Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...