Homeಮುಖಪುಟದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

"ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ" ಎಂದು ಅಂಬೇಡ್ಕರ್‌ ಹೇಳಿದ್ದರು.

- Advertisement -
- Advertisement -

ಅನುವಾದ: ನಿಖಿಲ್ ಕೋಲ್ಪೆ

ಪೌರತ್ವ ತಿದ್ದುಪಡಿ ಕಾಯಿದೆ(CAA)ಯು ಪಾಕಿಸ್ತಾನ ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಬಯಸಿದೆ. ಇಲ್ಲಿ ಧಾರ್ಮಿಕ ನೆಲೆಯನ್ನು ಅನುಸರಿಸಲಾಗಿದೆ. ಆದರೆ, ಇದೇ ಹೊತ್ತಿಗೆ ಮೂಲತಃ ಭಾರತೀಯರಾಗಿದ್ದು ರಬ್ಬರ್, ಚಹಾತೋಟಗಳಲ್ಲಿ ಕೆಲಸ ಮಾಡಲು ಬ್ರಿಟಿಷರು ಕೊಂಡೊಯ್ದು, ನಂತರ ಅಲ್ಲಿಯೇ ನೆಲೆನಿಂತ ಹಿಂದೂ ತಮಿಳರನ್ನು ಈ ಕಾಯಿದೆಯಿಂದ ಹೊರಗಿಡಲಾಗಿದೆ. ದೇಶ ವಿಭಜನೆಯ ಕಾಲದಲ್ಲಿ ಸಾವಿರಾರು ಮಂದಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಅಂತೆಯೇ ಸಾವಿರಾರು ಮಂದಿ ಭಾರತಕ್ಕೆ ವಲಸೆ ಬಂದಿದ್ದರು. (ಆಗ ಬಾಂಗ್ಲಾದೇಶವು ಪೂರ್ವ ಪಾಕಿಸ್ತಾನವಾಗಿತ್ತು.) ಆಗಲೂ ಸಂವಿಧಾನ ಸಭೆಯು ವಲಸಿಗರ ಕುರಿತು ಈಗ ಎತ್ತಲಾಗುತ್ತಿರುವ ಪ್ರಶ್ನೆಗಳನ್ನೂ ಚರ್ಚಿಸಿತ್ತು. ಆ ಕುರಿತ ಕೆಲವು ಕುತೂಹಲಕಾರಿ ವಿವರಗಳು ಇಲ್ಲಿವೆ.

ಕೇವಲ ಹಿಂದೂಗಳು ಮತ್ತು ಸಿಕ್ಖ್ ವಲಸಿಗರಿಗೆ ಮಾತ್ರ ಭಾರತೀಯ ಪೌರತ್ವ ನೀಡಬೇಕು ಎಂದು ಬಲಪಂಥೀಯರು ಬಯಸಿದ್ದರು. ಆದೆ, ಈ ರೀತಿ ಧರ್ಮಾಧರಿತ ಆಯ್ಕೆಗಳನ್ನು ಮಾಡುವುದು ಅನ್ಯಾಯ ಎಂದು ಇನ್ನೂ ಕೆಲವರು ಬಯಸಿದ್ದರು. ಅಷ್ಟಕ್ಕೂ ವಿಭಜನೆಯ ಬಳಿಕ ನಡೆದ ರಕ್ತಸಿಕ್ತ ಹಿಂಸಾಚಾರದಿಂದ ಭಯಗೊಂಡಷ್ಟೇ ವಲಸೆಹೋದ ಮುಸ್ಲಿಮರಿರಬಹುದು. ಅವರು ಎಲ್ಲಾ ಶಾಂತವಾದ ಮೇಲೆ ಮರಳಿ ಬಂದು ಭಾರತೀಯ ಪೌರರಾಗಲು ಬಯಸಿರಬಹುದು.

ಆದರೆ, ಮರಳಿ ಬರಲು ಬಯಸುವ ಮುಸ್ಲಿಮರನ್ನು ಹೊರಗಿಡಬೇಕು ಎಂದು ಕೆಲವರು ಬಯಸಿದ್ದರೆ, ಇಲ್ಲಿ ಬದುಕಲು ಬಯಸುವ ಎಲ್ಲರಿಗೂ ಭಾರತದ ಗಡಿಗಳು ತೆರೆದಿರಬೇಕೆಂದು ಕಾಂಗ್ರೆಸ್ ನಾಯಕ ಬ್ರಿಜೇಶ್ವರ ಪ್ರಸಾದ್ ಅವರಂತವರು ವಾದಿಸಿದ್ದರು. ಮುಸ್ಲಿಮ್ ನಿರಾಶ್ರಿತರು ವಾಸ್ತವದಲ್ಲಿ “ಗೂಢಚಾರ”ರಾಗಿದ್ದು, “ರಾಷ್ಟ್ರೀಯ ಭದ್ರತೆ”ಗೆ ಅಪಾಯವಾಗಬಹುದು ಎಂದು ವಾದಿಸಿದವರೂ ಇದ್ದರು. ಮುಸ್ಲಿಮರ ದೇಶಪ್ರೇಮದ ಮೇಲೆ ಆಗಲೇ ಸಂಶಯದ ಲೇಬಲ್ ಅಂಟಿಸಲಾಗಿತ್ತು.

ಹಿಂದೂ ಬಹುಸಂಖ್ಯಾತವಾದವು ತಲೆಯೆತ್ತಿದರೆ, ಅದು ಭಾರತಕ್ಕೆ ಯಾವುದೇ ಅಲ್ಪಸಂಖ್ಯಾತ ಗುಂಪಿಗಿಂತ ಹೆಚ್ಚಿನ ಅಪಾಯ ಒಡ್ಡಬಹುದು ಎಂಬ ಜವಾಹರಲಾಲ್ ನೆಹರೂ ಅವರ ವಾದನ್ನು ಬ್ರಿಜೇಶ್ವರ ಪ್ರಸಾದ್ ಬೆಂಬಲಿಸಿದ್ದರು. ಮತ್ತೆ ಕೆಲವರು ಮರಳಿ ಬರಬಯಸುವ ಮುಸ್ಲಿಮರನ್ನು ಹಿಂದಕ್ಕೆ ಪಡೆಯುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದೂ ವಾದಿಸಿದ್ದರು.

ಆದರೆ, ಬ್ರಿಜೇಶ್ವರ ಪ್ರಸಾದ್ ಅವರು ಮಾರ್ಮಿಕ ಉತ್ತರ ನೀಡಿ. “ನಾವು ಒಂದು ಅಂಗಡಿ ವ್ಯಾಪಾರಿಗಳ ದೇಶವಲ್ಲ…ಆರ್ಥಿಕ ಪರಿಣಾಮ ಏನೇ ಇದ್ದರೂ, ನಾವು ಕೆಲವು ಕೆಲವು ಆದರ್ಶಗಳ ಮೇಲೆ ನಿಲ್ಲಬಯಸುತ್ತೇವೆ. ಕೆಲವು ನೈತಿಕ ತತ್ವಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದರ ಮೂಲಕ ಮಾತ್ರ ದೇಶಗಳು ಪ್ರಗತಿ ಸಾಧಿಸುತ್ತವೆ. ಜೀವನದ ಭೌತಿಕ ಅಭಿವೃದ್ಧಿಯು ಪ್ರಗತಿ ಮತ್ತು ನಾಗರಿಕತೆಯ ಮಾನದಂಡವಲ್ಲ. ಅಗ್ಗದ ಆರ್ಥಿಕತೆಗೆ ಭದ್ರವಾದ ರಾಜಕೀಯ ತತ್ವಗಳನ್ನು ಅಡಿಯಾಳಾಗಿಸುವುದು ರಾಜಕೀಯ ಅಥವಾ ಮುತ್ಸದ್ದಿತನವೆಂದು ನಾನು ಭಾವಿಸುವುದಿಲ್ಲ. ಭಾರತೀಯ ಪ್ರಜೆಯಾಗಿರುವ ಒಬ್ಬ ಮುಸ್ಲಿಮನನ್ನು ಈ ಸಂವಿಧಾನದ ಆರಂಭದೊಂದಿಗೆ ಆತನ ಪೌರತ್ವದಿಂದ ವಂಚಿತಗೊಳಿಸಲು ಯಾವುದೇ ಕಾರಣವೂ ನನಗೆ ಕಾಣುವುದಿಲ್ಲ. ಅದೂ ಕೂಡಾ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳಿಗೆ ಭಾರತೀಯ ಪೌರತ್ವ ಪಡೆಯಲು ನಾವು ಆಹ್ವಾನಿಸುತ್ತಿರುವಾಗ” ಎಂದು ಹೇಳಿದ್ದರು.

ಯುದ್ಧವಿನ್ನೂ ಮುಗಿದಿಲ್ಲ

ಬಹುಸಂಖ್ಯಾತವಾದದ ಪರವಿದ್ದವರು 1948ರಲ್ಲಿ ಸಂವಿಧಾನ ಸಭೆಯಲ್ಲಿ ನಿರ್ಣಾಯಕವಾಗಿ ಸೋತಿದ್ದರು. ಆದರೆ, ಜಾತ್ಯತೀತವಾದಿಗಳು ಕೆಲವು ರಾಜಿಗಳನ್ನು ಒಪ್ಪುವಂತೆ ಮಾಡಲು ಅವರು ಸಫಲರಾಗಿದ್ದರು. ಹೀಗಿದ್ದರೂ, ಜನಾಂಗೀಯವಾದದ ವಿಚಾರ ಮತ್ತು ಹೆಚ್ಚು ಪ್ರಜಾಪ್ರಭುತ್ವವಾದಿ ವಿಚಾರಗಳ ನಡುವಿನ ಯುದ್ಧವು ಇನ್ನೂ ಮುಗಿದಿಲ್ಲ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಅಂಗಸಂಸ್ಥೆಗಳಾದ ಭಾರತೀಯ ಜನತಾ ಪಕ್ಷ ಮುಂತಾದವು ಈ ಚರ್ಚೆಯನ್ನು ತಮ್ಮ ಪರವಾಗಿ ಮುಗಿಸಲು ಶ್ರಮಿಸುತ್ತಿವೆ.

ಕೊನೆಗೂ ಪೌರತ್ವ ತಿದ್ದುಪಡಿ ಕಾಯಿದೆಯು ಕೇವಲ ಊರು ದೇಶಗಳ ಮುಸ್ಲಿಮೇತರರಿಗೆ ಪೌರತ್ವ ನೀಡುವ ಉದ್ದೇಶವನ್ನು ಮಾತ್ರ ಹೊಂದಿಲ್ಲ.  ಅದನ್ನು ಈ ಕಾಯಿದೆ ಇಲ್ಲದೆಯೇ ಮಾಡಬಹುದು. ಭಾರತವು ಕೆಲವರಿಗೆ ಸಹಜ ಮನೆಯಾಗಿದ್ದು, ಮತ್ತೆ ಕೆಲವರು ಇನ್ನೂ ಹೊರಗಿನವರಾಗಿದ್ದಾರೆ ಎಂಬ ಚಿಂತನೆಗೆ ಕಾನೂನು ಮಾನ್ಯತೆ ಒದಗಿಸುವ ಉದ್ದೇಶವನ್ನು ಈ ಕಾಯಿದೆ ಹೊಂದಿದೆ.

ಬಿ.ಆರ್. ಅಂಬೇಡ್ಕರ್ ಅವರ ಭಯವು ನಿಜವಾಗಿದೆ. “ಭಾರತದಲ್ಲಿ ಪ್ರಜಾಪ್ರಭುತ್ವವು ಭಾರತದ ಮಣ್ಣಿನ ಮೇಲಿನ ಮೇಲುಡುಪು ಮಾತ್ರವಾಗಿದೆ‌; ಅದು ಮೂಲಭೂತವಾಗಿ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಅವರು ಹೇಳಿದ್ದರು. “ಸಾಂವಿಧಾನಿಕ ನೈತಿಕತೆಯು ಒಂದು ಸಹಜ ಭಾವನೆಯಲ್ಲ. ಅದನ್ನು ಬೆಳೆಸಬೇಕಾಗುತ್ತದೆ. ನಮ್ಮ ಜನರು ಅದನ್ನು ಇನ್ನಷ್ಟೇ ಕಲಿಯಬೇಕಾಗಿದೆ” ಎಂದೂ ಅವರು ಹೇಳಿದ್ದರು.

ಇವತ್ತು ಭವಿಷ್ಯಕ್ಕಾಗಿನ ಹೋರಾಟವನ್ನು ಬೀದಿಗಳಲ್ಲಿ- ದೇಶದಾದ್ಯಂತ ಅನೇಕ ಶಾಹೀನ್‌ ಬಾಗ್‌ಗಳಲ್ಲಿ ನಡೆಸಲಾಗುತ್ತಿದೆ. ಸಂಗೀತ, ಕವಿತೆ, ಚಿತ್ರಗಳು, ಫಲಕಗಳು ಮತ್ತು ಘೋಷಣೆಗಳಿಂದ ಸಜ್ಜಿತ ಮಹಿಳೆಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ಪ್ರತಿಯೊಂದು ಸ್ಥಳವೂ ನಾವು ಸಾಂವಿಧಾನಿಕ ನೈತಿಕತೆಯನ್ನು ಕಲಿಯುವ ಶಾಲೆಯಾಗಿದೆ. ಸಂವಿಧಾನದ ಪೀಠಿಕೆಯನ್ನು ಉಚ್ಛರಿಸುವ, ಪುನರುಚ್ಛರಿಸುವ ಮತ್ತು ವಿಶ್ಲೇಷಿಸುವ ಮೂಲಕ ನಾವು ಸಂವಿಧಾನವು ನಮಗೆ ನೀಡಿರುವುದನ್ನು ಗಳಿಸುತ್ತಿದ್ದೇವೆ. ಅಷ್ಟಕ್ಕೂ ರಸ್ತೆಗಳಲ್ಲಿ ನಮ್ಮ ಹಕ್ಕುಗಳಿಗಾಗಿ ಹೋರಾಡುವುದರ ಹೊರತಾಗಿ ಈ ನಿಟ್ಟಿನಲ್ಲಿ ನಿಜವಾದ ಕಲಿಕೆ ಸಾಧ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...