Homeಮುಖಪುಟಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

ಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ತಮಗೆ ಕೆಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದಾರೆ.

ಮಹುವಾ ಮೊಯಿತ್ರಾ ಅವರಲ್ಲದೆ ಸಮಿತಿಯ ವಿಪಕ್ಷ ಸದಸ್ಯರೂ ಹೊರನಡೆದಿದ್ದಾರೆ. ಕೊಳಕು ಪ್ರಶ್ನೆಗಳನ್ನು ಕೇಳಿದ್ದರಿಂದ ತಾವು ಸಹಕರಿಸಿಲ್ಲ, ಇನ್ನಷ್ಟು ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರನಡೆದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಮೋಯಿತ್ರಾ ಅವರು ವಿಚಾರಣೆ ವೇಳೆ ಸಹಕರಿಸಲಿಲ್ಲ ಮತ್ತು ಪ್ರಶ್ನೆಗಳನ್ನು ಎದುರಿಸುವುದನ್ನು ತಪ್ಪಿಸಲು ಹೊರನಡೆದರು ಎಂದು ನೈತಿಕ ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಹೇಳಿದ್ದಾರೆ.  ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಸಭೆಯಿಂದ ಇದ್ದಕ್ಕಿದ್ದಂತೆ ಹೊರನಡೆದರು. ಸಮಿತಿಯ ಕಾರ್ಯನಿರ್ವಹಣೆ ಮತ್ತು ನನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಮಹುವಾ ಮೊಯಿತ್ರಾ ಬಳಸಿದ್ದಾರೆ ಎಂದು ಸೋಂಕರ್ ಪ್ರತ್ಯಾರೋಪವನ್ನು ಮಾಡಿದ್ದಾರೆ.

ದರ್ಶನ್ ಹಿರಾನಂದನಿ ಅವರ ಅಫಿಡವಿಟ್ ಬಗ್ಗೆ ಕೇಳಿದಾಗ ಮೋಯಿತ್ರಾ ಕೋಪದಿಂದ ವರ್ತಿಸಿದರು ಎಂದು   ಸಮತಿಯ ಇನ್ನೋರ್ವ ಸದಸ್ಯ ಅಪರಾಜಿತಾ ಸಾರಂಗಿ ಹೇಳಿದ್ದಾರೆ.

ಸಮಿತಿಯು ಮೊಯಿತ್ರಾ ಅವರಿಗೆ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ್ದಾರೆ ಮತ್ತು ಸಭೆ ನಡೆಯುತ್ತಿರುವಾಗಲೇ ಸಂಸದರೊಬ್ಬರು ಮಾಧ್ಯಮಗಳಿಗೆ ಸಭೆಯ ವಿವರಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಯಾವ ರೀತಿಯ ಸಭೆ? ಅವರು ಹೊಲಸು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ವಿರೋಧ ಪಕ್ಷದ ಸಂಸದರ ಜೊತೆ ಕೊಠಡಿಯಿಂದ ಹೊರಬರುವಾಗ ಅವರು ಹೇಳಿದ್ದಾರೆ. ಅಸಂಬದ್ಧವಾಗಿ ಅವರು ಮಾತನಾಡುತ್ತಿದ್ದಾರೆ, ನಿಮ್ಮ ಕಣ್ಣಲ್ಲಿ ನೀರು ಇದೆ ಎಂದರು ನನ್ನ ಕಣ್ಣಲ್ಲಿ ನೀರು ಇದೆಯೇ, ಕಾಣಿಸುತ್ತಿದೆಯೇ? ಎಂದು ಮಹುವಾ ಪ್ರಶ್ನಿಸಿದರು.

ಈ ಬಗ್ಗೆ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯಿಸಿದ್ದು, ಮಹುವಾ ಮೊಯಿತ್ರಾ ಅವರಲ್ಲಿ ನೀವು ಎಲ್ಲಿಗೆಲ್ಲ ಪ್ರಯಾಣಿಸುತ್ತೀರಾ? ನೀವು ಯಾರನ್ನೆಲ್ಲ ಭೇಟಿಯಾಗುತ್ತೀರಾ? ನಿಮ್ಮ ಫೋನ್ ದಾಖಲೆಗಳನ್ನು ನಮಗೆ ನೀಡಬಹುದೇ? ನೀವು ಏನೆಲ್ಲ ಮಾತನಾಡುತ್ತೀರಾ? ಎಷ್ಟು ಹೊತ್ತು ಮಾತನಾಡ್ತೀರಾ? ಹೋಟೆಲಿನಲ್ಲಿ ಯಾರೊಂದಿಗೆ ವಾಸ ಮಾಡಿದ್ರಿ? ಯಾರು ಹೋಟೆಲ್ ಬಿಲ್ ಕೊಟ್ಟರು? ಎಂಬಿತ್ಯಾದಿ ಮಹಿಳೆಗೆ ಕೇಳಬಾರದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದು ತೀರಾ ವೈಯಕ್ತಿಕ ಮತ್ತು ಕೊಳಕು ಪ್ರಶ್ನೆಗಳು. ಮಹಿಳೆಗೆ ಈ ರೀತಿ ಕೇಳಲು ಈ ಸಮಿತಿಗೆ ಹಕ್ಕಿದೆಯಾ? ಎಂದು ಪ್ರಶ್ನಿಸಿದರು. ಹಾಗಾಗಿಯೇ, ವಿಪಕ್ಷಗಳ ಎಲ್ಲ ಸಂಸದರು ಸಭೆಯಿಂದ ಹೊರ ನಡೆದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...