Homeಮುಖಪುಟಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

ಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ತಮಗೆ ಕೆಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದಾರೆ.

ಮಹುವಾ ಮೊಯಿತ್ರಾ ಅವರಲ್ಲದೆ ಸಮಿತಿಯ ವಿಪಕ್ಷ ಸದಸ್ಯರೂ ಹೊರನಡೆದಿದ್ದಾರೆ. ಕೊಳಕು ಪ್ರಶ್ನೆಗಳನ್ನು ಕೇಳಿದ್ದರಿಂದ ತಾವು ಸಹಕರಿಸಿಲ್ಲ, ಇನ್ನಷ್ಟು ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರನಡೆದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಮೋಯಿತ್ರಾ ಅವರು ವಿಚಾರಣೆ ವೇಳೆ ಸಹಕರಿಸಲಿಲ್ಲ ಮತ್ತು ಪ್ರಶ್ನೆಗಳನ್ನು ಎದುರಿಸುವುದನ್ನು ತಪ್ಪಿಸಲು ಹೊರನಡೆದರು ಎಂದು ನೈತಿಕ ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಹೇಳಿದ್ದಾರೆ.  ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಸಭೆಯಿಂದ ಇದ್ದಕ್ಕಿದ್ದಂತೆ ಹೊರನಡೆದರು. ಸಮಿತಿಯ ಕಾರ್ಯನಿರ್ವಹಣೆ ಮತ್ತು ನನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಮಹುವಾ ಮೊಯಿತ್ರಾ ಬಳಸಿದ್ದಾರೆ ಎಂದು ಸೋಂಕರ್ ಪ್ರತ್ಯಾರೋಪವನ್ನು ಮಾಡಿದ್ದಾರೆ.

ದರ್ಶನ್ ಹಿರಾನಂದನಿ ಅವರ ಅಫಿಡವಿಟ್ ಬಗ್ಗೆ ಕೇಳಿದಾಗ ಮೋಯಿತ್ರಾ ಕೋಪದಿಂದ ವರ್ತಿಸಿದರು ಎಂದು   ಸಮತಿಯ ಇನ್ನೋರ್ವ ಸದಸ್ಯ ಅಪರಾಜಿತಾ ಸಾರಂಗಿ ಹೇಳಿದ್ದಾರೆ.

ಸಮಿತಿಯು ಮೊಯಿತ್ರಾ ಅವರಿಗೆ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ್ದಾರೆ ಮತ್ತು ಸಭೆ ನಡೆಯುತ್ತಿರುವಾಗಲೇ ಸಂಸದರೊಬ್ಬರು ಮಾಧ್ಯಮಗಳಿಗೆ ಸಭೆಯ ವಿವರಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಯಾವ ರೀತಿಯ ಸಭೆ? ಅವರು ಹೊಲಸು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ವಿರೋಧ ಪಕ್ಷದ ಸಂಸದರ ಜೊತೆ ಕೊಠಡಿಯಿಂದ ಹೊರಬರುವಾಗ ಅವರು ಹೇಳಿದ್ದಾರೆ. ಅಸಂಬದ್ಧವಾಗಿ ಅವರು ಮಾತನಾಡುತ್ತಿದ್ದಾರೆ, ನಿಮ್ಮ ಕಣ್ಣಲ್ಲಿ ನೀರು ಇದೆ ಎಂದರು ನನ್ನ ಕಣ್ಣಲ್ಲಿ ನೀರು ಇದೆಯೇ, ಕಾಣಿಸುತ್ತಿದೆಯೇ? ಎಂದು ಮಹುವಾ ಪ್ರಶ್ನಿಸಿದರು.

ಈ ಬಗ್ಗೆ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯಿಸಿದ್ದು, ಮಹುವಾ ಮೊಯಿತ್ರಾ ಅವರಲ್ಲಿ ನೀವು ಎಲ್ಲಿಗೆಲ್ಲ ಪ್ರಯಾಣಿಸುತ್ತೀರಾ? ನೀವು ಯಾರನ್ನೆಲ್ಲ ಭೇಟಿಯಾಗುತ್ತೀರಾ? ನಿಮ್ಮ ಫೋನ್ ದಾಖಲೆಗಳನ್ನು ನಮಗೆ ನೀಡಬಹುದೇ? ನೀವು ಏನೆಲ್ಲ ಮಾತನಾಡುತ್ತೀರಾ? ಎಷ್ಟು ಹೊತ್ತು ಮಾತನಾಡ್ತೀರಾ? ಹೋಟೆಲಿನಲ್ಲಿ ಯಾರೊಂದಿಗೆ ವಾಸ ಮಾಡಿದ್ರಿ? ಯಾರು ಹೋಟೆಲ್ ಬಿಲ್ ಕೊಟ್ಟರು? ಎಂಬಿತ್ಯಾದಿ ಮಹಿಳೆಗೆ ಕೇಳಬಾರದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದು ತೀರಾ ವೈಯಕ್ತಿಕ ಮತ್ತು ಕೊಳಕು ಪ್ರಶ್ನೆಗಳು. ಮಹಿಳೆಗೆ ಈ ರೀತಿ ಕೇಳಲು ಈ ಸಮಿತಿಗೆ ಹಕ್ಕಿದೆಯಾ? ಎಂದು ಪ್ರಶ್ನಿಸಿದರು. ಹಾಗಾಗಿಯೇ, ವಿಪಕ್ಷಗಳ ಎಲ್ಲ ಸಂಸದರು ಸಭೆಯಿಂದ ಹೊರ ನಡೆದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...