Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....