Homeಮುಖಪುಟಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರ ಮೇಲೆ ಅತ್ಯಾಚಾರ, ಕೊಲೆ ಮತ್ತು ರಾಷ್ಟ್ರೀಯ ಭದ್ರಾತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

13 ವರ್ಷದ ಅಪ್ತಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ದುರ್ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಾಲಕಿಯ ಶವವು ಆರೋಪಿಯೊಬ್ಬರ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮಗಳ ಕತ್ತು ಹಿಸುಕಲಾಗಿದೆ, ಕಣ್ಣು ಕೀಳಲಾಗಿದೆ, ನಾಲಿಗೆ ಕತ್ತರಿಸಲಾಗಿದೆ ಎಂದು ಬಾಲಕಿಯ ತಂದೆ ದೂರಿದ್ದಾರೆ. ಆದರೆ ಪೊಲೀಸರು ಇದನ್ನು ನಿರಾಕರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಮತ್ತು ಕತ್ತು ಹಿಸುಕಿರುವುದು ಮಾತ್ರ ದೃಢಪಟ್ಟಿದೆ, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರ ಮೇಲೆ ಅತ್ಯಾಚಾರ, ಕೊಲೆ ಮತ್ತು ರಾಷ್ಟ್ರೀಯ ಭದ್ರಾತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ನೋದಿಂದ 130 ಕಿ.ಮೀ ದೂರದಲ್ಲಿರುವ ಹಳ್ಳಿಯಲ್ಲಿ ಈ ಅಮಾನವೀಯ ಘಟನೆ ಶುಕ್ರವಾರ ನಡೆದಿದೆ. ನನ್ನ ಮಗಳು ಶುಕ್ರವಾರ ಕಾಣೆಯಾಗಿದ್ದಳು. ಊರಿಲೆಲ್ಲಾ ಹುಡುಕಿದಾಗ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಅವಳ ಕಣ್ಣುಗಳನ್ನು ಕೀಳಲಾಗಿತ್ತು, ಬಟ್ಟೆಯಿಂದ ಕತ್ತು ಹಿಸುಕಲಾಗಿತ್ತು ಎಂದು ಬಾಲಕಿಯ ತಂದೆ ದುಃಖ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಖಂಡಿಸಿದ್ದಾರೆ. ಅಂತ್ಯಂತ ನಾಚಿಕೆಗೇಡಿನ ಕೃತ್ಯ. ಹಿಂದಿನ ಸಮಾಜವಾದಿ ಪಕ್ಷಕ್ಕೂ, ಈಗಿನಿ ಬಿಜೆಪಿ ಪಕ್ಷಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಯುಪಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ ಎಂದು ಟೀಕಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಅಜಮ್‌ಘಡದ ಬನ್ಸ್‌ಗಾಂವ್‌ನಲ್ಲಿ ದಲಿತ ಮುಖ್ಯಸ್ಥ ಸತ್ಯಮೇವ್ ಜಯತೆ ಪಪ್ಪು ಅವರನ್ನು ಕ್ರೂರವಾಗಿ ಹತ್ಯೆಗೈದ ಸುದ್ದಿ ಬಹಳ ದುಃಖಕರವಾಗಿದೆ. ಯುಪಿಯಲ್ಲಿ ದಲಿತರ ಮೇಲೆ ಈ ರೀತಿಯ ದೌರ್ಜನ್ಯ ಮತ್ತು ಕೊಲೆಗಳು ಮುಂದುವರಿದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಳ್ವಿಕೆಯಲ್ಲಿ ದಲಿತ ದೌರ್ಜನ್ಯವು ಮುಗಿಲು ಮುಟ್ಟಿದೆ. ಇದು ಜಂಗಲ್ ರಾಜ್ ಅಲ್ಲದೇ ಮತ್ತೇನು? ನಮ್ಮ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ, ನಮ್ಮ ಮನೆ ಸುರಕ್ಷಿತವಾಗಿಲ್ಲ, ಎಲ್ಲೆಲ್ಲೂ ಭಯ ಆವರಿಸಿದೆ. ಆಡಳಿತ ನಡೆಸಲು ವಿಫಲವಾಗಿರುವ ಯೋಗಿ ಆದಿತ್ಯಾನಾಥ್ ರಾಜೀನಾಮೆ ನೀಡಬೇಕೆಂದು ಭೀಮ್ ಆರ್ಮಿ ಮುಖಸ್ಥ ಚಂದ್ರಶೇಖರ್ ಅಜಾದ್ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊಲೆ, ಅತ್ಯಾಚಾರಗಳು ಅವ್ಯಾಹತವಾಗಿ ಮುಂದುವರೆಯುತ್ತಲೇ ಇವೆ ಎಂಬ ಆರೋಪ ಸಾಮಾನ್ಯವಾಗಿದೆ. ಕಳೆದ ವಾರ ತಾನೇ 6 ವರ್ಷದ ಪುಟ್ಟ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಆರೋಪಿಗಳನ್ನು ಶುಕ್ರವಾರ ಬಂಧಿಸಲಾಗಿತ್ತು. ಆ ಬಾಲಕಿಗೆ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು, ಇನ್ನು ಅಪಾಯದಿಂದ ಹೊರಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...