Homeಅಂತರಾಷ್ಟ್ರೀಯನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ

ಓಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದರು.

- Advertisement -
- Advertisement -

ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ ಎಂದು ಹೇಳುವ ಮೂಲಕ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ ವಿವಾದ ಹುಟ್ಟುಹಾಕಿದ್ದಾರೆ.

ಸೋಮವಾರ ಮಾತನಾಡಿದ ಅವರು ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ಭಗವಾನ್ ರಾಮ್ ದಕ್ಷಿಣ ನೇಪಾಳದ ಥೋರಿಯಲ್ಲಿ ಜನಿಸಿದರು ಎಂದು ಹೇಳಿದ್ದಾರೆ.

ಕಠ್ಮಂಡುವಿನ ಪ್ರಧಾನ ಮಂತ್ರಿಯ ನಿವಾಸದಲ್ಲಿ ನೇಪಾಳದ ಕವಿ ಭಾನುಭಕ್ತ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಒಲಿ, ನೇಪಾಳವು “ಸಾಂಸ್ಕೃತಿಕ ಅತಿಕ್ರಮಣಕ್ಕೆ ಬಲಿಯಾಗಿದೆ ಮತ್ತು ಅದರ ಇತಿಹಾಸವನ್ನು ಬುದ್ಧಿವಂತಿಕೆಯಿಂದ ಬದಲಾಯಿಸಲಾಗಿದೆ” ಎಂದು ಹೇಳಿದರು.

ಭಾನುಭಕ್ತನು 1814 ರಲ್ಲಿ ಪಶ್ಚಿಮ ನೇಪಾಳದ ತನ್ಹು ಎಂಬಲ್ಲಿ ಜನಿಸಿದರು. ವಾಲ್ಮೀಕಿಯ ರಾಮಾಯಣವನ್ನು ನೇಪಾಳಿ ಭಾಷೆಗೆ ಅನುವಾದಿಸಿದ ಕೀರ್ತಿಗೆ ಪಾತ್ರನಾಗಿದ್ದಾರೆ. ಅವರು 1868 ರಲ್ಲಿ ನಿಧನರಾದರು.

“ನಿಜವಾದ ಅಯೋಧ್ಯೆ ಬಿರ್ಗುಂಜ್ ನ ಪಶ್ಚಿಮದಲ್ಲಿರುವ ಥೋರಿಯಲ್ಲಿದ್ದರೂ, ಭಾರತವು ತನ್ನ ಸ್ಥಳವನ್ನು ಭಗವಾನ್ ರಾಮ ಅವರ ಜನ್ಮಸ್ಥಳವೆಂದು ಹೇಳಿಕೊಂಡಿದೆ” ಎಂದು ಒಲಿ ಹೇಳಿದರು.

“ಬಿರ್ಗುಂಜ್ ಬಳಿಯ ಥೋರಿ ಎಂಬ ಸ್ಥಳವು ಭಗವಾನ್ ರಾಮ್ ಜನಿಸಿದ ನಿಜವಾದ ಅಯೋಧ್ಯೆ. ಭಾರತದಲ್ಲಿ ಅಯೋಧ್ಯೆಯ ಬಗ್ಗೆ ದೊಡ್ಡ ವಿವಾದವಿದೆ. ಆದರೆ, ನಮ್ಮ ಅಯೋಧ್ಯೆಯಲ್ಲಿ ಯಾವುದೇ ವಿವಾದಗಳಿಲ್ಲ” ಎಂದು ಪ್ರಧಾನಿ ಒಲಿ ಹೇಳಿದರೆಂದು ಪತ್ರಿಕಾ ಸಲಹೆಗಾರರಾದ ಸೂರ್ಯ ಥಾಪಾ ಹೇಳಿದ್ದಾರೆ.

“ವಾಲ್ಮೀಕಿ ಆಶ್ರಮವೂ ನೇಪಾಳದಲ್ಲಿದೆ. ಮಗನನ್ನು ಪಡೆಯಲು ರಾಜ ದಶರಥ್ ವಿಧಿಗಳನ್ನು ನೆರವೇರಿಸಿದ ಪವಿತ್ರ ಸ್ಥಳ ನೇಪಾಳದಲ್ಲಿರುವ ರಿಡಿಯಲ್ಲಿದೆ” ಎಂದು ಅವರು ಹೇಳಿದರು.

ದಶರಥ್ ನೇಪಾಳದ ಆಡಳಿತಗಾರನಾಗಿದ್ದರಿಂದ, ಅವನ ಮಗ ರಾಮ್ ಕೂಡ ನೇಪಾಳದಲ್ಲಿ ಜನಿಸಿದ್ದು ಸಹಜ ಎಂದು ಒಲಿ ವಾದಿಸಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ಅನೇಕ ವೈಜ್ಞಾನಿಕ ಆವಿಷ್ಕಾರಗಳು ಮತ್ತು ಜ್ಞಾನವು ನೇಪಾಳದಲ್ಲಿ ಹುಟ್ಟಿಕೊಂಡಿತು, ಆದರೆ ದುರದೃಷ್ಟವಶಾತ್ ಅಂತಹ ಶ್ರೀಮಂತ ಸಂಪ್ರದಾಯವನ್ನು ನಂತರ ಮುಂದುವರಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದ್ದಾರೆ.

ಒಲಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋಂಕರ್ ಶಾಸ್ತ್ರಿ, ಭಾರತದಲ್ಲಿಯೂ ಸಹ ಎಡಪಕ್ಷಗಳು ಜನರ ನಂಬಿಕೆಯೊಂದಿಗೆ ಆಟ ಆಡಿದವು. ನೇಪಾಳದ ಕಮ್ಯುನಿಸ್ಟರನ್ನು ಅಲ್ಲಿನ ಜನಸಾಮಾನ್ಯರು ಇಲ್ಲಿನ ರೀತಿಯಲ್ಲಿಯೇ ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ. “ಭಗವಾನ್ ರಾಮ ನಮಗೆ ನಂಬಿಕೆಯ ವಿಷಯ. ಇದರೊಂದಿಗೆ ಆಟವಾಡಲು ಜನರು ಯಾರಿಗೂ ಅವಕಾಶ ನೀಡುವುದಿಲ್ಲ. ಅದು  ನೇಪಾಳದ ಪ್ರಧಾನ ಮಂತ್ರಿಯಾಗಲಿ ಅಥವಾ ಯಾರೇ ಆಗಲಿ” ಎಂದು ಅವರು ನವದೆಹಲಿಯಲ್ಲಿ ಹೇಳಿದ್ದಾರೆ.

ಒಲಿ ಆರೋಪಗಳನ್ನು ನೇಪಾಳದ ಮಾಜಿ ಪ್ರಧಾನಿ ‘ಪ್ರಚಂಡ’ ಸೇರಿದಂತೆ ಹಿರಿಯ ಎನ್‌ಸಿಪಿ ನಾಯಕರು ಟೀಕಿಸಿದ್ದಾರೆ. ಅವರ ಇತ್ತೀಚಿನ ಭಾರತ ವಿರೋಧಿ ಹೇಳಿಕೆಗಳು “ರಾಜಕೀಯವಾಗಿ ಸರಿಯಾಗಿಲ್ಲ” ಎಂದು ವಿರೋಧ ಪಕ್ಷಗಳು ಹೇಳಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೇ 8 ರಂದು ಉತ್ತರಾಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಅನ್ನು ಸಂಪರ್ಕಿಸುವ 80 ಕಿ.ಮೀ ಉದ್ದದ ಕಾರ್ಯತಂತ್ರದ ನಿರ್ಣಾಯಕ ರಸ್ತೆಯನ್ನು ಉದ್ಘಾಟಿಸಿದ ನಂತರ ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳು ಬಿಗಡಾಯಿಸಿವೆ.


ಇದನ್ನೂ ಓದಿ: ಭಾರತೀಯ ಭೂಪ್ರದೇಶವನ್ನು ಒಳಗೊಂಡ ನಕ್ಷೆ ಅಂಗೀಕರಿಸಿದ ನೇಪಾಳ

ಗಡಿ ವಿವಾದ; ಭಾರತ ಅತಿಕ್ರಮಿಸಿರುವ ಪ್ರದೇಶವನ್ನು ಹಿಂತಿರುಗಿಸಬೇಕು: ನೇಪಾಳ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...