Homeಮುಖಪುಟಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

- Advertisement -
- Advertisement -

ದೇಶಾದ್ಯಂತ ಭಾರಿ ಚರ್ಚೆಯಾಗುತ್ತಿರುವ ಒಡಿಶಾ ಭೀಕರ ಸರಣಿ ರೈಲು ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಭಾನುವಾರ ಸಂಜೆ ಘಟನಾ ಸ್ಥಳದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೈಷ್ಣವ್ ಅವರು, ”ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡಲು ರೈಲ್ವೆ ನಿರ್ಧರಿಸಿದೆ” ಎಂದು ಹೇಳಿದರು.

”ಪ್ರಾಥಮಿಕ ತನಿಖೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಚಾಲಕನ ತಪ್ಪು ಕಂಡು ಬಂದಿಲ್ಲ ಹಾಗೂ ರೈಲ್ವೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲೂ ದೋಷಗಳು ಇರಲಿಲ್ಲ ಎಂದು ತಿಳಿದು ಬಂದಿದೆ. ಇದರ ಹಿಂದೆ ವಿಧ್ವಂಸಕ ಕೃತ್ಯದ ಸಂಚಿರಬಹುದೇ? ಎಂಬ ದೃಷ್ಟಿಕೋನದಲ್ಲಿ ಗಂಭೀರವಾಗಿ ಚಿಂತಿಸಲಾಗುತ್ತಿದೆ” ಎಂದು ಈ ಮೊದಲು ವೈಷ್ಣವ್ ಹೇಳಿದ್ದರು. ಈ ನಿಟ್ಟಿನಲ್ಲಿ ರೈಲ್ವೆ ಮಂಡಳಿ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದೆ ಎನ್ನಲಾಗಿದೆ.

”ಘಟನಾ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಬಹುತೇಕ ಮುಗಿದಿದ್ದು ಹಳಿಗಳ ಪುನರ್‌ ಜೋಡಣೆ ಹಾಗೂ ಇತರೆ ತಾಂತ್ರಿಕ ಕೆಲಸಗಳನ್ನು ಮುಗಿಸಲು ಭಾರಿ ಪ್ರಮಾಣದಲ್ಲಿ ಕೆಲಸ ನಡೆದಿದೆ” ಎಂದು ರೈಲು ಸಚಿವರು ತಿಳಿಸಿದ್ದಾರೆ.

ಘಟನೆ ಕುರಿತು:

ಜೂನ್ 2ರ ರಾತ್ರಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹಂಗ ಬಜಾರ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್ ವಾಗ್ದಾಳಿ

ಕೋಲ್ಕತಾದಿಂದ ಚೆನ್ನೈಗೆ ಬರುತ್ತಿದ್ದ ಕೋರಮಂಡಲ್ ಎಕ್ಸ್​ಪ್ರೆಸ್ ರೈಲು ತಪ್ಪಾದ ಸಿಗ್ನಲ್ ಕಾರಣದಿಂದ ಟ್ರ್ಯಾಕ್ ಬದಲಿಸಿತ್ತು. ಅಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 12 ಬೋಗಿಗಳು ಹಳಿ ತಪ್ಪಿ ಪಕ್ಕದ ಟ್ರ್ಯಾಕ್​ಗೆ ಉರುಳಿವೆ. ಅತ್ತ, ಯಶವಂತಪುರದಿಂದ ಹೌರಾಗೆ ಹೋಗುತ್ತಿದ್ದ ಇನ್ನೊಂದು ರೈಲು ಈ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಈ ಎರಡು ಪ್ಯಾಸೆಂಜರ್ ರೈಲುಗಳಿಗೆ ಬಹಳ ಹಾನಿಯಾಗಿದೆ.

ಈ ದುರಂತ ಸಂಭವಿಸಿದ ಬಳಿಕ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ನೂರಾರು ಜೀವಗಳನ್ನು ಉಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಹುತೇಕ ಎಲ್ಲವನ್ನೂ ತೆರವುಗೊಳಿಸಿ ಆದಷ್ಟೂ ಬೇಗ ಸಂಚಾರಕ್ಕೆ ಟ್ರ್ಯಾಕ್​ಗಳನ್ನು ಅನುವು ಮಾಡಿಕೊಡುವತ್ತ ಕಾರ್ಯಗಳು ನಡೆಯುತ್ತಿವೆ.

ಘಟನೆಗೆ ಕಾರಣ:

ತಪ್ಪಾದ ಸಿಗ್ನಲ್ ಕಾರಣದಿಂದ ರೈಲು ಅಪಘಾತವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಂನ ಪ್ರಕ್ರಿಯೆಯಲ್ಲಿ ಆದ ಬದಲಾವಣೆ ಕಾರಣ ಎಂಬುದು ಗೊತ್ತಾಗಿದೆ ಎಂದು ರೈಲ್ವೆ ಸಚಿವ ವೈಷ್ಣವ್ ಹೇಳಿದ್ದರು. ಇದೀಗ ಸಿಬಿಐ ತನಿಖೆಯಾದಲ್ಲಿ ಇನ್ನಷ್ಟು ವಿಚಾರಗಳು ಮತ್ತು ಲೋಪದೋಷಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...