Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...