Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...