Homeಮುಖಪುಟರಾಜಸ್ಥಾನ ಬಿಕ್ಕಟ್ಟು ; 200 ಮಂದಿ ಶಾಸಕರಿಗೂ ಪತ್ರ ಬರೆದ ಮುಖ್ಯಮಂತ್ರಿ ಗೆಹ್ಲೋಟ್

ರಾಜಸ್ಥಾನ ಬಿಕ್ಕಟ್ಟು ; 200 ಮಂದಿ ಶಾಸಕರಿಗೂ ಪತ್ರ ಬರೆದ ಮುಖ್ಯಮಂತ್ರಿ ಗೆಹ್ಲೋಟ್

ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಗೆಹ್ಲೋಟ್, ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

- Advertisement -
- Advertisement -

ವಿಧಾನಸಭೆ ಅಧಿವೇಶನ ಸಮೀಪಿಸುತ್ತಿರುವ ನಡುವೆಯೇ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯದ ಎಲ್ಲಾ 200 ಮಂದಿ ಶಾಸಕರಿಗೆ ಸತ್ಯದ ಪರ ನಿಲ್ಲುವಂತೆ ಹಾಗೂ ಪ್ರಜಾಪ್ರಭುತ್ವ ರಕ್ಷಿಸಬೇಕೆಂದು ಬಹಿರಂಗ ಪತ್ರ ಬರೆದಿದ್ದಾರೆ.

ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಗೆಹ್ಲೋಟ್, ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ರಕ್ಷಿಸುವಂತೆ ಎಲ್ಲರಿಗೂ ಮನವಿ ಮಾಡುತ್ತೇವೆ. ನಮ್ಮ ಮೇಲೆ ಜನರು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳಬೇಕು, ಮತ್ತು ಕೆಟ್ಟ ಸಂಪ್ರದಾಯವನ್ನು ದೂರವಿಡಬೇಕು. ಜನರ ಅಭಿಪ್ರಾಯ ಕೇಳಬೇಕು ಎಂದು ಸಲಹೆ ನೀಡಿದ್ದಾರೆ.

ನೀವು ಯಾವುದೇ ಪಕ್ಷದಲ್ಲಿರಿ, ಆದರೆ ಜನರ ಭಾವನೆಗಳನ್ನು ಗೌರವಿಸಿ. ಸತ್ಯವನ್ನು ಮನಸ್ಸಿನಲ್ಲಿಟ್ಟುಕೊಂಡು ಜನರಿಂದ ಆಯ್ಕೆಯಾದ ಸರ್ಕಾರ ಜನರಿಗೆ ಹೇಗೆ ಕೆಲಸ ಮಾಡಿಕೊಡಬೇಕೆಂಬ ಬಗ್ಗೆ ಚಿಂತನೆ ನಡೆಸಬೇಕು ಎಂಬ ಬಗ್ಗೆ ಆಲೋಚಿಸಿರಿ ಎಂದು ಮನವಿ ಮಾಡಿದ್ದಾರೆ.

2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜಸ್ಥಾನ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿರುವ ಗೆಹ್ಲೋಟ್, ಕೊರೊನಾ ಸಂದರ್ಭದಲ್ಲಿ ಸರ್ಕಾರ ಅದರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಆರ್ಥಿಕತೆಯನ್ನು ಬಲಪಡಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೊರೊನ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲೇ ನಮ್ಮ ಸ್ವಂತ ಜನರು ಪ್ರತಿಪಕ್ಷ ಬಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರ ಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಸಚಿನ್ ಪೈಲಟ್ ಸೇರಿ 19 ಕಾಂಗ್ರೆಸ್ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ವಿಧಾನಸಭೆ ಅಧಿವೇಶನ ಆಗಸ್ಟ್ 14 ರಂದು ನಡೆಯಲಿದೆ.

ಅಧಿವೇಶನದ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಹಲವು ಶಾಸಕರನ್ನು ಗುಜರಾತ್‌ನ ರೆಸಾರ್ಟ್‌ಗೆ ರವಾನಿಸುತ್ತಿದೆ.

ಗೆಹ್ಲೊಟ್ ಬರೆದಿರುವ ಬಹಿರಂಗ ಪತ್ರದಲ್ಲಿ ವಿಶ್ವಾಸಮತ ಯಾಚಿಸುವ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ. ಆದರೆ ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು ಸರ್ಕಾರ ಉರುಳಿಸಲು ಪಿತೂರಿ ನಡೆಸಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...