Homeಮುಖಪುಟಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

ಕೊಳಕು ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಲೋಕಸಭೆಯ ಸಮಿತಿ ಸಭೆಯಿಂದ ಹೊರಬಂದ ಮಹುವಾ ಮೊಯಿತ್ರಾ

- Advertisement -
- Advertisement -

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ತಮಗೆ ಕೆಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದಾರೆ.

ಮಹುವಾ ಮೊಯಿತ್ರಾ ಅವರಲ್ಲದೆ ಸಮಿತಿಯ ವಿಪಕ್ಷ ಸದಸ್ಯರೂ ಹೊರನಡೆದಿದ್ದಾರೆ. ಕೊಳಕು ಪ್ರಶ್ನೆಗಳನ್ನು ಕೇಳಿದ್ದರಿಂದ ತಾವು ಸಹಕರಿಸಿಲ್ಲ, ಇನ್ನಷ್ಟು ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರನಡೆದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಮೋಯಿತ್ರಾ ಅವರು ವಿಚಾರಣೆ ವೇಳೆ ಸಹಕರಿಸಲಿಲ್ಲ ಮತ್ತು ಪ್ರಶ್ನೆಗಳನ್ನು ಎದುರಿಸುವುದನ್ನು ತಪ್ಪಿಸಲು ಹೊರನಡೆದರು ಎಂದು ನೈತಿಕ ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಹೇಳಿದ್ದಾರೆ.  ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಸಭೆಯಿಂದ ಇದ್ದಕ್ಕಿದ್ದಂತೆ ಹೊರನಡೆದರು. ಸಮಿತಿಯ ಕಾರ್ಯನಿರ್ವಹಣೆ ಮತ್ತು ನನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಮಹುವಾ ಮೊಯಿತ್ರಾ ಬಳಸಿದ್ದಾರೆ ಎಂದು ಸೋಂಕರ್ ಪ್ರತ್ಯಾರೋಪವನ್ನು ಮಾಡಿದ್ದಾರೆ.

ದರ್ಶನ್ ಹಿರಾನಂದನಿ ಅವರ ಅಫಿಡವಿಟ್ ಬಗ್ಗೆ ಕೇಳಿದಾಗ ಮೋಯಿತ್ರಾ ಕೋಪದಿಂದ ವರ್ತಿಸಿದರು ಎಂದು   ಸಮತಿಯ ಇನ್ನೋರ್ವ ಸದಸ್ಯ ಅಪರಾಜಿತಾ ಸಾರಂಗಿ ಹೇಳಿದ್ದಾರೆ.

ಸಮಿತಿಯು ಮೊಯಿತ್ರಾ ಅವರಿಗೆ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ್ದಾರೆ ಮತ್ತು ಸಭೆ ನಡೆಯುತ್ತಿರುವಾಗಲೇ ಸಂಸದರೊಬ್ಬರು ಮಾಧ್ಯಮಗಳಿಗೆ ಸಭೆಯ ವಿವರಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಯಾವ ರೀತಿಯ ಸಭೆ? ಅವರು ಹೊಲಸು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ವಿರೋಧ ಪಕ್ಷದ ಸಂಸದರ ಜೊತೆ ಕೊಠಡಿಯಿಂದ ಹೊರಬರುವಾಗ ಅವರು ಹೇಳಿದ್ದಾರೆ. ಅಸಂಬದ್ಧವಾಗಿ ಅವರು ಮಾತನಾಡುತ್ತಿದ್ದಾರೆ, ನಿಮ್ಮ ಕಣ್ಣಲ್ಲಿ ನೀರು ಇದೆ ಎಂದರು ನನ್ನ ಕಣ್ಣಲ್ಲಿ ನೀರು ಇದೆಯೇ, ಕಾಣಿಸುತ್ತಿದೆಯೇ? ಎಂದು ಮಹುವಾ ಪ್ರಶ್ನಿಸಿದರು.

ಈ ಬಗ್ಗೆ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯಿಸಿದ್ದು, ಮಹುವಾ ಮೊಯಿತ್ರಾ ಅವರಲ್ಲಿ ನೀವು ಎಲ್ಲಿಗೆಲ್ಲ ಪ್ರಯಾಣಿಸುತ್ತೀರಾ? ನೀವು ಯಾರನ್ನೆಲ್ಲ ಭೇಟಿಯಾಗುತ್ತೀರಾ? ನಿಮ್ಮ ಫೋನ್ ದಾಖಲೆಗಳನ್ನು ನಮಗೆ ನೀಡಬಹುದೇ? ನೀವು ಏನೆಲ್ಲ ಮಾತನಾಡುತ್ತೀರಾ? ಎಷ್ಟು ಹೊತ್ತು ಮಾತನಾಡ್ತೀರಾ? ಹೋಟೆಲಿನಲ್ಲಿ ಯಾರೊಂದಿಗೆ ವಾಸ ಮಾಡಿದ್ರಿ? ಯಾರು ಹೋಟೆಲ್ ಬಿಲ್ ಕೊಟ್ಟರು? ಎಂಬಿತ್ಯಾದಿ ಮಹಿಳೆಗೆ ಕೇಳಬಾರದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದು ತೀರಾ ವೈಯಕ್ತಿಕ ಮತ್ತು ಕೊಳಕು ಪ್ರಶ್ನೆಗಳು. ಮಹಿಳೆಗೆ ಈ ರೀತಿ ಕೇಳಲು ಈ ಸಮಿತಿಗೆ ಹಕ್ಕಿದೆಯಾ? ಎಂದು ಪ್ರಶ್ನಿಸಿದರು. ಹಾಗಾಗಿಯೇ, ವಿಪಕ್ಷಗಳ ಎಲ್ಲ ಸಂಸದರು ಸಭೆಯಿಂದ ಹೊರ ನಡೆದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...