Homeಮುಖಪುಟಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

- Advertisement -
- Advertisement -

ದೇಶಾದ್ಯಂತ ಭಾರಿ ಚರ್ಚೆಯಾಗುತ್ತಿರುವ ಒಡಿಶಾ ಭೀಕರ ಸರಣಿ ರೈಲು ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಭಾನುವಾರ ಸಂಜೆ ಘಟನಾ ಸ್ಥಳದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೈಷ್ಣವ್ ಅವರು, ”ಅಪಘಾತ ಘಟನೆಯ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡಲು ರೈಲ್ವೆ ನಿರ್ಧರಿಸಿದೆ” ಎಂದು ಹೇಳಿದರು.

”ಪ್ರಾಥಮಿಕ ತನಿಖೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಚಾಲಕನ ತಪ್ಪು ಕಂಡು ಬಂದಿಲ್ಲ ಹಾಗೂ ರೈಲ್ವೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲೂ ದೋಷಗಳು ಇರಲಿಲ್ಲ ಎಂದು ತಿಳಿದು ಬಂದಿದೆ. ಇದರ ಹಿಂದೆ ವಿಧ್ವಂಸಕ ಕೃತ್ಯದ ಸಂಚಿರಬಹುದೇ? ಎಂಬ ದೃಷ್ಟಿಕೋನದಲ್ಲಿ ಗಂಭೀರವಾಗಿ ಚಿಂತಿಸಲಾಗುತ್ತಿದೆ” ಎಂದು ಈ ಮೊದಲು ವೈಷ್ಣವ್ ಹೇಳಿದ್ದರು. ಈ ನಿಟ್ಟಿನಲ್ಲಿ ರೈಲ್ವೆ ಮಂಡಳಿ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದೆ ಎನ್ನಲಾಗಿದೆ.

”ಘಟನಾ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಬಹುತೇಕ ಮುಗಿದಿದ್ದು ಹಳಿಗಳ ಪುನರ್‌ ಜೋಡಣೆ ಹಾಗೂ ಇತರೆ ತಾಂತ್ರಿಕ ಕೆಲಸಗಳನ್ನು ಮುಗಿಸಲು ಭಾರಿ ಪ್ರಮಾಣದಲ್ಲಿ ಕೆಲಸ ನಡೆದಿದೆ” ಎಂದು ರೈಲು ಸಚಿವರು ತಿಳಿಸಿದ್ದಾರೆ.

ಘಟನೆ ಕುರಿತು:

ಜೂನ್ 2ರ ರಾತ್ರಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹಂಗ ಬಜಾರ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್ ವಾಗ್ದಾಳಿ

ಕೋಲ್ಕತಾದಿಂದ ಚೆನ್ನೈಗೆ ಬರುತ್ತಿದ್ದ ಕೋರಮಂಡಲ್ ಎಕ್ಸ್​ಪ್ರೆಸ್ ರೈಲು ತಪ್ಪಾದ ಸಿಗ್ನಲ್ ಕಾರಣದಿಂದ ಟ್ರ್ಯಾಕ್ ಬದಲಿಸಿತ್ತು. ಅಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 12 ಬೋಗಿಗಳು ಹಳಿ ತಪ್ಪಿ ಪಕ್ಕದ ಟ್ರ್ಯಾಕ್​ಗೆ ಉರುಳಿವೆ. ಅತ್ತ, ಯಶವಂತಪುರದಿಂದ ಹೌರಾಗೆ ಹೋಗುತ್ತಿದ್ದ ಇನ್ನೊಂದು ರೈಲು ಈ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಈ ಎರಡು ಪ್ಯಾಸೆಂಜರ್ ರೈಲುಗಳಿಗೆ ಬಹಳ ಹಾನಿಯಾಗಿದೆ.

ಈ ದುರಂತ ಸಂಭವಿಸಿದ ಬಳಿಕ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ನೂರಾರು ಜೀವಗಳನ್ನು ಉಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಹುತೇಕ ಎಲ್ಲವನ್ನೂ ತೆರವುಗೊಳಿಸಿ ಆದಷ್ಟೂ ಬೇಗ ಸಂಚಾರಕ್ಕೆ ಟ್ರ್ಯಾಕ್​ಗಳನ್ನು ಅನುವು ಮಾಡಿಕೊಡುವತ್ತ ಕಾರ್ಯಗಳು ನಡೆಯುತ್ತಿವೆ.

ಘಟನೆಗೆ ಕಾರಣ:

ತಪ್ಪಾದ ಸಿಗ್ನಲ್ ಕಾರಣದಿಂದ ರೈಲು ಅಪಘಾತವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಂನ ಪ್ರಕ್ರಿಯೆಯಲ್ಲಿ ಆದ ಬದಲಾವಣೆ ಕಾರಣ ಎಂಬುದು ಗೊತ್ತಾಗಿದೆ ಎಂದು ರೈಲ್ವೆ ಸಚಿವ ವೈಷ್ಣವ್ ಹೇಳಿದ್ದರು. ಇದೀಗ ಸಿಬಿಐ ತನಿಖೆಯಾದಲ್ಲಿ ಇನ್ನಷ್ಟು ವಿಚಾರಗಳು ಮತ್ತು ಲೋಪದೋಷಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...