Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...