಂಶಯದ ಲೇಬಲ್ ಅಂಟಿಸಲಾಗಿತ್ತು.

ಹಿಂದೂ ಬಹುಸಂಖ್ಯಾತವಾದವು ತಲೆಯೆತ್ತಿದರೆ, ಅದು ಭಾರತಕ್ಕೆ ಯಾವುದೇ ಅಲ್ಪಸಂಖ್ಯಾತ ಗುಂಪಿಗಿಂತ ಹೆಚ್ಚಿನ ಅಪಾಯ ಒಡ್ಡಬಹುದು ಎಂಬ ಜವಾಹರಲಾಲ್ ನೆಹರೂ ಅವರ ವಾದನ್ನು ಬ್ರಿಜೇಶ್ವರ ಪ್ರಸಾದ್ ಬೆಂಬಲಿಸಿದ್ದರು. ಮತ್ತೆ ಕೆಲವರು ಮರಳಿ ಬರಬಯಸುವ ಮುಸ್ಲಿಮರನ್ನು ಹಿಂದಕ್ಕೆ ಪಡೆಯುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದೂ ವಾದಿಸಿದ್ದರು.

ಆದರೆ, ಬ್ರಿಜೇಶ್ವರ ಪ್ರಸಾದ್ ಅವರು ಮಾರ್ಮಿಕ ಉತ್ತರ ನೀಡಿ. “ನಾವು ಒಂದು ಅಂಗಡಿ ವ್ಯಾಪಾರಿಗಳ ದೇಶವಲ್ಲ…ಆರ್ಥಿಕ ಪರಿಣಾಮ ಏನೇ ಇದ್ದರೂ, ನಾವು ಕೆಲವು ಕೆಲವು ಆದರ್ಶಗಳ ಮೇಲೆ ನಿಲ್ಲಬಯಸುತ್ತೇವೆ. ಕೆಲವು ನೈತಿಕ ತತ್ವಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಮೂಲಕ ಮಾತ್ರ ದೇಶಗಳು ಪ್ರಗತಿ ಸಾಧಿಸುತ್ತವೆ. ಜೀವನದ ಭೌತಿಕ ಅಭಿವೃದ್ಧಿಯು ಪ್ರಗತಿ ಮತ್ತು ನಾಗರಿಕತೆಯ ಮಾನದಂಡವಲ್ಲ. ಅಗ್ಗದ ಆರ್ಥಿಕತೆಗೆ ಭದ್ರವಾದ ರಾಜಕೀಯ ತತ್ವಗಳನ್ನು ಅಡಿಯಾಳಾಗಿಸುವುದು ರಾಜಕೀಯ ಅಥವಾ ಮುತ್ಸದ್ದಿತನವೆಂದು ನಾನು ಭಾವಿಸುವುದಿಲ್ಲ. ಭಾರತೀಯ ಪ್ರಜೆಯಾಗಿರುವ ಒಬ್ಬ ಮುಸ್ಲಿಮನನ್ನು ಈ ಸಂವಿಧಾನದ ಆರಂಭದೊಂದಿಗೆ ಆತನ ಪೌರತ್ವದಿಂದ ವಂಚಿತಗೊಳಿಸಲು ಯಾವುದೇ ಕಾರಣವೂ ನನಗೆ ಕಾಣುವುದಿಲ್ಲ. ಅದೂ ಕೂಡಾ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳಿಗೆ ಭಾರತೀಯ ಪೌರತ್ವ ಪಡೆಯಲು ನಾವು ಆಹ್ವಾನಿಸುತ್ತಿರುವಾಗ” ಎಂದು ಹೇಳಿದ್ದರು.

ಯುದ್ಧವಿನ್ನೂ ಮುಗಿದಿಲ್ಲ

ಬಹುಸಂಖ್ಯಾತವಾದದ ಪರವಿದ್ದವರು 1948ರಲ್ಲಿ ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ಸೋತಿದ್ದರು. ಆದರೆ, ಜಾತ್ಯತೀತವಾದಿಗಳು ಕೆಲವು ರಾಜಿಗಳನ್ನು ಒಪ್ಪುವಂತೆ ಮಾಡಲು ಅವರು ಸಫಲರಾಗಿದ್ದರು. ಹೀಗಿದ್ದರೂ, ಜನಾಂಗೀಯವಾದದ ವಿಚಾರ ಮತ್ತು ಹೆಚ್ಚು ಪ್ರಜಾಪ್ರಭುತ್ವವಾದಿ ವಿಚಾರಗಳ ನಡುವಿನ ಯುದ್ಧವು ಇನ್ನೂ ಮುಗಿದಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಅಂಗಸಂಸ್ಥೆಗಳಾದ ಭಾರತೀಯ ಜನತಾ ಪಕ್ಷ ಮುಂತಾದವು ಈ ಚರ್ಚೆಯನ್ನು ತಮ್ಮ ಪರವಾಗಿ ಮುಗಿಸಲು ಶ್ರಮಿಸುತ್ತಿವೆ.

ಕೊನೆಗೂ ಪೌರತ್ವ ತಿದ್ದುಪಡಿ ಕಾಯಿದೆಯು ಕೇವಲ ಊರು ದೇಶಗಳ ಮುಸ್ಲಿಮೇತರರಿಗೆ ಪೌರತ್ವ ನೀಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ.  ಅದನ್ನು ಈ ಕಾಯಿದೆ ಇಲ್ಲದೆಯೇ ಮಾಡಬಹುದು. ಭಾರತವು ಕೆಲವರಿಗೆ ಸಹಜ ಮನೆಯಾಗಿದ್ದು, ಮತ್ತೆ ಕೆಲವರು ಇನ್ನೂ ಹೊರಗಿನವರಾಗಿದ್ದಾರೆ ಎಂಬ ಚಿಂತನೆಗೆ ಕಾನೂನು ಮಾನ್ಯತೆ ಒದಗಿಸುವ ಉದ್ದೇಶವನ್ನು ಈ ಕಾಯಿದೆ ಹೊಂದಿದೆ.

ಬಿ.ಆರ್. ಅಂಬೇಡ್ಕರ್ ಅವರ ಭಯವು ನಿಜವಾಗಿದೆ. “ಭಾರತದಲ್ಲಿ ಪ್ರಜಾಪ್ರಭುತ್ವವು ಭಾರತದ ಮಣ್ಣಿನ ಮೇಲಿನ ಮೇಲುಡುಪು ಮಾತ್ರವಾಗಿದೆ‌; ಅದು ಮೂಲಭೂತವಾಗಿ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಅವರು ಹೇಳಿದ್ದರು. “ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ” ಎಂದೂ ಅವರು ಹೇಳಿದ್ದರು.

ಇವತ್ತು ಭವಿಷ್ಯಕ್ಕಾಗಿನ ಹೋರಾಟವನ್ನು ಬೀದಿಗಳಲ್ಲಿ- ದೇಶದಾದ್ಯಂತ ಅನೇಕ ಶಾಹೀನ್‌ ಬಾಗ್‌ಗಳಲ್ಲಿ ನಡೆಸಲಾಗುತ್ತಿದೆ. ಸಂಗೀತ, ಕವಿತೆ, ಚಿತ್ರಗಳು, ಫಲಕಗಳು ಮತ್ತು ಘೋಷಣೆಗಳಿಂದ ಸಜ್ಜಿತ ಮಹಿಳೆಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ಪ್ರತಿಯೊಂದು ಸ್ಥಳವೂ ನಾವು ಸಾಂವಿಧಾನಿಕ ನೈತಿಕತೆಯನ್ನು ಕಲಿಯುವ ಶಾಲೆಯಾಗಿದೆ. ಸಂವಿಧಾನದ ಪೀಠಿಕೆಯನ್ನು ಉಚ್ಛರಿಸುವ, ಪುನರುಚ್ಛರಿಸುವ ಮತ್ತು ವಿಶ್ಲೇಷಿಸುವ ಮೂಲಕ ನಾವು ಸಂವಿಧಾನವು ನಮಗೆ ನೀಡಿರುವುದನ್ನು ಗಳಿಸುತ್ತಿದ್ದೇವೆ. ಅಷ್ಟಕ್ಕೂ ರಸ್ತೆಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುವುದರ ಹೊರತಾಗಿ ಈ ನಿಟ್ಟಿನಲ್ಲಿ ನಿಜವಾದ ಕಲಿಕೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...