Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...