Homeಮುಖಪುಟಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

ಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ತಮಗೆ ಕೆಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದಾರೆ.

ಮಹುವಾ ಮೊಯಿತ್ರಾ ಅವರಲ್ಲದೆ ಸಮಿತಿಯ ವಿಪಕ್ಷ ಸದಸ್ಯರೂ ಹೊರನಡೆದಿದ್ದಾರೆ. ಕೊಳಕು ಪ್ರಶ್ನೆಗಳನ್ನು ಕೇಳಿದ್ದರಿಂದ ತಾವು ಸಹಕರಿಸಿಲ್ಲ, ಇನ್ನಷ್ಟು ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರನಡೆದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಮೋಯಿತ್ರಾ ಅವರು ವಿಚಾರಣೆ ವೇಳೆ ಸಹಕರಿಸಲಿಲ್ಲ ಮತ್ತು ಪ್ರಶ್ನೆಗಳನ್ನು ಎದುರಿಸುವುದನ್ನು ತಪ್ಪಿಸಲು ಹೊರನಡೆದರು ಎಂದು ನೈತಿಕ ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಹೇಳಿದ್ದಾರೆ.  ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಸಭೆಯಿಂದ ಇದ್ದಕ್ಕಿದ್ದಂತೆ ಹೊರನಡೆದರು. ಸಮಿತಿಯ ಕಾರ್ಯನಿರ್ವಹಣೆ ಮತ್ತು ನನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಮಹುವಾ ಮೊಯಿತ್ರಾ ಬಳಸಿದ್ದಾರೆ ಎಂದು ಸೋಂಕರ್ ಪ್ರತ್ಯಾರೋಪವನ್ನು ಮಾಡಿದ್ದಾರೆ.

ದರ್ಶನ್ ಹಿರಾನಂದನಿ ಅವರ ಅಫಿಡವಿಟ್ ಬಗ್ಗೆ ಕೇಳಿದಾಗ ಮೋಯಿತ್ರಾ ಕೋಪದಿಂದ ವರ್ತಿಸಿದರು ಎಂದು   ಸಮತಿಯ ಇನ್ನೋರ್ವ ಸದಸ್ಯ ಅಪರಾಜಿತಾ ಸಾರಂಗಿ ಹೇಳಿದ್ದಾರೆ.

ಸಮಿತಿಯು ಮೊಯಿತ್ರಾ ಅವರಿಗೆ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ್ದಾರೆ ಮತ್ತು ಸಭೆ ನಡೆಯುತ್ತಿರುವಾಗಲೇ ಸಂಸದರೊಬ್ಬರು ಮಾಧ್ಯಮಗಳಿಗೆ ಸಭೆಯ ವಿವರಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಯಾವ ರೀತಿಯ ಸಭೆ? ಅವರು ಹೊಲಸು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ವಿರೋಧ ಪಕ್ಷದ ಸಂಸದರ ಜೊತೆ ಕೊಠಡಿಯಿಂದ ಹೊರಬರುವಾಗ ಅವರು ಹೇಳಿದ್ದಾರೆ. ಅಸಂಬದ್ಧವಾಗಿ ಅವರು ಮಾತನಾಡುತ್ತಿದ್ದಾರೆ, ನಿಮ್ಮ ಕಣ್ಣಲ್ಲಿ ನೀರು ಇದೆ ಎಂದರು ನನ್ನ ಕಣ್ಣಲ್ಲಿ ನೀರು ಇದೆಯೇ, ಕಾಣಿಸುತ್ತಿದೆಯೇ? ಎಂದು ಮಹುವಾ ಪ್ರಶ್ನಿಸಿದರು.

ಈ ಬಗ್ಗೆ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯಿಸಿದ್ದು, ಮಹುವಾ ಮೊಯಿತ್ರಾ ಅವರಲ್ಲಿ ನೀವು ಎಲ್ಲಿಗೆಲ್ಲ ಪ್ರಯಾಣಿಸುತ್ತೀರಾ? ನೀವು ಯಾರನ್ನೆಲ್ಲ ಭೇಟಿಯಾಗುತ್ತೀರಾ? ನಿಮ್ಮ ಫೋನ್ ದಾಖಲೆಗಳನ್ನು ನಮಗೆ ನೀಡಬಹುದೇ? ನೀವು ಏನೆಲ್ಲ ಮಾತನಾಡುತ್ತೀರಾ? ಎಷ್ಟು ಹೊತ್ತು ಮಾತನಾಡ್ತೀರಾ? ಹೋಟೆಲಿನಲ್ಲಿ ಯಾರೊಂದಿಗೆ ವಾಸ ಮಾಡಿದ್ರಿ? ಯಾರು ಹೋಟೆಲ್ ಬಿಲ್ ಕೊಟ್ಟರು? ಎಂಬಿತ್ಯಾದಿ ಮಹಿಳೆಗೆ ಕೇಳಬಾರದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದು ತೀರಾ ವೈಯಕ್ತಿಕ ಮತ್ತು ಕೊಳಕು ಪ್ರಶ್ನೆಗಳು. ಮಹಿಳೆಗೆ ಈ ರೀತಿ ಕೇಳಲು ಈ ಸಮಿತಿಗೆ ಹಕ್ಕಿದೆಯಾ? ಎಂದು ಪ್ರಶ್ನಿಸಿದರು. ಹಾಗಾಗಿಯೇ, ವಿಪಕ್ಷಗಳ ಎಲ್ಲ ಸಂಸದರು ಸಭೆಯಿಂದ ಹೊರ ನಡೆದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...