Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...