Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...