Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...