Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...