Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...